AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವನಗರದ ಕಿಮ್ಸ್ ಥೆರಪಿ ಸಂಶೋಧನಾ ಕೇಂದ್ರ ಸರ್ಕಾರದ ಒಂದು ಭಾಗ ಎಂದು ಆದೇಶ ಹೊರಡಸುತ್ತೇನೆ: ಸಿಎಂ ಬೊಮ್ಮಾಯಿ

60 ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆಯನ್ನು ನಮ್ಮ ಸರ್ಕಾರ ಜಾರಿ ಮಾಡಿದೆ. ಹುಟ್ಟು ಕಿವುಡರಿಗೆ ಕಾಕ್ಲೈಯರ್ ಇನಫ್ಲಾಂಟ್ ಯೋಜನೆ ಜಾರಿ ಮಾಡಲಾಗಿದೆ. ಇದಕ್ಕಾಗಿ 500 ಕೋಟಿ ಅನುದಾನ ಕೊಟ್ಟಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನವನಗರದ ಕಿಮ್ಸ್ ಥೆರಪಿ ಸಂಶೋಧನಾ ಕೇಂದ್ರ ಸರ್ಕಾರದ ಒಂದು ಭಾಗ ಎಂದು ಆದೇಶ ಹೊರಡಸುತ್ತೇನೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Jan 10, 2023 | 2:13 PM

Share

ಹುಬ್ಬಳ್ಳಿ-ಧಾರವಾಡ: ನವನಗರದ ಕಿಮ್ಸ್ ಥೆರಪಿ ಸಂಶೋಧನಾ ಕೇಂದ್ರ ಸರ್ಕಾರದ ಒಂದು ಭಾಗ ಎಂದು ಆದೇಶ ಹೊರಡಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಹೇಳಿದರು. ಜಿಲ್ಲೆಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನೇರವಾಗಿ ಇಲ್ಲಿಗೆ ರೋಗಿಗಳನ್ನ ಕಳಿಸಲು ನಾನು ಆದೇಶ ಮಾಡುತ್ತೇನೆ. ಹುಬ್ಬಳ್ಳಿಯಲ್ಲಿ ಒಂದು ಸಂಸ್ಥೆ ಬೆಳೆದರೆ ಅದು ಅಕ್ಕ ಪಕ್ಕದ ಮೂರು ಜಿಲ್ಲೆಗಳಿಗೆ ಉಪಯೋಗವಾಗಲಿದೆ ಎಂದರು. ಡಾ.ಬಸವರಾಜ್ ನಾನು ಕ್ಲಾಸಮೇಟ್. ನಮ್ಮನ್ನ ಬಿಟ್ಟ ಹೋಗಿ ಅವನಿಗೆ ಚುಲೋ ಆಯ್ತು ಎಂದು ಭಾಷಣದ ವೇಳೆ ಮುಖ್ಯಮಂತ್ರಿಯವರು ನಗೆ ಚಟಾಕಿ ಹಾರಿಸಿದರಲ್ಲದೆ, ಬಸವರಾಜ್ ಇನ್ನು ಹೆಚ್ಚಿನ ಹಣ ಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಕಿಮ್ಸ್ ಥೆರಪಿ, ಸಂಶೋಧನಾ ಕೇಂದ್ರಕ್ಕೆ 5 ಕೋಟಿ ಕೊಡುತ್ತೇನೆ. ಕ್ಯಾನ್ಸರ್ ಆಸ್ಪತ್ರೆಗೆ ನಾವು ಎಲ್ಲಾ ರೀತಿಯ ಬೆಂಬಲ ನೀಡುತ್ತೇವೆ ಎಂದರು.

60 ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ಚಿಕಿತ್ಸೆ ನೀಡಲು ನಮ್ಮ ಸರ್ಕಾರ ಯೋಜನೆ ಜಾರಿಗೆ ತಂದಿದೆ. ಹುಟ್ಟು ಕಿವುಡರಿಗೆ ಕಾಕ್ಲೈಯರ್ ಇನಫ್ಲಾಂಟ್ ಯೋಜನೆ ಜಾರಿ ಮಾಡಲಾಗಿದ್ದು, ಇದಕ್ಕಾಗಿ 500 ಕೋಟಿ ಅನುದಾನ ಕೊಟ್ಟಿದ್ದೇವೆ. 437 ನಮ್ಮ ಕ್ಲಿನಿಕ್, 12 ಕಿಮೋಥೆರಪಿ ಸೆಂಟರ್ ಮಾಡಿದ್ದೇವೆ. ಡಯಾಲಿಸಸ್​ಗಾಗಿ ಬಜೆಟ್​ನಲ್ಲಿ ಹಣ ಕೊಟ್ಟಿದ್ದೇವೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. 12 ಕಡೆ ಕಿಮೋ ಥೆರಪಿ ಸೆಂಟರ್ ಮಾಡಿದ್ದೇವೆ. ಡಯಾಲಿಸಿಸ್​ಗಾಗಿ ಬಜೆಟ್​ನಲ್ಲಿ ಹಣ ಕೊಟ್ಟಿದ್ದೇವೆ ಎಂದರು.

ಇದನ್ನೂ ಓದಿ: ಸ್ಯಾಂಟ್ರೋ ರವಿಗೆ ಸೇರಿದ ಆಸ್ತಿ ಜಪ್ತಿಗೂ ಕ್ರಮ ಕೈಗೊಳ್ಳಲಾಗಿದೆ: ಸಿಎಂ ಬೊಮ್ಮಾಯಿ

ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದೆ. ನಾಲ್ಕು ಹೊಸ ಮೆಡಿಕಲ್ ಕಾಲೇಜ್ ಬರಲಿವೆ. ಹುಬ್ಬಳ್ಳಿಗೆ ಜಯದೇವ್ ಇನಸ್ಟಿಟ್ಯೂಟ್ ಮಂಜೂರಾಗಿದೆ. ಮುಂದಿನ ತಿಂಗಳು ಹುಬ್ಬಳ್ಳಿ ಜಯದೇವ ಸಂಸ್ಥೆಯ ಅಡಿಗಲ್ಲು ಹಾಕುವ ಕಾರ್ಯಕ್ರಮ ಇದೆ. 250 ಕೋಟಿ ಹಣ ಸಾಲಲ್ಲ, ಹೆಚ್ಚಿನ ಹಣ ಕೊಡುತ್ತೇನೆ ಎಂದರು. ಅಲ್ಲದೆ ನಮ್ಮ ಸರ್ಕಾರ ಆರೋಗ್ಯ ವಿಚಾರದಲ್ಲಿ ಬಹಳ ಕೆಲಸ ಮಾಡಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು