AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ

ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ. ಇದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಈ ಪಾಲಿಕೆ ಎಷ್ಟು ದೊಡ್ಡದಿದೆಯೋ ಅಷ್ಟೇ ಪಾಲಿಕೆಯಲ್ಲಿ ನಡೆಯುವ ಅವ್ಯವಹಾರ, ಭ್ರಷ್ಟಾಚಾರದ ವಿಷಯವಾಗಿ ಪಾಲಿಕೆ ಸದಾ ಸುದ್ದಿಯಲ್ಲಿರತ್ತೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾದಿಗಳನ್ನು ಎತ್ತಂಗಡಿ ಮಾಡಲಾಗಿದೆ.

ಹುಬ್ಬಳ್ಳಿ: ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ
ಹು-ಧಾ ಮಾಹಾನಗರ ಪಾಲಿಕೆ
ಶಿವಕುಮಾರ್ ಪತ್ತಾರ್
| Edited By: |

Updated on: Oct 27, 2023 | 10:13 PM

Share

ಹುಬ್ಬಳ್ಳಿ, ಅಕ್ಟೋಬರ್​​​ 27: ಅದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಆ ಪಾಲಿಕೆಯಲ್ಲಿ ಹಗರಣಕ್ಕೇನೂ ಕಡಿಮೆ ಇಲ್ಲ. ಪಾಲಿಕೆಯಲ್ಲಿ ಖಾಸಿಲ್ಲದೆ ಯಾವದೇ ಕೆಲಸ ಆಗೋದಿಲ್ಲ ಅನ್ನೋ ಅಲಿಖಿತ ನಿಯಮವೂ ಇದೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾರಿಯಳನ್ನು ಎತ್ತಂಗಡಿ (transfer) ಮಾಡಲಾಗಿದೆ. ಆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು. ಪಾಲಿಕೆ ಆಯುಕ್ತರು ಅಧಿಕಾರಿಗಳಿಗೆ ನೋಟಿಸ್ ಕೊಟ್ಟರು ಬದಲಾಗಿರಲಿಲ್ಲ. ಹೀಗಾಗಿ ಪಾಲಿಕೆ ಆಯುಕ್ತರು ಆ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ನಾಲ್ವರಿಗೆ ಗೇಟ್ ಪಾಸ್ ನೀಡಿದ್ದಾರೆ. ಹಾಗಾದರೆ ಎತ್ತಂಗಡಿ ಆದ ಅಧಿಕಾರಿಗಳು ಯಾರೂ, ಯಾವ ಇಲಾಖೆ ಇಲ್ಲಿದೆ ಮಾಹಿತಿ.

ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ. ಇದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಈ ಪಾಲಿಕೆ ಎಷ್ಟು ದೊಡ್ಡದಿದೆಯೋ ಅಷ್ಟೇ ಪಾಲಿಕೆಯಲ್ಲಿ ನಡೆಯುವ ಅವ್ಯವಹಾರ, ಭ್ರಷ್ಟಾಚಾರದ ವಿಷಯವಾಗಿ ಪಾಲಿಕೆ ಸದಾ ಸುದ್ದಿಯಲ್ಲಿರತ್ತೆ. ಇದೀಗ ಪಾಲಿಕೆ ಮತ್ತೊಂದು ವಿಷಯವಾಗಿ ಸುದ್ದಿಯಾಗಿದೆ. ಹೌದು ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾದಿಗಳನ್ನು ಎತ್ತಂಗಡಿ ಮಾಡಲಾಗಿದೆ. ಪಾಲಿಕೆಯ ನಗರ ಯೋಜನಾ ಘಟಕದ ನಾಲ್ವರು ಅಧಿಕಾರಿಗಳನ್ನು ಪಾಲಿಕೆ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ: ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತೆ ಬಾಣಂತಿಯರಿಗೆ ಸಮಸ್ಯೆ: ಹೆರಿಗೆಗೆ ಹಾಕಿದ್ದ ಸ್ಟಿಚ್ ಬಿಚ್ಚಿ ಯಮಯಾತನೆ

ಪಾಲಿಕೆಯ ನಗರ ಯೋಜನಾ ಘಟಕದ ಅಧಿಕಾರಿಗಳಾದ ಭಾಗ್ಯಶ್ರೀ ಎಮ್.ಎನ್.ಲತಾರಾಣಿ ಜಿಎಮ್.ಬಸವಂತಿ ಪಾಟೀಲ್, ವಿಲಾಸ್, ಮಂಜುಳಾ ನಾಟೇಕರ್ ಸೇರಿ 7 ಜನ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ 4 ಯೋಜನಾ ಘಟಕದ ಅಧಿಕಾರಿಗಳೇ. ನಾಲ್ವರನ್ನು ವರ್ಗಾವಣೆ ಮಾಡೋಕೆ ಅಸಲಿ ಕಾರಣ ಭ್ರಷ್ಟಾಚಾರ.

ಲಂಚ ಕೊಡದೆ ಹೋದರೆ ಯಾವದೇ ಪ್ರಮಾಣ ಪತ್ರ ನೀಡದೆ ಸತಾಯಿಸುತ್ತಿದ್ದರು. ಅಲ್ಲದೇ ಕೆಲವರ ಕೈಗೊಂಬೆಯಾಗಿ ಅಧಿಕಾರಿಗಳು ವರ್ತನೆ ಮಾಡ್ತಿದ್ದರಂತೆ. ಕಟ್ಟಡ ಪರವಾನಿಗೆ, ಮುಕ್ತಾಯ ಪ್ರಮಾಣ ಪತ್ರದಲ್ಲಿ ಅವ್ಯವಹಾರ ಮಾಡಿದ್ದಾರೆಂದು ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು. ಸ್ವತಃ ಪಾಲಿಕೆ ವಿಪಕ್ಷ ನಾಯಕಿ ನಗರ ಯೋಜನಾ ಘಟಕದ ಅಧಿಕಾರಿಗಳ ವಿರುದ್ದ ಗಂಭೀರ ಆರೋಪ‌ ಮಾಡಿದ್ದರು. ಇದೀಗ ಯೋಜನಾ ಘಟಕದ ನಾಲ್ವರನ್ನು ಎತ್ತಂಗಡಿ‌ ಮಾಡಲಾಗಿದೆ.

ಹು-ಧಾ ಮಾಹನಗರ ಪಾಲಿಕೆಯಲ್ಲಿರೋ ನಗರ ಯೋಜನಾ ಘಟಕದಲ್ಲಿ ಈ ಅಧಿಕಾರಿಗಳು‌ಕಳೆದ ಕೆಲ ವರ್ಷಗಳಿಂದ‌ ಇಲ್ಲೆ ಬೀಡು ಬಿಟ್ಟಿದ್ದರು. ರಾಜಕಾರಣಿಗಳಿಗೆ ಒತ್ತಡ ಹಾಕಿ ಒಂದೆ ಇಲಾಖೆಯಲ್ಲಿ ಕೆಲಸ‌ ಮಾಡುತ್ತಿದ್ದರು. ಇಂತಹವರ ವಿರುದ್ದ ಕೆಲವರು ಲೋಕಾಯುಕ್ತಕ್ಕೆ ದೂರು‌ ಸಲ್ಲಿಕೆ ಮಾಡಿದ್ದರು. ಕೆಲವರು ಮೌಖಿಕವಾಗಿ ಈಶ್ವರ ಉಳ್ಳಾಗಡ್ಡಿ ಅವರ ಗಮನಕ್ಕೂ ಕೂಡಾ ತಂದಿದ್ದರು.

ಇದನ್ನೂ ಓದಿ: ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಕೆಲ ದಿನ ಆಯುಕ್ತರು ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ತಿದ್ದಿ ಕೊಳ್ಳುವಂತೆ ವಾರ್ನ್ ಮಾಡಿದ್ದರು. ಆದರೆ ಅಧಿಕಾರಿಗಳು ತಮ್ಮ ಹಳೇ ಚಾಳಿ ಬಿಡದೆ ಮತ್ತೆ ಅದೇ ಚಾಳಿ‌‌ ಮುಂದುವರೆಸಿದ್ದರು. ಹೀಗಾಗಿ ಪಾಲಿಕೆ ಆಯುಕ್ತರು ಇದೀಗ ಹುಬ್ಬಳ್ಳಿ ಪಾಲಿಕೆ ನಗರ ಯೋಜನಾ ಘಟಕದಿಂದ ನಾಲ್ವರಿಗೆ ಗೇಟ್ ಪಾಸ್ ಕೊಟ್ಟಿದ್ದಾರೆ. ಅಧಿಕಾರಿಗಳ ಲಂಚದಿಂದ ಬೇಸತ್ತ ಜನರಿಗೆ ಇದು ಖುಷಿಯ ಸಂಗತಿಯಾಗಿದ್ದು, ಕೇವಲ ಒಂದು ಇಲಾಖೆ ಅಲ್ಲ, ಎಲ್ಲ ಇಲಾಖೆಯಲ್ಲಿ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಕೆಲವರು ಪ್ರಮೋಷನ್ ಆದರೂ ಕೂಡಾ ಹೋಗಿಲ್ಲ ಅಂತವರ ಮೇಲೂ ಆಯುಕ್ತರು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ.

ಕಳೆದ ಕೆಲ ವರ್ಷಗಳಿಂದ ಒಂದೇ ಇಲಾಖೆಯಲ್ಲಿ ಬೀಡು ಬಿಟ್ಟಿದ್ದ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಖಾಸು ಕೊಟ್ಟರೆ ಮಾತ್ರ ಕೆಲಸ ಅನ್ನೋ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರು ಬಿಸಿ ಮುಟ್ಟಿಸಿದ್ದು, ಇದು ಕೇವಲ ಒಂದು‌‌ ಇಲಾಖೆಗೆ ಸೀಮಿತವಾಗದೆ, ಬಹುತೇಕ ಪಾಲಿಕೆಯ ಎಲ್ಲ‌ ಇಲಾಖೆಯಲ್ಲಿ ಲಂಚ ಕೊಟ್ಟರೆ ಕೆಲಸ ಮಾಡುವ ಅಧಿಕಾರಿಗಳೇ ಹೆಚ್ಚು. ಅಂತಹವರ ವಿರುದ್ದವೂ ಆಯುಕ್ತರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ