AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಜನರೇ ಎಚ್ಚರ… ಹೆಸ್ಕಾಂ ಎಂದು ಹೇಳಿಕೊಂಡು ಮನೆಗೆ ಬರ್ತಾರೆ ನಕಲಿ ಬಿಲ್ ಕಲೆಕ್ಟರ್

ಹುಬ್ಬಳ್ಳಿಯ ಆನಂದ ನಗರದಲ್ಲಿ ಹೆಸ್ಕಾಂ ನಕಲಿ ಬಿಲ್ ಕಲೆಕ್ಟರ್ ಬಂಧನವಾಗಿದೆ. ಸಮವಸ್ತ್ರ ಧರಿಸಿ ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿದ್ದ ಈ ವಂಚಕನನ್ನು ಸಾರ್ವಜನಿಕರು ಸಮಯಪ್ರಜ್ಞೆಯಿಂದ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಣ ನೀಡಿ ರಸೀದಿ ಕೇಳಿದಾಗ ಸರ್ವರ್ ಡೌನ್ ಎಂದು ನಂಬಿಸುತ್ತಿದ್ದ. ಇಂತಹ ವಂಚನೆಗಳಿಂದ ರಕ್ಷಿಸಿಕೊಳ್ಳಲು, ಹೆಸ್ಕಾಂ ಸಿಬ್ಬಂದಿಯ ಗುರುತಿನ ಚೀಟಿ ಪರಿಶೀಲಿಸಿ ಮತ್ತು ಹಣ ಪಾವತಿಸಿದ ತಕ್ಷಣ ರಸೀದಿ ಪಡೆಯಿರಿ ಎಂದು ಇಲಾಖೆ ಎಚ್ಚರಿಸಿದೆ.

ಹುಬ್ಬಳ್ಳಿ ಜನರೇ ಎಚ್ಚರ... ಹೆಸ್ಕಾಂ ಎಂದು ಹೇಳಿಕೊಂಡು ಮನೆಗೆ ಬರ್ತಾರೆ ನಕಲಿ ಬಿಲ್ ಕಲೆಕ್ಟರ್
ನಕಲಿ ಬಿಲ್ ಕಲೆಕ್ಟರ್
ಶಿವಕುಮಾರ್ ಪತ್ತಾರ್
| Edited By: |

Updated on: Mar 02, 2026 | 9:39 AM

Share

ಹುಬ್ಬಳ್ಳಿ, ಮಾ.2: ಹುಬ್ಬಳ್ಳಿಯ ಆನಂದ ನಗರದಲ್ಲಿ ವಂಚನೆಯ ವಿಭಿನ್ನ ಹಾದಿ ತುಳಿದಿದ್ದ ಖದೀಮನೊಬ್ಬ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಪೊಲೀಸರ ಅತಿಥಿಯಾಗಿದ್ದಾನೆ. ತಾನು ಹೆಸ್ಕಾಂ (HESCOM) ಬಿಲ್ ಕಲೆಕ್ಟರ್ ಎಂದು ಸುಳ್ಳು ಹೇಳಿ ಮನೆಮನೆಗೆ ಹೋಗಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಕಲೆಕ್ಟರ್‌ನನ್ನು ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ ನಗರದಲ್ಲಿ ಈ ಘಟನೆ ನಡೆದಿದೆ. ಖದೀಮನು ಖಾಕಿ ಸಮವಸ್ತ್ರ ಧರಿಸಿ, ತಾನು ವಿದ್ಯುತ್ ಬಿಲ್ ವಸೂಲಿ ಮಾಡಲು ಬಂದಿರುವುದಾಗಿ ನಂಬಿಸಿದ್ದಾನೆ.

ಮನೆ ಮನೆಗೆ ಹೋಗಿ ಬಿಲ್ ಬಾಕಿ ಇದೆ ಎಂದು ಹೇಳಿ 1,000 ರೂ. ದಿಂದ 2,000 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದ. ಗ್ರಾಹಕರು ರಸೀದಿ ಕೇಳಿದಾಗ “ಈಗ ಸರ್ವರ್ ಡೌನ್ ಇದೆ, ನಾಳೆ ತಂದು ಕೊಡುತ್ತೇನೆ” ಎಂದು ನಂಬಿಸಿ ಹಣದೊಂದಿಗೆ ಪರಾರಿಯಾಗುತ್ತಿದ್ದ. ಹಲವು ಮನೆಗಳಲ್ಲಿ ಹಣ ಪಡೆದ ಬಳಿಕವೂ ರಸೀದಿ ನೀಡದಿದ್ದಾಗ ಅನುಮಾನಗೊಂಡ ಸ್ಥಳೀಯರು ಆತನನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಹೆಸ್ಕಾಂ ಸಿಬ್ಬಂದಿ ಅಲ್ಲ ಎಂಬುದು ಬಹಿರಂಗವಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಮುಳ್ಳುಹಂದಿಯ ಡೆಡ್ಲಿ ಅಟ್ಯಾಕ್​ಗೆ ಚಿರತೆ ಸಾವು!

ವಿಡಿಯೋ ಇಲ್ಲಿದೆ ನೋಡಿ:

ತಕ್ಷಣವೇ ಸಾರ್ವಜನಿಕರು ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹಳೆ ಹುಬ್ಬಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಹೆಸ್ಕಾಂ ಸಿಬ್ಬಂದಿ ಮನೆಗೆ ಬಂದಾಗ ಕಡ್ಡಾಯವಾಗಿ ಅಧಿಕೃತ ಗುರುತಿನ ಚೀಟಿ (ID Card) ಕೇಳಿ. ಹಣ ಪಾವತಿಸಿದ ತಕ್ಷಣ ಡಿಜಿಟಲ್ ಅಥವಾ ಭೌತಿಕ ರಸೀದಿ ಪಡೆಯಿರಿ. ಯಾವುದೇ ಅನುಮಾನವಿದ್ದರೆ ತಕ್ಷಣ ಸ್ಥಳೀಯ ಹೆಸ್ಕಾಂ ಕಚೇರಿ ಸಂಪರ್ಕಿಸಿ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ