AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸ್​​ಗಳನ್ನು ಗುರಿಯಾಗಿಸಿಕೊಂಡು ಹುಬ್ಬಳ್ಳಿಯ ಕಿಮ್ಸ್​ನ ಎಂಬಿಬಿಎಸ್​ ವಿದ್ಯಾರ್ಥಿಗಳಿಂದ ರಿಲ್ಸ್; ವಿಡಿಯೋ ವೈರಲ್​

ಹುಬ್ಬಳ್ಳಿಯ ಕಿಮ್ಸ್​​ನ ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್​​ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆಯ ನರ್ಸ್​​ಗಳನ್ನು ಗುರಿಯಾಗಿಟ್ಟುಕೊಂಡು ಇನ್ಸ್ಟಾಗ್ರಾಮ್​​ನಲ್ಲಿ ರಿಲ್ಸ್ ಮಾಡಿದ್ದಾರೆ. ಇದಕ್ಕೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.

ಶಿವಕುಮಾರ್ ಪತ್ತಾರ್
| Edited By: |

Updated on:Aug 08, 2023 | 9:03 AM

Share

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಮ್​​ನಲ್ಲಿ (Instagram) ರೀಲ್ಸ್​​ (Reels) ಮಾಡುವ ಮೂಲಕ ಸಾಕಷ್ಟು ಜನರು ಪ್ರಸಿದ್ಧಿಯಾಗುತ್ತಿದ್ದಾರೆ. ಹಾಗೇ ಟ್ರೋಲ್​ ಆಗುತ್ತಿದ್ದಾರೆ. ಹಾಗೆಯೇ ರೀಲ್ಸ್​ ಮೂಲಕ ಅದೆಷ್ಟೋ ಪ್ರತಿಭೆಗಳು ಮುನ್ನಲೆಗೆ ಬಂದಿವೆ. ಇದೇರೀತಿ ರಾಜ್ಯದ ಪ್ರಸಿದ್ಧ ಹುಬ್ಬಳ್ಳಿಯ (Hubballi) ಕಿಮ್ಸ್​​ನ ಆಸ್ಪತ್ರೆಯ (Kims) ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್​​ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆಯ ನರ್ಸ್​​ಗಳನ್ನು ಗುರಿಯಾಗಿಟ್ಟುಕೊಂಡು ಇನ್ಸ್ಟಾಗ್ರಾಮ್​​ನಲ್ಲಿ ರಿಲ್ಸ್ ಮಾಡಿದ್ದಾರೆ. ಇದಕ್ಕೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.

ಯಾವುದೇ ಅನುಮತಿ ಪಡೆಯದೆ ಕಿಮ್ಸ್ ಆಸ್ಪತ್ರೆ ಒಳಗಡೆ ನಟ ಪ್ರಜ್ವಲ್ ದೇವರಾಜ್ ಅಭಿನಯದ ಭದ್ರ ಚಿತ್ರದ “ನಂಬೆಡ ನಂಬೆಡ ಹುಡುಗಿರನ್ನು ನಂಬೇಡ” ಅನ್ನೋ ಹಾಡಿಗೆ ವಿದ್ಯಾರ್ಥಿಗಳು ರೀಲ್ಸ್​ ಮಾಡಿದ್ದಾರೆ. ಈ ಹಾಡಿನ ಮಧ್ಯೆ ಬರುವ “ನಂಬೆಡ ನಂಬೆಡ ನರ್ಸ್​​ಗಳನ್ನು ನಂಬೇಡ” ಸಾಲಿಗೆ ನೃತ್ಯ ಮಾಡಿದ್ದಾರೆ. ಈ ವಿಡಿಯೋವನ್ನು ಮಹೇಶ್ ರೆಡ್ಡಿ ಎಂಬುವ ವಿದ್ಯಾರ್ಥಿಯ ಅಕೌಂಟ್​ನಿಂದ ಪೋಸ್ಟ್​ ಮಾಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಪೋಸ್ಟ್​​ ಪ್ರಕರಣ; ಕಿಡಗೇಡಿಯಿಂದ ಪ್ರಚೋದನಕಾರಿ ವಿಡಿಯೋ ಅಪ್ಲೋಡ್ ​

ಸದ್ಯ ಈ ವಿಡಿಯೋ ಫುಲ್ ವೈರಲ್ ಆದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಮತ್ತು ಧಾರವಾಡ ಜಿಲ್ಲಾ ಶುಶ್ರೂಷಕರ ಸಂಘ ಕಿಮ್ಸ್ ನಿರ್ದೇಶಕರಿಗೆ ಪತ್ರ ಬರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:59 am, Tue, 8 August 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ