AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮೃತ ಪತ್ನಿಯ ಅಕ್ಕನನ್ನೇ ಕೈಹಿಡಿದ

ಮಾಜಿ ಮೇಯರ್ ಒಬ್ಬರು 75ರ ವಯಸ್ಸಿನಲ್ಲೂ ಮತ್ತೊಂದು ಮದುವೆಯಾಗಿ ಹುಬ್ಬೇರುವಂತೆ ಮಾಡಿದ್ದಾರೆ. ಅದರಲ್ಲೂ ಮೃತಪಟ್ಟ ಮೊದಲ ಪತ್ನಿಯ ಸಹೋದರಿಯನ್ನು ವಿವಾಹವಾಗಿದ್ದು ವಿಶೇಷ.

75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮೃತ ಪತ್ನಿಯ ಅಕ್ಕನನ್ನೇ ಕೈಹಿಡಿದ
75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್
TV9 Web
| Edited By: |

Updated on:Nov 16, 2022 | 9:46 PM

Share

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ (Hubballi Dharwad ex mayor) ಡಿ.ಕೆ. ಚವ್ಹಾಣ ತಮ್ಮ 75ರ ವಯಸ್ಸಿನಲ್ಲೂ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮೊದಲ ಪತ್ನಿ ಮೂರು ತಿಂಗಳ ಹಿಂದೆ ತೀರಿ ಹೋಗಿದ್ದರು. ಇದೀಗ ಡಿ.ಕೆ. ಚವ್ಹಾಣ ಅವರು ಮೃತ ಪತ್ನಿಯ ಅಕ್ಕನನ್ನು ವಿವಾಹವಾಗಿದ್ದಾರೆ(marriage). ಈ ಮೂಲಕ ಎರಡನೇ ಸಲ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇನ್ನು ಮಾಜಿ ಮೇಯರ್ ಮದುವೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಎಲ್ಲರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಅದ್ಧೂರಿಯಾಗಿ ಮದುವೆ ನಡೆದಿದೆ. ಈ ವಿವಾಹ ಸಂಭ್ರಮದಲ್ಲಿ ಮೂವರು ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಸಂಬಂಧಿಕರು ಭಾಗಿಯಾಗಿದ್ದು ವಿಶೇಷ.

ಮೊದಲ ಪತ್ನಿ ಶಾರದಾ ಕಳೆದ ಮೂರು ತಿಂಗಳ ಹಿಂದೆ ತೀರಿಹೋಗಿದ್ದರು. ಪತ್ನಿ ತೀರಿದ ಮೂರು ತಿಂಗಳ ನಂತರ ಪತ್ನಿಯ ಸಹೋದರಿ ಅನಸೂಯಾರನ್ನ ಡಿ.ಕೆ. ಚವ್ಹಾಣ. ಮದುವೆಯಾಗಿದ್ದಾರೆ. ಡಿ.ಕೆ. ಚವ್ಹಾಣ ಇದು ಎರಡನೇ ಮದುವೆಯಾಗಿದ್ರೆ, ಅನಸೂಯಾ ಅವರಿಗೆ ಇದು ಮೊದಲ ಮದುವೆಯಾಗಿದೆ.

ಮೃತ ಮೊದಲ ಪತ್ನಿಯ ಮಕ್ಕಳು ಉದ್ಯೋಗದ ನಿಮಿತ್ತ ಬೇರೆ-ಬೇರೆ ಕಡೆಗಳಲ್ಲಿ ಇದ್ದಾರೆ. ಇದರಿಂದ ಮಾಜಿ ಮೇಯರ್ ಡಿ.ಕೆ. ಚವ್ಹಾಣ ಅವರನ್ನು ಮನೆಯಲ್ಲಿ ಯಾರು ನೋಡಿಕೊಳ್ಳಲು ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಸಂಬಂಧಿಕರು ಸೇರಿ ಮಾತುಕತೆ ಮಾಡಿಯೇ ಎಲ್ಲರ ಒಪ್ಪಿಗೆ ಮೇರೆಗೆ ಡಿ.ಕೆ. ಚವ್ಹಾಣ ಅವರಿಗೆ ಮತ್ತೊಂದು ಮದುವೆ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Wed, 16 November 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್