AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಘಟಗಿ: ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್ ವಿರುದ್ಧ ದೂರು ದಾಖಲು

ಮೋಸದಿಂದ ಸಹೋದ್ಯೋಗಿಯನ್ನು ಮದುವೆಯಾಗಿ ಬಳಿಕ ಆಕೆಗೆ ಕಿರುಕುಳ, ಕೊಲೆ ಬೆದರಿಕೆ ಮತ್ತು ಮತಾಂತರ ಆಗುವಂತೆ ಒತ್ತಾಯಿಸಿದ ಬೆಂಗಳೂರು ಮೂಲದ ಮುಜಾಹಿದ್ ಖಾನ್ ವಿರುದ್ಧ ಕಲಘಟಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಕಲಘಟಗಿ: ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್ ವಿರುದ್ಧ ದೂರು ದಾಖಲು
ಕಲಘಟಗಿ ಪೊಲೀಸ್​ ಠಾಣೆ, ಆರೋಪಿ ಮುಜಾಹಿದ್ ಖಾನ್
ಶಿವಕುಮಾರ್ ಪತ್ತಾರ್
| Edited By: |

Updated on:Jul 27, 2024 | 11:44 AM

Share

ಹುಬ್ಬಳ್ಳಿ, ಜುಲೈ 27: ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ (Kalghatgi) ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಮುಜಾಹಿದ್ ಖಾನ್ ಕೊಲೆ ಬೆದರಿಕೆ ಹಾಕಿದ ಆರೋಪಿ. ರೇಖಾ (ಹೆಸರು ಬದಲಾಯಿಸಲಾಗಿದೆ) ಕಿರುಕುಳಕ್ಕೆ ಒಳಗಾದ ಸಂತ್ರಸ್ತೆ.

ರೇಖಾ ಅಜ್ಜಿಯೊಂದಿಗೆ ಕಲಘಟಗಿಯಲ್ಲಿ ವಾಸವಾಗಿದ್ದಾರೆ. ರೇಖಾ ಬೆಂಗಳೂರಿನಲ್ಲಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರೇಖಾ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಮುಜಾಹಿದ್ ಖಾನ್ ಕಾರ್ಯ ನಿರ್ವಹಿಸುತ್ತಿದ್ದಾನೆ. ಇಬ್ಬರು ಸಹೋದ್ಯೋಗಿಗಳಾಗಿದ್ದರಿಂದ ಸ್ನೇಹ ಬೆಳೆದಿದೆ. ಸ್ನೇಹ ಪ್ರೇಮಕ್ಕೆ ತಿರುಗಿದೆ. ನಂತರ 2017ರಲ್ಲಿ ಮುಜಾಹಿದ್ ಖಾನ್ ಮತ್ತು ರೇಖಾ ವಿವಾಹವಾಗಿದ್ದಾರೆ.

ಆದರೆ, ಮುಜಾಹಿದ್ ಖಾನ್​ಗೆ ಒಂದು ಮದುವೆಯಾಗಿದ್ದು, ನಾಲ್ಕು ಮಕ್ಕಳಿದ್ದಾರೆ. ಈ ವಿಚಾರವನ್ನು ಮುಚ್ಚಿಟ್ಟು ಮುಜಾಹಿದ್ ಖಾನ್ ಎರಡನೇ ಮದುವೆಯಾಗಿದ್ದಾನೆ. ಮದುವೆಯಾದ ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ರೇಖಾಗೆ ಮುಜಾಹಿದ್ ಖಾನ್​ನ ಮೊದಲನೇ ಮದುವೆ ವಿಚಾರ ತಿಳಿದಿದೆ. ಮತ್ತು ಮುಜಾಹಿದ್ ಖಾನ್ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ರೇಖಾಗೆ ಒತ್ತಾಯ ಮಾಡಲು ಆರಂಭಿಸಿದ್ದಾನೆ. ಈ ವಿಚಾರವಾಗಿ ಇಬ್ಬರು ಜಗಳವಾಡಿದ್ದಾರೆ. ಇಬ್ಬರ ನಡುವೆ ಬಿರುಕು ಮೂಡಿದೆ.

ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಕೊಲೆ: ಚಾರ್ಜ್​ ಶೀಟ್​ನಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ, ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ

ನಂತರ ರೇಖಾ ಕಲಘಟಗಿಗೆ ವಾಪಸ್​ ಆಗಿದ್ದಾಳೆ. ಬಳಿಕ, ಮುಜಾಹಿದ್ ಖಾನ್ ಕಲಘಟಗಿಗೆ ಬಂದು “ನೀನು ಎಲ್ಲಿಗಾದರೂ ಹೋಗು ನಿನಗೆ ಚಾಕು ಹಾಕುತ್ತೇನೆ‌” ಎಂದು ರೇಖಾಗೆ ಬೆದರಿಕೆ ಹಾಕಿದ್ದಾನೆ. ಇದರಿಂದ ಬೆದರಿದ ರೇಖಾ ಶ್ರೀರಾಮಸೇನೆ ಸೇನೆ ಆರಂಭಿಸಿರುವ ಲವ್‌ ಜಿಹಾದ್ ವಿರುದ್ಧದ ಸಹಾಯವಾಣಿಗೆ ಕರೆ ಮಾಡಿದ್ದಾಳೆ. ರೇಖಾ ಜೊತೆ ಶ್ರೀರಾಮಸೇನೆ ನಿಂತಿದೆ.

ಶ್ರೀರಾಮಸೇನೆ ಸೇನೆ ಸಂಘಟನೆಯ ಸಹಾಯದಿಂದ ರೇಖಾ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಮುಜಾಹಿದ್ ಖಾನ್ ವಿರುದ್ದ ದೂರು ದಾಖಲಿಸಿದ್ದಾಳೆ. ಬಲವಂತಾಗಿ ಮತಾಂತರ ಆಗು, ಜೀವ ಬೆದರಿಕೆ ಹಾಕುತ್ತಿದ್ದಾನೆ ದೂರು ನೀಡಿದ್ದಾಳೆ. ಮುಜಾಹಿದ್ ಖಾನ್ ವಿರುದ್ಧ IPC 1860 (U/s 323,324,494,504,506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:37 am, Sat, 27 July 24

Follow Us
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ
ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ