AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ

ಧಾರವಾಡದ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ನೋಂದಣಿ ಸಂಖ್ಯೆ ಬದಲಿಗೆ ‘ನನ್ನಾಕಿ’ ಎಂದು ಬರೆದಿದ್ದಾರೆ. ಇದನ್ನು ಗಮನಿಸಿದ ಧಾರವಾಡ ಪೊಲೀಸರು ದ್ವಿಚಕ್ರ ವಾಹನ ವಶಪಡಿಸಿಕೊಂಡು ನೋಟಿಸ್ ಜಾರಿ ಮಾಡಿದ್ದಾರೆ. ನಂತರ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ ಜಾಗೃತಿ ಸಂದೇಶ ಗಮನ ಸೆಳೆದಿದೆ.

ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ
ನಂಬರ್ ಪ್ಲೇಟ್ ಜಾಗದಲ್ಲಿ ನನ್ನಾಕಿ ಎಂದು ಬರೆದಿರುವುದು ಮತ್ತು ನೂತನ ನಂಬರ್ ಪ್ಲೇಟ್ ಅಳವಡಿಸಿಕೊಟ್ಟ ಪೊಲೀಸರುImage Credit source: Facebook
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jul 08, 2023 | 3:51 PM

Share

ಹುಬ್ಬಳ್ಳಿ: ವಾಹನಗಳ ನಂಬರ್ ಪ್ಲೇಟ್​ ಮೇಲೆ ಏನೇನೋ ಬರೆಸುವವರು ಅನೇಕರು ಇರುತ್ತಾರೆ. ನಿಯಮಗಳ ಪ್ರಕಾರ ಆ ರೀತಿ ಬರೆದುಹಾಕುವಂತಿಲ್ಲ. ಆದರೆ, ಧಾರವಾಡದಲ್ಲೊಬ್ಬರು (Dharawad) ವ್ಯಕ್ತಿ ದ್ವಿಚಕ್ರ ವಾಹನದ ಹಿಂಭಾಗದಲ್ಲಿ ನೋಂದಣಿ ಸಂಖ್ಯೆ ಬದಲಿಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಹಾಕಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರಿಗೆ ಹುಬ್ಬಳ್ಳಿ ಧಾರವಾಡ ಪೊಲೀಸರು ನೋಟಿಸ್ ಅನ್ನೂ ನೀಡಿದ್ದಾರೆ. ವಿಷಯ ಅದಲ್ಲ. ನಂಬರ್ ಪ್ಲೇಟ್ ಮೇಲೆ ಏನೇನೋ ಬರೆಯಬೇಡಿ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸಲು ಅನುಸರಿಸಿರುವ ವಿಭಿನ್ನ ವಿಧಾನ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಧಾರವಾಡದ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ನೋಂದಣಿ ಸಂಖ್ಯೆ ಬದಲಿಗೆ ‘ನನ್ನಾಕಿ’ ಎಂದು ಬರೆದಿದ್ದಾರೆ. ಇದನ್ನು ಗಮನಿಸಿದ ಧಾರವಾಡ ಪೊಲೀಸರು ದ್ವಿಚಕ್ರ ವಾಹನ ವಶಪಡಿಸಿಕೊಂಡು ನೋಟಿಸ್ ಜಾರಿ ಮಾಡಿದ್ದಾರೆ.

ನಂತರ ದ್ವಿಚಕ್ರ ವಾಹನ​​​ ಹಾಗೂ ಆರೋಪಿಯ ಫೋಟೊವನ್ನು ಹುಬ್ಬಳ್ಳಿ ಧಾರವಾಡ ಸಿಟಿ ಪೊಲೀಸ್​ ಫೇಸ್​​ಬುಕ್ ಪೇಜ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೈಕ್​ ನಂಬರ್ ಪ್ಲೇಟ್​​ ಜಾಗದಲ್ಲಿರುವ ಬರಹವನ್ನು ಅಳಿಸಿ ನೋಂದಣಿ ಸಂಖ್ಯೆ ಹಾಕಿಸಿರುವ ಫೋಟೊವನ್ನೂ ಪೋಸ್ಟ್ ಮಾಡಿದ್ದು, ಜತೆಗೆ ಬರಹವೊಂದನ್ನೂ ಪೋಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ಧಾರವಾಡ ಸಿಟಿ ಪೊಲೀಸ್ ಫೇಸ್​​ಬುಕ್​ ಪೇಜ್​​ನಲ್ಲಿ ಬರೆದಿರುವ ಬರಹ ಹೀಗಿದೆ;

‘ನನ್ನಾಕಿ… ಹೃದಯದಲ್ಲಿರಲಿ… ಗಾಡಿ ನಂಬರ್ ಪ್ಲೇಟ್ ಮೇಲಲ್ಲ.. ಡಿಫೆಕ್ಟಿವ್ ನಂಬರ್ ಪ್ಲೇಟ್ ಹಾಕಿ ಸಂಚರಿಸುತ್ತಿದ್ದ ಬೈಕ್ ಅನ್ನು ಧಾರವಾಡ ಸಂಚಾರ ಪೊಲೀಸರು ವಶಪಡಿಸಿಕೊಂಡು ಕೋರ್ಟ್ ನೋಟಿಸ್ ಜಾರಿ ಮಾಡಿ ಕಾನೂನು ಕ್ರಮ ಜರುಗಿಸಿದ್ದು, ಬೈಕ್​​ಗೆ ನಂಬರ್ ಪ್ಲೇಟ್ ಹಾಕಿಸಿ ಸವಾರನಿಗೆ ಕಾನೂನು ತಿಳುವಳಿಕೆ ಹೇಳಲಾಗಿರುತ್ತದೆ’ ಎಂದು ಫೇಸ್​​ಬುಕ್​ ಪೇಜ್​ನಲ್ಲಿ ಬರೆಯಲಾಗಿದೆ.

ಸದ್ಯ ಈ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ