AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ

ಧಾರವಾಡದ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ನೋಂದಣಿ ಸಂಖ್ಯೆ ಬದಲಿಗೆ ‘ನನ್ನಾಕಿ’ ಎಂದು ಬರೆದಿದ್ದಾರೆ. ಇದನ್ನು ಗಮನಿಸಿದ ಧಾರವಾಡ ಪೊಲೀಸರು ದ್ವಿಚಕ್ರ ವಾಹನ ವಶಪಡಿಸಿಕೊಂಡು ನೋಟಿಸ್ ಜಾರಿ ಮಾಡಿದ್ದಾರೆ. ನಂತರ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ ಜಾಗೃತಿ ಸಂದೇಶ ಗಮನ ಸೆಳೆದಿದೆ.

ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ
ನಂಬರ್ ಪ್ಲೇಟ್ ಜಾಗದಲ್ಲಿ ನನ್ನಾಕಿ ಎಂದು ಬರೆದಿರುವುದು ಮತ್ತು ನೂತನ ನಂಬರ್ ಪ್ಲೇಟ್ ಅಳವಡಿಸಿಕೊಟ್ಟ ಪೊಲೀಸರುImage Credit source: Facebook
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Ganapathi Sharma

Updated on: Jul 08, 2023 | 3:51 PM

ಹುಬ್ಬಳ್ಳಿ: ವಾಹನಗಳ ನಂಬರ್ ಪ್ಲೇಟ್​ ಮೇಲೆ ಏನೇನೋ ಬರೆಸುವವರು ಅನೇಕರು ಇರುತ್ತಾರೆ. ನಿಯಮಗಳ ಪ್ರಕಾರ ಆ ರೀತಿ ಬರೆದುಹಾಕುವಂತಿಲ್ಲ. ಆದರೆ, ಧಾರವಾಡದಲ್ಲೊಬ್ಬರು (Dharawad) ವ್ಯಕ್ತಿ ದ್ವಿಚಕ್ರ ವಾಹನದ ಹಿಂಭಾಗದಲ್ಲಿ ನೋಂದಣಿ ಸಂಖ್ಯೆ ಬದಲಿಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಹಾಕಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರಿಗೆ ಹುಬ್ಬಳ್ಳಿ ಧಾರವಾಡ ಪೊಲೀಸರು ನೋಟಿಸ್ ಅನ್ನೂ ನೀಡಿದ್ದಾರೆ. ವಿಷಯ ಅದಲ್ಲ. ನಂಬರ್ ಪ್ಲೇಟ್ ಮೇಲೆ ಏನೇನೋ ಬರೆಯಬೇಡಿ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸಲು ಅನುಸರಿಸಿರುವ ವಿಭಿನ್ನ ವಿಧಾನ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಧಾರವಾಡದ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ನೋಂದಣಿ ಸಂಖ್ಯೆ ಬದಲಿಗೆ ‘ನನ್ನಾಕಿ’ ಎಂದು ಬರೆದಿದ್ದಾರೆ. ಇದನ್ನು ಗಮನಿಸಿದ ಧಾರವಾಡ ಪೊಲೀಸರು ದ್ವಿಚಕ್ರ ವಾಹನ ವಶಪಡಿಸಿಕೊಂಡು ನೋಟಿಸ್ ಜಾರಿ ಮಾಡಿದ್ದಾರೆ.

ನಂತರ ದ್ವಿಚಕ್ರ ವಾಹನ​​​ ಹಾಗೂ ಆರೋಪಿಯ ಫೋಟೊವನ್ನು ಹುಬ್ಬಳ್ಳಿ ಧಾರವಾಡ ಸಿಟಿ ಪೊಲೀಸ್​ ಫೇಸ್​​ಬುಕ್ ಪೇಜ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೈಕ್​ ನಂಬರ್ ಪ್ಲೇಟ್​​ ಜಾಗದಲ್ಲಿರುವ ಬರಹವನ್ನು ಅಳಿಸಿ ನೋಂದಣಿ ಸಂಖ್ಯೆ ಹಾಕಿಸಿರುವ ಫೋಟೊವನ್ನೂ ಪೋಸ್ಟ್ ಮಾಡಿದ್ದು, ಜತೆಗೆ ಬರಹವೊಂದನ್ನೂ ಪೋಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ಧಾರವಾಡ ಸಿಟಿ ಪೊಲೀಸ್ ಫೇಸ್​​ಬುಕ್​ ಪೇಜ್​​ನಲ್ಲಿ ಬರೆದಿರುವ ಬರಹ ಹೀಗಿದೆ;

‘ನನ್ನಾಕಿ… ಹೃದಯದಲ್ಲಿರಲಿ… ಗಾಡಿ ನಂಬರ್ ಪ್ಲೇಟ್ ಮೇಲಲ್ಲ.. ಡಿಫೆಕ್ಟಿವ್ ನಂಬರ್ ಪ್ಲೇಟ್ ಹಾಕಿ ಸಂಚರಿಸುತ್ತಿದ್ದ ಬೈಕ್ ಅನ್ನು ಧಾರವಾಡ ಸಂಚಾರ ಪೊಲೀಸರು ವಶಪಡಿಸಿಕೊಂಡು ಕೋರ್ಟ್ ನೋಟಿಸ್ ಜಾರಿ ಮಾಡಿ ಕಾನೂನು ಕ್ರಮ ಜರುಗಿಸಿದ್ದು, ಬೈಕ್​​ಗೆ ನಂಬರ್ ಪ್ಲೇಟ್ ಹಾಕಿಸಿ ಸವಾರನಿಗೆ ಕಾನೂನು ತಿಳುವಳಿಕೆ ಹೇಳಲಾಗಿರುತ್ತದೆ’ ಎಂದು ಫೇಸ್​​ಬುಕ್​ ಪೇಜ್​ನಲ್ಲಿ ಬರೆಯಲಾಗಿದೆ.

ಸದ್ಯ ಈ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ