ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ

ಧಾರವಾಡದ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ನೋಂದಣಿ ಸಂಖ್ಯೆ ಬದಲಿಗೆ ‘ನನ್ನಾಕಿ’ ಎಂದು ಬರೆದಿದ್ದಾರೆ. ಇದನ್ನು ಗಮನಿಸಿದ ಧಾರವಾಡ ಪೊಲೀಸರು ದ್ವಿಚಕ್ರ ವಾಹನ ವಶಪಡಿಸಿಕೊಂಡು ನೋಟಿಸ್ ಜಾರಿ ಮಾಡಿದ್ದಾರೆ. ನಂತರ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ ಜಾಗೃತಿ ಸಂದೇಶ ಗಮನ ಸೆಳೆದಿದೆ.

ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ
ನಂಬರ್ ಪ್ಲೇಟ್ ಜಾಗದಲ್ಲಿ ನನ್ನಾಕಿ ಎಂದು ಬರೆದಿರುವುದು ಮತ್ತು ನೂತನ ನಂಬರ್ ಪ್ಲೇಟ್ ಅಳವಡಿಸಿಕೊಟ್ಟ ಪೊಲೀಸರು
Image Credit source: Facebook
Edited By:

Updated on: Jul 08, 2023 | 3:51 PM

ಹುಬ್ಬಳ್ಳಿ: ವಾಹನಗಳ ನಂಬರ್ ಪ್ಲೇಟ್​ ಮೇಲೆ ಏನೇನೋ ಬರೆಸುವವರು ಅನೇಕರು ಇರುತ್ತಾರೆ. ನಿಯಮಗಳ ಪ್ರಕಾರ ಆ ರೀತಿ ಬರೆದುಹಾಕುವಂತಿಲ್ಲ. ಆದರೆ, ಧಾರವಾಡದಲ್ಲೊಬ್ಬರು (Dharawad) ವ್ಯಕ್ತಿ ದ್ವಿಚಕ್ರ ವಾಹನದ ಹಿಂಭಾಗದಲ್ಲಿ ನೋಂದಣಿ ಸಂಖ್ಯೆ ಬದಲಿಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಹಾಕಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರಿಗೆ ಹುಬ್ಬಳ್ಳಿ ಧಾರವಾಡ ಪೊಲೀಸರು ನೋಟಿಸ್ ಅನ್ನೂ ನೀಡಿದ್ದಾರೆ. ವಿಷಯ ಅದಲ್ಲ. ನಂಬರ್ ಪ್ಲೇಟ್ ಮೇಲೆ ಏನೇನೋ ಬರೆಯಬೇಡಿ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸಲು ಅನುಸರಿಸಿರುವ ವಿಭಿನ್ನ ವಿಧಾನ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಧಾರವಾಡದ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ನೋಂದಣಿ ಸಂಖ್ಯೆ ಬದಲಿಗೆ ‘ನನ್ನಾಕಿ’ ಎಂದು ಬರೆದಿದ್ದಾರೆ. ಇದನ್ನು ಗಮನಿಸಿದ ಧಾರವಾಡ ಪೊಲೀಸರು ದ್ವಿಚಕ್ರ ವಾಹನ ವಶಪಡಿಸಿಕೊಂಡು ನೋಟಿಸ್ ಜಾರಿ ಮಾಡಿದ್ದಾರೆ.

ನಂತರ ದ್ವಿಚಕ್ರ ವಾಹನ​​​ ಹಾಗೂ ಆರೋಪಿಯ ಫೋಟೊವನ್ನು ಹುಬ್ಬಳ್ಳಿ ಧಾರವಾಡ ಸಿಟಿ ಪೊಲೀಸ್​ ಫೇಸ್​​ಬುಕ್ ಪೇಜ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೈಕ್​ ನಂಬರ್ ಪ್ಲೇಟ್​​ ಜಾಗದಲ್ಲಿರುವ ಬರಹವನ್ನು ಅಳಿಸಿ ನೋಂದಣಿ ಸಂಖ್ಯೆ ಹಾಕಿಸಿರುವ ಫೋಟೊವನ್ನೂ ಪೋಸ್ಟ್ ಮಾಡಿದ್ದು, ಜತೆಗೆ ಬರಹವೊಂದನ್ನೂ ಪೋಸ್ಟ್ ಮಾಡಿದ್ದಾರೆ.

ಹುಬ್ಬಳ್ಳಿ ಧಾರವಾಡ ಸಿಟಿ ಪೊಲೀಸ್ ಫೇಸ್​​ಬುಕ್​ ಪೇಜ್​​ನಲ್ಲಿ ಬರೆದಿರುವ ಬರಹ ಹೀಗಿದೆ;

‘ನನ್ನಾಕಿ…
ಹೃದಯದಲ್ಲಿರಲಿ…
ಗಾಡಿ ನಂಬರ್ ಪ್ಲೇಟ್ ಮೇಲಲ್ಲ..
ಡಿಫೆಕ್ಟಿವ್ ನಂಬರ್ ಪ್ಲೇಟ್ ಹಾಕಿ ಸಂಚರಿಸುತ್ತಿದ್ದ ಬೈಕ್ ಅನ್ನು ಧಾರವಾಡ ಸಂಚಾರ ಪೊಲೀಸರು ವಶಪಡಿಸಿಕೊಂಡು ಕೋರ್ಟ್ ನೋಟಿಸ್ ಜಾರಿ ಮಾಡಿ ಕಾನೂನು ಕ್ರಮ ಜರುಗಿಸಿದ್ದು, ಬೈಕ್​​ಗೆ ನಂಬರ್ ಪ್ಲೇಟ್ ಹಾಕಿಸಿ ಸವಾರನಿಗೆ ಕಾನೂನು ತಿಳುವಳಿಕೆ ಹೇಳಲಾಗಿರುತ್ತದೆ’ ಎಂದು ಫೇಸ್​​ಬುಕ್​ ಪೇಜ್​ನಲ್ಲಿ ಬರೆಯಲಾಗಿದೆ.

ಸದ್ಯ ಈ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us