Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು: ವೇಳಾಪಟ್ಟಿ ಮತ್ತು ನಿಲ್ದಾಣಗಳ ಮಾಹಿತಿ ಇಲ್ಲಿದೆ

ನೈಋತ್ಯ ರೈಲ್ವೆ, ಶಬರಿಮಲೆ ಯಾತ್ರಿಕರಿಗೆ ಅನುಕೂಲವಾಗುವಂತೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸಿದೆ. ನವೆಂಬರ್ 19 ರಿಂದ ಜನವರಿ 15ರವರೆಗೆ ಈ ರೈಲು ಸಂಚರಿಸಲಿದೆ. ವಾರಕ್ಕೊಮ್ಮೆ ಹೆಚ್ಚುವರಿ ರೈಲು ಸಹ ಸಂಚರಿಸಲಿದೆ.

ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು: ವೇಳಾಪಟ್ಟಿ ಮತ್ತು ನಿಲ್ದಾಣಗಳ ಮಾಹಿತಿ ಇಲ್ಲಿದೆ
ರೈಲು
Follow us
ವಿವೇಕ ಬಿರಾದಾರ
|

Updated on:Nov 17, 2024 | 9:16 AM

ಹುಬ್ಬಳ್ಳಿ, ನವೆಂಬರ್​ 17: ಶಬರಿಮಲೆ (Sabarimala) ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ (South Westran Railway) ಕರ್ನಾಟಕದಿಂದ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಮೂರು ತಿಂಗಳು ರೈಲು ಓಡಲಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯವು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದೆ.

ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.

  1. ರೈಲು ಸಂಖ್ಯೆ 07371 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ.
  2. ರೈಲು ಸಂಖ್ಯೆ 07372 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.

2 ಎಸಿ ಟು ಐಉರ್​, 2 ಎಸಿ ತ್ರಿ ಟೈಯರ್​, 6 ಸ್ಲೀಪರ್​ ಕ್ಲಾಸ್​, 6 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 2 ಎಸ್​ಎಲ್​ಆರ್​ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಬೆಂಗಳೂರು ರೈಲು ಸಮಯ ಬದಲಾವಣೆ

ವಾರಕ್ಕೊಮ್ಮೆ ವಿಶೇಷ ರೈಲು

ಹೆಚ್ಚುವರಿಯಾಗಿ ಇನ್ಮುಂದೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೋಮ್ಮೆ ಒಂದು ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ.

  1. ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ.
  2. ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ರೈಲು ಎಸಿ ಟು ಟೈಯರ್​​, ಎಸಿ ತ್ರೀ ಟೈಯರ್​​, ಸ್ಲೀಪರ್​​ ಕ್ಲಾಸ್​, ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು ಎಸ್​ಎಲ್​ಆರ್​ಡಿ ಬೋಗಿಗಳನ್ನು ಹೊಂದಿದೆ.

ಟ್ವಿಟರ್​ ಪೋಸ್ಟ್​

ಎಲ್ಲೆಲ್ಲಿ ನಿಲುಗಡೆ?

ಎಸ್​ಎಸ್​ಎಸ್​ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್​ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್​, ತಿರುಪ್ಪೂರು, ಪೋದನೂರು, ಪಾಲಕ್ಕಾಡ್​, ತ್ರಿಶೂರ್​, ಅಲುವ, ಎರ್ನಾಕುಲಂ ಟೌನ್​, ಎಟ್ಟುಮನೂರ್​ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲುಗಳಗಳ ನಿಲುಗಡೆಗಳು ಮತ್ತು ಸಮಯಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ಆದ www.enquiry.indianrail.gov.in ಗೆ ಅಥವಾ NTES ಆ್ಯಪ್​ ಮೂಲಕ ಅಥವಾ 139ಕ್ಕೆ ಡಯಲ್​ ಮಾಡುವ ಮೂಲಕ ತಿಳಿದುಕೊಳ್ಳಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Sun, 17 November 24

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ