AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯೋವೃದ್ದರು, ಮಹಿಳೆಯರ ಪಾಲಿಗೆ ‘ಆಸರೆ’: ಒಂಟಿ ಬದುಕಿಗೆ ಬೆನ್ನೆಲುಬಾದ ಪೊಲೀಸ್ ಭರವಸೆ

ಪೊಲೀಸ್ ಇಲಾಖೆಯ 'ಆಸರೆ' ಯೋಜನೆಯು ಒಂಟಿಯಾಗಿ ವಾಸಿಸುವ ಮಹಿಳೆಯರು ಮತ್ತು ವಯೋವೃದ್ಧರ ಅಸುರಕ್ಷತೆ ನಿವಾರಣೆಗೆ ಬೆನ್ನೆಲುಬಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 7500ಕ್ಕೂ ಹೆಚ್ಚು ಜನರನ್ನು ಗುರುತಿಸಿ, ಅವರಿಗೆ ಸುರಕ್ಷತೆ ಮತ್ತು ಅಗತ್ಯ ನೆರವು ನೀಡಲಾಗುತ್ತಿದೆ. ಬೀಟ್ ಪೊಲೀಸರು ವೈದ್ಯಕೀಯ, ಕಾನೂನು ಹಾಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಮೂಲಕ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದಾರೆ.

ವಯೋವೃದ್ದರು, ಮಹಿಳೆಯರ ಪಾಲಿಗೆ ‘ಆಸರೆ’: ಒಂಟಿ ಬದುಕಿಗೆ ಬೆನ್ನೆಲುಬಾದ ಪೊಲೀಸ್ ಭರವಸೆ
ಆಸರೆ ಯೋಜನೆImage Credit source: tv9 kannada
ಸಂಜಯ್ಯಾ ಚಿಕ್ಕಮಠ
| Edited By: |

Updated on: Apr 12, 2026 | 5:16 PM

Share

ಹುಬ್ಬಳ್ಳಿ, ಏಪ್ರಿಲ್​ 12: ಹುಬ್ಬಳ್ಳಿಯಂತಹ (hubballi) ಮಹಾನಗರಗಳಲ್ಲಿ ಅಥವಾ ಜನನಿಬಿಡ ಪ್ರದೇಶಗಳಲ್ಲಿ ವಯೋವೃದ್ಧರು, ಮಹಿಳೆಯರು ಸೇರಿದಂತೆ ಒಬ್ಬಂಟಿಯಾಗಿ ವಾಸಿಸುವುದು ಒಂದು ಸವಾಲೇ ಸರಿ. ಯಾವಾಗ ಏನಾಗಿ ಬಿಡುತ್ತದೆಯೋ ಎಂಬ ಭಯ ಕಾಡುತ್ತದೆ. ಹೀಗಾಗಿ ಹುಬ್ಬಳ್ಳಿ ಪೊಲೀಸರು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ. ಅದೇನೆಂದರೆ ‘ಆಸರೆ’ (Asare). ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರ ಮತ್ತು ವಯೋವೃದ್ಧರಿಗೆ ಅಸುರಕ್ಷತೆ, ಅಭದ್ರತೆ ಕಾಡದಂತೆ ಕಾಳಜಿ ವಹಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಈ ಯೋಜನೆ ಜಾರಿ ಮಾಡಿದೆ.

ದೊಡ್ಡದೊಡ್ಡ ನಗರಗಳಲ್ಲಿ ಮಕ್ಕಳು ಇದ್ದು, ಹೆತ್ತವರು ಬೇರೆಡೆ ವಾಸವಾಗಿರುತ್ತಾರೆ. ಕೆಲವರು ಮದುವೆ ಆಗದೆ ಒಬ್ಬಂಟಿಯಾಗಿರುತ್ತಾರೆ. ಹೀಗೆ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಮತ್ತು ವಯೋವೃದ್ಧರಿಗೆ ಅಸುರಕ್ಷತೆ, ಅಭದ್ರತೆ ಕಾಡುತ್ತದೆ. ಅಂತವರಿಗೆ ಕಾಳಜಿ ವಹಿಸುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆಯಿಂದ ಆಸರೆ ಯೋಜನೆ ಜಾರಿಗೊಳಿಸಿದೆ.

ಇದನ್ನೂ ಓದಿ: ಕ್ಷೇತ್ರದ ಜನರ ಸಮಸ್ಯೆ ಆಲಿಸಲು ಶಾಸಕ ವಿನೂತನ ಪ್ರಯತ್ನ: ರಾಜ್ಯದಲ್ಲೇ ಮೊದಲು

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 7500ಕ್ಕೂ ಹೆಚ್ಚು ಜನರನ್ನು ಗುರುತಿಸಿ ಅವರಿಗೆ ಸುರಕ್ಷತೆ, ಅಗತ್ಯ ಸಹಕಾರ ನೀಡಲಾಗುತ್ತಿದೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಹಾಗೂ ಹಿರಿಯ ನಾಗರಿಕರ ಕಾಳಜಿಯ ದೃಷ್ಟಿಯಿಂದ ರಾಜ್ಯ ಪೊಲೀಸ್ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ. ಇದರನ್ವಯ ಆಯಾ ವ್ಯಾಪ್ತಿಯಲ್ಲಿ ಒಂಟಿಯಾಗಿ ವಾಸವಾಗಿರುವ ವೃದ್ಧರ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು ಅವರಿಗೆ ಬೇಕಾದ ಅಗತ್ಯ ಕಾನೂನು ನೆರವು ನೀಡುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ 2 ತಿಂಗಳಿಂದ ಮನೆ-ಮನೆ ಸಮೀಕ್ಷೆ ನಡೆಸಿ 7500ಕ್ಕೂ ಹೆಚ್ಚು ಜನರನ್ನು ಗುರುತಿಸಲಾಗಿದೆ.

ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ

ವೃದ್ದರು, ಒಂಟಿಯಾಗಿ ವಾಸಿಸುವವರನು ಭೇಟಿಯಾಗುತ್ತಿರುವ ಪೊಲೀಸರು, ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ. ಕಳ್ಳತನ, ದರೋಡೆ ಕೃತ್ಯ ನಡೆದಾಗ ತುರ್ತು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ನೀಡಲಾಗುತ್ತಿದೆ. ಸಿಸಿ ಕ್ಯಾಮೆರಾ. ಅಪಾಯದ ಸೈರನ್ ಅಳವಡಿಕೆ ಸಹಿತ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆಯೂ ವಿವರಿಸುತ್ತಿದ್ದಾರೆ.

ತುರ್ತು ವೈದ್ಯಕೀಯ ಸೇವೆ ನೆರವು

ತುರ್ತು ವೈದ್ಯಕೀಯ ಅಗತ್ಯತೆ ಇದ್ದಲ್ಲಿ, ಔಷಧೋಪಚಾರದ ನೆರವು ಬೇಕಿದ್ದರೂ ಆಯಾ ಬೀಟ್ ಪೊಲೀಸರಿಗೆ ಕರೆ ಮಾಡಿದರೆ ಅವರು ಬಂದು ಸಹಾಯ ಮಾಡಲಿದ್ದಾರೆ. ಇದರೊಂದಿಗೆ ವೃದ್ಧಾಪ್ಯ ವೇತನ, ಪಡಿತರ ಚೀಟಿ, ಪಿಂಚಣಿ ಸೇರಿ ಸರ್ಕಾರದ ವಿವಿಧ ಸೌಲಭ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ.

ಇದನ್ನೂ ಓದಿ: Viral Post: ಪರ ಭಾಷಿಕರಿಗೆ ಕನ್ನಡ ಕಲಿಸಲು ಬೆಂಗಳೂರು ಆಟೋ ಚಾಲಕನ ವಿನೂತನ ಪ್ರಯತ್ನ

ನಿಗದಿಗೊಳಿಸಿದ ಬೀಟ್ ಸಿಬ್ಬಂದಿಯ ಕರ್ತವ್ಯದ ಮೇಲೂ ನಿಗಾ ಇರಿಸಲಾಗಿದೆ. ಅವರು ಮನೆಗಳಿಗೆ ಭೇಟಿ ನೀಡಿ ನಿರ್ದಿಷ್ಟ ಕಡೆ ಇರಿಸಿದ್ದ ಲಾಗ್ ಬುಕ್‌ನಲ್ಲಿ ಸಹಿ ಮಾಡಬೇಕು. ಹಿರಿಯರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವ ಜತೆಗೆ ಅವರ ಸಮಸ್ಯೆ ಆಲಿಸಿ ಪರಿಹರಿಸಬೇಕೆಂದು ಹಿರಿಯ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ.

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್