Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಗುಂಗಲ್ಲಿದ್ದವರ ನಶೆ ಇಳಿಸಿದ ಹುಬ್ಬಳ್ಳಿ ಪೊಲೀಸರು ​

ಹುಬ್ಬಳ್ಳಿ-ಧಾರವಾಡ ಪೊಲೀಸರು ಗಾಂಜಾ ಮಾರಾಟ ಮತ್ತು ವ್ಯಸನಿಗಳ ವಿರುದ್ಧ ಸಮರ ಸಾರಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸರು 518 ಗಾಂಜಾ ವ್ಯಸನಿಗಳನ್ನು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆ ನಡೆಸಿದರು. 34 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಗಾಂಜಾ ಗುಂಗಲ್ಲಿದ್ದವರ ನಶೆ ಇಳಿಸಿದ ಹುಬ್ಬಳ್ಳಿ ಪೊಲೀಸರು ​
ಗಾಂಜಾ ವ್ಯಸನಿಗಳು ವಶ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Sep 29, 2024 | 12:40 PM

ಹುಬ್ಬಳ್ಳಿ, ಸೆಪ್ಟೆಂಬರ್​ 29: ಹುಬ್ಬಳ್ಳಿ-ಧಾರವಾಡ ಪೊಲೀಸರು (Hubballi-Dharwad Police) ಗಾಂಜಾ (Ganja) ಮಾರಾಟ ಮತ್ತು ವ್ಯಸನಿಗಳ ವಿರುದ್ಧ ಸಮರ ಸಾರಿದ್ದಾರೆ. ಇತ್ತೀಚಿಗೆ ಅವಳಿನಗರದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಟೊಂಕ ಕಟ್ಟಿ ನಿಂತ ಪೊಲೀಸರು ಮೇಲಿಂದ ಮೇಲೆ ಕಾರ್ಯಾಚರಣೆ ನಡೆಸಿ, ಪೆಡ್ಲರ್​ಗಳು​ ಮತ್ತು ವ್ಯಸನಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇಂದು (ಸೆ.29) ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಪೊಲೀಸರು ಒಟ್ಟು 518 ಜನರ ತಪಾಸಣೆಗೆ ಒಳಪಡಿಸಿದರು. ಅದರಲ್ಲಿ 147 ಜನ ಗಾಂಜಾ ಸೇವಿಸಿರುವುದು ದೃಢವಾಗಿದೆ. 34 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್​​ ಎನ್​ ಶಶಿಕುಮಾರ್​ ಮಾತನಾಡಿ, ಅವಳಿನಗರದಲ್ಲಿ ಡ್ರಗ್ ಅಭಿಯಾನ ನಿರಂತರವಾಗಿ ಮಾಡುತ್ತಿದ್ದೇವೆ. ಡ್ರಗ್ ಪೆಡ್ಲರ್, ವ್ಯಸನಿಗಳ ಮೇಲೆ ಮೂರು ಹಂತದಲ್ಲಿ ಕ್ರಮ ಕೈಗೊಂಡಿದ್ದೇವೆ. ಮೊದಲು ಶೇ 63.67ರಷ್ಟು ಪಾಸಿಟಿವ್ ಬಂದಿತ್ತು. ಎರಡನೇ ಹಂತದಲ್ಲಿ ಶೇ 53 ರಷ್ಟು ಹಾಗೂ ಮೂರನೇ ಹಂತದಲ್ಲಿ ಶೇ 43 ರಷ್ಟು ಮತ್ತು ಇಂದು ಶೇ 29 ರಷ್ಟು ಪಾಸಿಟಿವ್ ಇದೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗಾಂಜಾ ಪೂರೈಸುತ್ತಿದ್ದ 12 ಆರೋಪಿಗಳ ಬಂಧನ

ಗಾಂಜಾ ವ್ಯಸನಿಗಳನ್ನು ಪೊಲೀಸರು ಹುಬ್ಬಳ್ಳಿಯ ರಂಭಾಪುರಿ ಸಭಾಂಗಣಕ್ಕೆ ಕರೆತಂದರು. ಈ ಅವರ ಪೋಷಕರನ್ನು ಕರೆಸಿದರು. ಪೋಷಕರ ಸಮ್ಮುಖದಲ್ಲೇ ವ್ಯಸನಿಗಳಿಗೆ ಪೊಲೀಸರು ಬುದ್ದಿವಾದ ಹೇಳಿದರು. ಈ ವೇಳೆ ಕಮಿಷನರ್ ಎದುರು ಪೋಷಕರು ಕಣ್ಣೀರು ಹಾಕಿದರು.

ನಕಲಿ ಸಿಗರೇಟ್ ಮಾರಾಟ ಜಾಲ ಪತ್ತೆ

ಧಾರವಾಡ: ನವಲಗುಂದದಲ್ಲಿ ನಕಲಿ ಸಿಗರೇಟ್ ಮಾರಾಟ ಜಾಲ ಪತ್ತೆಯಾಗಿದೆ. ಆರೋಪಿಗಳು ಕ್ರೇಟಾ ಕಾರ್​ನಲ್ಲಿ ಐಟಿಸಿ ಕಂಪನಿಯ ನಕಲಿ ಗೋಲ್ಡ್ ಪ್ಯಾಕ್ ಕಿಂಗ್ಸ್ ಮತ್ತು ಲೈಟ್ಸ್ ಸಿಗರೇಟ್​ಗಳನ್ನು ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯಲ್ಲಿ ಸಾಗಿಸುತ್ತಿದ್ದರು. ಈ ವಿಚಾರವನ್ನು ಐಟಿಸಿ ಕಂಪನಿ ಪೊಲೀಸರಿಗೆ ಮಾಹಿತಿ ನೀಡಿದೆ. ಮಾಹಿತಿ ಆಧರಿಸಿ ಪೊಲೀಸರು ನವಲಗುಂದ ಶೆಟ್ಟರ್ ಕೆರೆ ಬಳಿ ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಒಟ್ಟು 5.44 ಲಕ್ಷ ರೂ. ಮೌಲ್ಯದ ನಕಲಿ ಸಿಗರೇಟ್ ಪತ್ತೆಯಾಗಿದೆ.

ಬಳಿಕ, ಪೊಲೀಸರು ಕಾರಿನಲ್ಲಿದ್ದ ಉಡುಪಿ ಮೂಲದ ಮಹಮ್ಮದ ನೌಶಾದ ಮೋಹಿದ್ದಿನ್ ಎಂಬುವನನ್ನು ಬಂಧಿಸಿದ್ದಾರೆ. ನಕಲಿ ಸಿಗರೇಟ್ ವಶಕ್ಕೆ ಪಡೆದರು. ಕಾರು ವಿಜಯಪುರದಿಂದ ಹುಬ್ಬಳ್ಳಿಯತ್ತ ಹೋಗುತ್ತಿದ್ದಾಗ, ಕಾರ್ಯಾಚರಣೆ ನಡೆದಿದೆ.

ಬೆಳಗಾವಿ, ವಿಜಯಪುರ, ಹುಬ್ಬಳ್ಳಿ ಭಾಗದಲ್ಲಿ ನಕಲಿ ಸಿಗರೇಟ್ ಜಾಲ ಹೆಚ್ಚಾಗಿದೆ. ಬೆಂಗಳೂರಿನಿಂದ ನಕಲಿ ಸಿಗರೇಟ್ ತಂದು ಮಾರಾಟ ಮಾಡುತ್ತಿತ್ತು. ಈಗಾಗಲೇ ಲಕ್ಷಾಂತರ ರೂಪಾಯಿ ಸಿಗರೇಟ್ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:39 pm, Sun, 29 September 24

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ