AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಬೃಹತ್ ಪಾಲಿಕೆಗೆ ಬಿಜೆಪಿ ಪಟ್ಟು, ವಿಭಜನೆಯೇ ಲೇಸು ಎಂದ ಕಾಂಗ್ರೆಸ್

ಹುಬ್ಬಳ್ಳಿ-ಧಾರವಾಡ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಪಾಲಿಕೆ ರಚಿಸುವ ನಿರ್ಧಾರ ಈಗ ರಾಜಕೀಯ ತಿರುವು ಪಡೆದಿದೆ. 16ನೇ ಹಣಕಾಸು ಆಯೋಗದ ಅನುದಾನದ ಆಸೆಗೆ ಬಿಜೆಪಿ ‘ಬೃಹತ್ ಪಾಲಿಕೆ’ ಪರ ವಾಲಿದ್ದರೆ, ವಿಭಜನೆಯೇ ಶ್ರೇಯಸ್ಕರ ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಈ ರಾಜಕೀಯ ಜಿದ್ದಾಜಿದ್ದಿನಿಂದ ಅವಳಿ ನಗರದ ಅಭಿವೃದ್ಧಿ ನೀಲನಕ್ಷೆ ಅಸ್ಪಷ್ಟವಾಗಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಬೃಹತ್ ಪಾಲಿಕೆಗೆ ಬಿಜೆಪಿ ಪಟ್ಟು, ವಿಭಜನೆಯೇ ಲೇಸು ಎಂದ ಕಾಂಗ್ರೆಸ್
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆImage Credit source: tv9
ಸಂಜಯ್ಯಾ ಚಿಕ್ಕಮಠ
| Edited By: |

Updated on: May 02, 2026 | 2:10 PM

Share

ಹುಬ್ಬಳ್ಳಿ, ಮೇ 2: ಉತ್ತರ ಕರ್ನಾಟಕದ ಪ್ರಮುಖ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ (Hubli-Dharawad) ಮಹಾನಗರ ಪಾಲಿಕೆಯ ಭವಿಷ್ಯದ ಕುರಿತು ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಒಂದು ಕಾಲದಲ್ಲಿ ಪಾಲಿಕೆ ವಿಭಜನೆಗೆ ಪಟ್ಟು ಹಿಡಿದಿದ್ದ ಬಿಜೆಪಿಯು ಈಗ ಹೆಚ್ಚಿನ ಅನುದಾನದ ಆಸೆಗೆ ‘ಬೃಹತ್ ಮಹಾನಗರ ಪಾಲಿಕೆ’ (Greater Hubballi-Dharwad Municipal Corporation) ರಚನೆಗೆ ಒತ್ತಾಯಿಸುತ್ತಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ ಮಾತ್ರ ವಿಭಜನೆಯ ನಿರ್ಧಾರಕ್ಕೇ ಅಂಟಿಕೊಂಡಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಹಿನ್ನೆಲೆ ಏನು?

1962ರಲ್ಲಿ ಹುಬ್ಬಳ್ಳಿ ಮತ್ತು ಧಾರವಾಡ ನಗರಸಭೆಗಳನ್ನು ವಿಲೀನಗೊಳಿಸಿ ಮಹಾನಗರ ಪಾಲಿಕೆಯನ್ನು ರಚಿಸಲಾಗಿತ್ತು. ಪ್ರಸ್ತುತ ಇದು 202.3 ಚದರ ಕಿ.ಮೀ ವ್ಯಾಪ್ತಿ ಹಾಗೂ 82 ವಾರ್ಡ್‌ಗಳನ್ನು ಹೊಂದಿದೆ. ಆದರೆ, ಅನುದಾನ ಹಂಚಿಕೆಯಲ್ಲಿ ಧಾರವಾಡಕ್ಕೆ ಅನ್ಯಾಯವಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ, ಶಾಸಕ ಅರವಿಂದ್ ಬೆಲ್ಲದ್ ನೇತೃತ್ವದಲ್ಲಿ ಪ್ರತ್ಯೇಕ ಧಾರವಾಡ ಪಾಲಿಕೆಗೆ ಆಗ್ರಹ ಕೇಳಿಬಂದಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ 2025ರ ಜನವರಿಯಲ್ಲಿ ವಿಭಜನೆಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿತ್ತು.

ಬಿಜೆಪಿ ನಿಲುವು ಬದಲಾಗಿದ್ದೇಕೆ?

ಕೇಂದ್ರದ 16ನೇ ಹಣಕಾಸು ಆಯೋಗವು 10 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ಪಾಲಿಕೆಗಳಿಗೆ ವಾರ್ಷಿಕ 500ರಿಂದ 1,000 ಕೋಟಿ ರೂ. ಹೆಚ್ಚಿನ ಅನುದಾನ ನೀಡಲು ಶಿಫಾರಸು ಮಾಡಿದೆ. ಒಂದು ವೇಳೆ ಪಾಲಿಕೆ ವಿಭಜನೆಯಾದರೆ ಎರಡೂ ನಗರಗಳ ಜನಸಂಖ್ಯೆ 10 ಲಕ್ಷಕ್ಕಿಂತ ಕಡಿಮೆಯಾಗಲಿದ್ದು, ಈ ಬೃಹತ್ ಅನುದಾನ ಕೈತಪ್ಪಲಿದೆ ಎಂಬುದು ಬಿಜೆಪಿಯ ಆತಂಕ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಪಾಲಿಕೆ ಸಭೆಯಲ್ಲಿ ವಿಭಜನೆ ಕೈಬಿಟ್ಟು ‘ಬೃಹತ್ ಪಾಲಿಕೆ’ ರಚಿಸಲು ಠರಾವು ಪಾಸು ಮಾಡಿ ಸರ್ಕಾರಕ್ಕೆ ಕಳುಹಿಸಲಾಗಿದೆ.

ಕಾಂಗ್ರೆಸ್ ಆಕ್ಷೇಪ

ಬಿಜೆಪಿಯ ಈ ನಡೆಯನ್ನು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ತೀವ್ರವಾಗಿ ವಿರೋಧಿಸಿದ್ದಾರೆ. ‘ಕೇಂದ್ರ ಸರ್ಕಾರ ಅನುದಾನ ನೀಡುತ್ತದೆ ಎಂಬ ಗ್ಯಾರಂಟಿ ಇಲ್ಲ. ಕೇಂದ್ರದ ಮಾನದಂಡಗಳಿಗೆ ನಮ್ಮ ಪಾಲಿಕೆ ಒಳಪಡುವುದು ಅನುಮಾನ. ಹೀಗಾಗಿ ವಿಭಜನೆಯೇ ಸೂಕ್ತ’ ಎಂಬುದು ಅವರ ವಾದ. ಈ ಗೊಂದಲಗಳ ನಡುವೆ ರಾಜ್ಯ ಸರ್ಕಾರ ಅಂತಿಮವಾಗಿ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ