AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubli-Dharwad: ಬಸ್​​ನಂತೆ ಅವಳಿನಗರ ಮಧ್ಯೆ ಸಂಚರಿಸಲಿದೆ ಲಘು ರೈಲು, ದೇಶದಲ್ಲೇ ಮೊದಲ ಯೋಜನೆ

ಹುಬ್ಬಳ್ಳಿ-ಧಾರವಾಡ ಮಧ್ಯೆ ಲಘು ರೈಲು ಸಾರಿಗೆಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಅಂದುಕೊಂಡಂತೆ ಎಲ್ಲವೂ ನಡೆದು ಯೋಜನೆ ಕಾರ್ಯರೂಪಕ್ಕೆ ಬಂದರೇ ದೇಶದಲ್ಲೇ ಮೊದಲ ಬಾರಿಗೆ ಲಘು ರೈಲು ಸಾರಿಗೆ ಅವಳಿನಗರದಲ್ಲಿ ಸಂಚರಿಸಲಿದೆ.

Hubli-Dharwad: ಬಸ್​​ನಂತೆ ಅವಳಿನಗರ ಮಧ್ಯೆ ಸಂಚರಿಸಲಿದೆ ಲಘು ರೈಲು, ದೇಶದಲ್ಲೇ ಮೊದಲ ಯೋಜನೆ
ಲಘು ರೈಲು ಸಾರಿಗೆ (ಸಾಂದರ್ಭಿಕ ಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jul 18, 2023 | 3:03 PM

Share

ಹುಬ್ಬಳ್ಳಿ: ರಾಜ್ಯ ರಾಜಧಾನಿ ಬೆಂಗಳೂರು (Bengaluru) ನಂತರ ರಾಜ್ಯದ ಎರಡನೇ ಅತಿ ಪ್ರಮುಖ ನಗರ ಹುಬ್ಬಳ್ಳಿ-ಧಾರವಾಡ (Hubli-Dharwad) ಮಹಾನಗರ. ಅವಳಿ ನಗರದಲ್ಲಿ ಜನಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ವಾಹನಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಟ್ರಾಫಿಕ್​ ಕಿರಿಕಿರಿ ಉದ್ಭವಿಸುತ್ತಿದ್ದೆ. ಹೀಗಾಗಿ ಟ್ರಾಫಿಕ್​ ಸಮಸ್ಯೆ ಕಡಿಮೆ ಮಾಡಲು ಈಗಾಗಲೆ ಬಿಆರ್​ಟಿಎಸ್ (BRTS)​ ಬಸ್​ಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ ಬಿಆರ್​ಟಿಎಸ್​ ಬಸ್​ಗಳ ಜೊತೆಗೆ ಲಘು ರೈಲು ಸಾರಿಗೆಯನ್ನು (Light Rail Transit) ಪರಿಚಯಿಸಲು ಸರ್ಕಾರ ಮುಂದಾಗಿದೆ. ಅಂದುಕೊಂಡಂತೆ ಎಲ್ಲವೂ ನಡೆದು ಯೋಜನೆ ಕಾರ್ಯರೂಪಕ್ಕೆ ಬಂದರೇ ದೇಶದಲ್ಲೇ ಮೊದಲ ಬಾರಿಗೆ ಲಘು ರೈಲು ಸಾರಿಗೆ ಅವಳಿನಗರದಲ್ಲಿ ಸಂಚರಿಸಲಿದೆ.

ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಮಾತನಾಡಿ ಲಘು ರೈಲು ಸಾರಿಗೆಯ ಆರಂಭಿಕ ಯೋಜನೆಗೆ ಕಾರ್ಯತಂತ್ರ ರೂಪಿಸಲಾಗಿದೆ. ಇನ್ನೂ ನಾಲ್ಕು ವಾರಗಳಲ್ಲಿ ಪ್ರಸ್ತಾವನೆ ಸಿದ್ದವಾಗಲಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಪ್ರಸ್ತಾವನೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೇ ಒಂದೂವರೆ ವರ್ಷದಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎಂದರು.

ಲಘು ರೈಲು ಸಾರಿಗೆ ಜಾರಿಯಾದಾಗ ಬಿಆರ್‌ಟಿಎಸ್ ಅನ್ನು ನಿಲ್ಲಿಸುವುದಿಲ್ಲ. ಮುಂದಿನ 10 ವರ್ಷಗಳಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ವೇಗವಾಗಿ ಬೆಳೆಯಲಿದೆ. ಬೆಂಗಳೂರು ನಂತರ ಜನರು ವಾಸ್ತವ್ಯಕ್ಕೆ ಮತ್ತು ಕೈಗಾರಿಕೆಗಳಿಗೆ ಈ ನಗರವನ್ನು ಆಯ್ಕೆ ಮಾಡಿಕೊಳ್ಳುತ್ತವೆ. ಆದ್ದರಿಂದ ಮುಂದಿನ 10-20 ವರ್ಷಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವಳಿ ನಗರಗಳನ್ನು ಅಭಿವೃದ್ಧಿಪಡಿಸಲು ಯೋಚಿಸಬೇಕು. ಅದಕ್ಕೆ ಅನುಗುಣವಾಗಿ ಯೋಜನೆ ರೂಪಿಸಬೇಕು ಎಂಬ ವರದಿ ಸಹ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ

ಯೋಜನೆಗೆ ಬೆಂಗಳೂರು ಅಥವಾ ಮುಂಬಯಿ ಏರ್​ಪೋರ್ಟ್ ರೈಲ್ ಲಿಂಕ್ (ಬಿಎಆರ್​ಎಲ್) ನ್ನು ನೋಡಲ್ ಏಜೆನ್ಸಿಯನ್ನಾಗಿ ಮಾಡಲು ಚಿಂತನೆ ಇದ್ದು , ಪ್ರಸ್ತಾವಿತ 22 ಕೀಲೋ ಎಲಿವೇಟೆಡ್ ಯೋಜನೆ ಆಗಬಹುದು ಎನ್ನಲಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿನಗರ ಸೇರಿದಂತೆ ಹೊರ ವರ್ತುಲ ರಸ್ತೆಯ ಇನ್ನಷ್ಟು ಭಾಗವನ್ನು ಬಿಆರ್​ಟಿಎಸ್ ಯೋಜನಾ ವ್ಯಾಪ್ತಿಯಲ್ಲಿ ಪೂರ್ಣಗೊಳಿಸಿದರೆ ಈ ಯೋಜನೆಗೆ ಹೆಚ್ಚು ಮಹತ್ವ ಬರುತ್ತದೆ ಎಂದು ಹೇಳಿದರು.

ಈಗಾಗಲೇ ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿಯಿಂದ ಮುಕ್ತಿ ಕೊಡಲು ರೂಪಿಸಲಾಗಿರುವ ಲಘು ರೈಲು ಸಾರಿಗೆ ವ್ಯವಸ್ಥೆ ಯೋಜನೆಯನ್ನು ಬೆಂಗಳೂರು ಮೆಟ್ರೋ ನಿಗಮಕ್ಕೆ ನೀಡಲಾಗಿದೆ. ಅದೇ ಮಾದರಿಯನ್ನು ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಅಳವಡಿಕೆ ಮಾಡುವ ಒಂದು ಹಂತದ‌ ಚಿಂತನೆ ಸಹ ಆಗಿದೆ‌ ಎಂದು ತಿಳಿಸಿದ್ದಾರೆ.

ಲಘು ರೈಲಿನ ವಿಶೇಷತೆ

ಈ ಲಘು ರೈಲಿನ ವಿಶೇಷವೆಂದರೇ ಇದು ಬಸ್​ಗಳಂತೆ ರಸ್ತೆ ಮಧ್ಯೆಯೇ ಸಂಚರಿಸಲಿದೆ. ಹೌದು ಈ ರೈಲಿಗೆ ರಸ್ತೆ ಮೇಲೆಯೇ ಹಳಿಗಳನ್ನು ಜೋಡಿಸಲಾಗುತ್ತದೆ. ಈ ಹಳಿಗಳ ಮೇಲೆ ರೈಲು ಸಂಚರಿಸಲಿದೆ. ಇದು ಸಾಮಾನ್ಯ ಬಸ್​​ನಂತೆ ಎಲ್ಲ ಸ್ಟಾಪ್​​ಗಳಲ್ಲೂ ನಿಲ್ಲುತ್ತದೆ. ಇನ್ನು ಹುಬ್ಬಳ್ಳಿಯಲ್ಲಿ ಈ ರೈಲು ಸಂಚಾರಕ್ಕೆ ಈಗಾಗಲೆ ಪ್ರಾರಂಭವಾಗಿರುವ ಬಿಆರ್​ಟಿಸಿಎಸ್​​ ಬಸ್​ ಮಾರ್ಗವನ್ನೇ ಬಳಸಲು ಸರ್ಕಾರ ಚಿಂತಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:03 pm, Tue, 18 July 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ