AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubli News: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ; ಜೂನ್ 20 ರಂದು ಮಹಾಪೌರ, ಉಪ ಮಹಾಪೌರ ಚುನಾವಣೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿ ಪಡಿಸಲಾಗಿದೆ

Hubli News: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ; ಜೂನ್ 20 ರಂದು ಮಹಾಪೌರ, ಉಪ ಮಹಾಪೌರ ಚುನಾವಣೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ; ಜೂನ್ 20 ರಂದು ಮಹಾಪೌರ, ಉಪ ಮಹಾಪೌರ ಚುನಾವಣೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jun 06, 2023 | 8:28 PM

Share

ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ (Hubballi Dharwad Mahanagara Palike) 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿ ಪಡಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ (ಚುನಾವಣೆ)ಯ ಅಧ್ಯಕ್ಷಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ ಸುನೀಲಕುಮಾರ ಅವರು ತಿಳಿಸಿದ್ದಾರೆ.

ಈ ವಿಚಾರವಾಗಿ ಪ್ರಕಟಣೆ ನೀಡಿರುವ ಅವರು, ಜೂನ್ 20, 2023 ರಂದು ಮುಂಜಾನೆ 9 ರಿಂದ 11 ಗಂಟೆಯವರೆಗೆ ಧಾರವಾಡದ ಪಾಲಿಕೆಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಭಾಭವನದಲ್ಲಿ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು 22ನೇ ಅವಧಿಯ ಚುನಾವಣೆಗೆ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿಯನ್ನು ನಿಗದಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Dharwad Power Cut: ಧಾರವಾಡದ ಹಲವೆಡೆ ಬುಧವಾರ ವಿದ್ಯುತ್ ವ್ಯತ್ಯಯ; ಇಲ್ಲಿದೆ ವಿವರ

ಮಹಾಪೌರ ಮತ್ತು ಉಪ ಮಹಾಪೌರ ಸ್ಥಾನಕ್ಕೆ ನಡೆಯುವ ಚುನಾವಣೆ ಪ್ರಕ್ರಿಯೆಯಲ್ಲಿ ಸ್ವೀಕರಿಸಿದ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡುವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಸುನೀಲ ಕುಮಾರ ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್