AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿ ರಾಜ್ಯ ಸರ್ಕಾರ 24 ಗಂಟೆಯಲ್ಲಿ ಪಾಲಿಕೆ ಆಯುಕ್ತರನ್ನು ಬದಲಾವಣೆ ಮಾಡಿದೆ.

24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ
ಎಸ್.ಭರತ್, ಈಶ್ವರ ಉಳ್ಳಾಗಡ್ಡಿ
ಶಿವಕುಮಾರ್ ಪತ್ತಾರ್
| Edited By: |

Updated on: Jul 06, 2023 | 4:26 PM

Share

ಹುಬ್ಬಳ್ಳಿ: ಆದೇಶ ಹೊರಡಿಸಿದ 24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Municipal Corporation) ಆಯುಕ್ತರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಮತ್ತೊಂದು ಆದೇಶವನ್ನು ಹೊರಡಿಸಿದೆ. ನಿನ್ನೆ ಒಂದು ಆದೇಶ, ಇವತ್ತು ಒಂದು ಆದೇಶ ಹೊರಡಿಸುವ ಮೂಲಕ ಸರ್ಕಾರ ಗೊಂದಲಕ್ಕೀಡು ಮಾಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿದೆ.

ಆ ಮೂಲಕ 24 ಗಂಟೆಯಲ್ಲಿ ಹು-ಧಾ ಪಾಲಿಕೆ ಆಯುಕ್ತರನ್ನು ಸರ್ಕಾರ ಬದಲಿಸಿದೆ. ಈಶ್ವರ ಉಳ್ಳಾಗಡ್ಡಿ ಬೆಳಗಾವಿ ಜಿಲ್ಲಾ ಯೋಜನಾ ಅಧಿಕಾರಿಯಾಗಿದ್ದರು. ಕೆಲ‌ವು ದಿನಗಳ ಹಿಂದೆ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಅವರನ್ನು ವರ್ಗಾವಣೆ ಮಾಡಿದ ನಂತರ ಕೆಲ ದಿನ ಸರ್ಕಾರ ಯಾರನ್ನೂ ನೇಮಿಸಿರಲಿಲ್ಲ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಸಂಚಲನ: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಎಸ್​ ಯಡಿಯೂರಪ್ಪ ಸಂಬಂಧಿ

ನಿನ್ನೆ ಆಯುಕ್ತರಾಗಿ ಭರತ್ ಅವರನ್ನು​ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದಂತೆ ನಿನ್ನೆ ಅಧಿಕಾರ ವಹಿಸಿಕೊಂಡಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಹು-ಧಾ ಪಾಲಿಕೆ ಆಯುಕ್ತರಾಗಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ