AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಮ್ಸ್​​ ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಹುಬ್ಬಳ್ಳಿ ಕಿಮ್ಸ್​​ನ ಬಡವರ ಸಂಜೀವಿನಿ ಎಂದು ಕರೆಯುತ್ತಾರೆ. ಕಿಮ್ಸ್​​ಗೆ ಬಂದ್ರೆ ಜೀವ ಉಳಿಯುತ್ತೆ ಎನ್ನುವ ನಂಬಿಕೆಯಿಂದ ಅನೇಕರು ಬರ್ತಾರೆ. ಆದ್ರೆ ಜೀವ ಉಳಿಸಬೇಕಿದ್ದ ಕಿಮ್ಸ್ ಸಿಬ್ಬಂದಿಯೇ ಜೀವ ತೆಗೆಯುವ ಕೆಲಸ ಮಾಡ್ತಿದ್ದಾರೆ ಎನ್ನುವ ಆರೋಪಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿಬರುತ್ತಿವೆ. ಈ ನಡುವೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ನೀಡಲು ಸತಾಯಿಸಿದ ಪರಿಣಾಮ, ಆತ ಬ್ರೈನ್ ಡೆಡ್ ಆಗಿ ಬಾರದ ಲೋಕಕ್ಕೆ ಹೋಗಿದ್ದಾನೆ. ತಮ್ಮ ಮಗನ ಸಾವಿಗೆ ಕಿಮ್ಸ್ ಸಿಬ್ಬಂದಿಯೇ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ. ಅಷ್ಟಕ್ಕೂ ಆಗಿದ್ದೇನೆಂಬ ಮಾಹಿತಿ ಇಲ್ಲಿದೆ.

ಕಿಮ್ಸ್​​ ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಗಂಭೀರ ಗಾಯಗೊಂಡಿದ್ದ ಯುವಕ ಸಾವು
ಮೃತ ಪ್ರಕಾಶ್​​Image Credit source: Tv9 Kannada
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 15, 2026 | 3:54 PM

Share

ಹುಬ್ಬಳ್ಳಿ, ಮಾರ್ಚ್​​ 15: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದರೂ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಕಿಮ್ಸ್​​ ಸಿಬ್ಬಂದಿ ಬೇಜವಾಬ್ದಾರಿ ತೋರಿರುವ ಕಾರಣ ಆತ ಬ್ರೈನ್​ ಡೆಡ್​​ ಆಗಿ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಧಾರವಾಡದ ತಾಲೂಕಿನ ಮೊರಬ ಗ್ರಾಮದ ನಿವಾಸಿ ಪ್ರಕಾಶ್ (25) ಮೃತರಾಗಿದ್ದು, ಜೆಸಿಬಿ ಚಾಲಕನಾಗಿ ಇವರು ಕೆಲಸಮಾಡಿಕೊಂಡಿದ್ದರು. ಮಾರ್ಚ್ 13ರಂದು ಕೆಲಸ ಮುಗಿಸಿ ಬೈಕ್​ನಲ್ಲಿ ತಮ್ಮೂರಿಗೆ ಹೋಗುತ್ತಿದ್ದ ವೇಳೆ ಯಾವುದೋ ಅಪರಿಚಿತವಾಹನ ಡಿಕ್ಕಿಯಾಗಿ ಪ್ರಕಾಶ್​​ ಗಂಭೀರವಾಗಿ ಗಾಯಗೊಂಡಿದ್ದಾರೆ. ಆ್ಯಂಬುಲೆನ್ಸ್​ ಮೂಲಕ ಕೂಡಲೇ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಅಲ್ಲಿನ ವೈದ್ಯರು ಹುಬ್ಬಳ್ಳಿ ಕಿಮ್ಸ್​​ಗೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ಹೀಗಾಗಿ ರಾತ್ರಿಯೇ ಪ್ರಕಾಶ್​​ರನ್ನು ಕಿಮ್ಸ್​​ಗೆ ಕರೆತರಲಾಗಿತ್ತು. ಆದರೆ ಇಲ್ಲಿನ ಸಿಬ್ಬಂದಿ ಮಾತ್ರ ಅರ್ಧ ಗಂಟೆಗೂ ಹೆಚ್ಚು ಕಾಲ ಕಳೆದರೂ ಕನಿಷ್ಠ ಚಿಕಿತ್ಸೆಯನ್ನೂ ನೀಡಿಲ್ಲ. ಬೆಡ್ ಇಲ್ಲವೆಂಬ ಕಾರಣ ಹೇಳಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಕುಟುಂಬಸ್ಥರ ಆರೋಪ.

ಆ್ಯಂಬುಲೆನ್ಸ್​​ನಿಂದ ಗಾಯಾಳುವನ್ನು ಕೆಳಗಿಳಿಸಲೂ ಸಿಬ್ಬಂದಿ ಬಾರದ ಕಾರಣ, ಅರ್ಧಗಂಟೆಗೂ ಹೆಚ್ಚು ಕಾದು ಬಳಿಕ ಅನಿವಾರ್ಯವಾಗಿ ಪ್ರಕಾಶ್​​ರನ್ನು ಮತ್ತೆ ಧಾರವಾಡದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಅಷ್ಟರೊಳಗಾಗಿ ಅವರ ಬ್ರೈನ್ ಡೆಡ್ ಆಗಿದೆ. ಹೀಗಾಗಿ ಮರಳಿ ಮತ್ತೆ ಕಿಮ್ಸ್​​ಗೆ ಕರೆತರಲಾಗಿತ್ತಾದರೂ ಗಾಯಾಳು ಮಾತ್ರ ಬದುಕುಳಿಯಲಿಲ್ಲ. ಧಾರವಾಡ ಜಿಲ್ಲಾ ಆಸ್ಪತ್ರೆಯಿದ ಹುಬ್ಬಳ್ಳಿ ಕಿಮ್ಸ್, ಹುಬ್ಬಳ್ಳಿ ಕಿಮ್ಸ್​​ನಿಂದ ಧಾರವಾಡ ಖಾಸಗಿ ಆಸ್ಪತ್ರೆ ಓಡಾಟದಲ್ಲಿಯೇ ಎರಡು ಗಂಟೆಗೂ ಹೆಚ್ಚು ಸಮಯ ಹೋಗಿದ್ದರಿಂದ ಸೂಕ್ತ ಚಿಕಿತ್ಸೆ ಸಿಗದ ಕಾರಣ ಪ್ರಕಾಶ್ ಬಾರದ ಲೋಕಕ್ಕೆ ಹೋಗಿದ್ದಾರೆ. ಹುಬ್ಬಳ್ಳಿ ಕಿಮ್ಸ್​​ನಲ್ಲಿಯೇ ಸಕಾಲಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಪ್ರಕಾಶ್ ಬದುಕುಳಿಯುತ್ತಿದ್ದರು. ಇಲ್ಲಿನ ಸಿಬ್ಬಂದಿ ಆತನನ್ನು ಬಲಿ ಪಡೆದಿದ್ದಾರೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಧಾರವಾಡದ ಕೇಂದ್ರ ಕಾರಾಗೃಹ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್; ಹಣ ಕೊಟ್ಟರೆ ಎಲ್ಲ ಸಿಗುತ್ತದೆ, ಆಡಿಯೋ ವೈರಲ್

ಇನ್ನು ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಇತ್ತೀಚೆಗೆ ಕೆಲ ಡಿ ಗ್ರೂಪ್ ಸಿಬ್ಬಂದಿ ಹಾಗೂ ವೈದ್ಯರು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇಂತವರ ವಿರುದ್ದ ಮೇಲಾಧಿಕಾರಿಗಳು ಕಠೀಣ ಕ್ರಮ ಕೈಗೊಳ್ಳಬೇಕಿದ್ದು, ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡಿ ಜೀವ ಉಳಿಸುವ ಕೆಲಸ ಮಾಡಬೇಕಿದೆ. ಜನರು ಕಿಮ್ಸ್​​ನ ಬಡವರ ಸಂಜೀವಿನಿ ಎಂದೇ ನಂಬಿರುವ ಕಾರಣ, ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!