AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಹತ್ಯೆ ಖಂಡಿಸಿ ಸದ್ಭಾವ ವೇದಿಕೆಯಿಂದ ಹುಬ್ಬಳ್ಳಿಯಲ್ಲಿ ಬೃಹತ್​ ಪಂಜಿನ ಮೆರವಣಿಗೆ

ಗುರುವಾರ (ಏ.18) ರಂದು ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಕರಣದ ತನಿಖೆಯನ್ನು ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಗೆ ನೀಡಿದೆ. ಈ ಮಧ್ಯೆ ಹುಬ್ಬಳ್ಳಿಯ ಸದ್ಭಾವ ವೇದಕೆ ಬೃಹತ ಪಂಜಿನ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ನೇಹಾ ಹತ್ಯೆ ಖಂಡಿಸಿ ಸದ್ಭಾವ ವೇದಿಕೆಯಿಂದ ಹುಬ್ಬಳ್ಳಿಯಲ್ಲಿ ಬೃಹತ್​ ಪಂಜಿನ ಮೆರವಣಿಗೆ
ನೇಹಾ ಹಿರೇಮಠ ಹತ್ಯೆ ಖಂಡಿಸಿ ಪ್ರತಿಭಟನೆ
ವಿವೇಕ ಬಿರಾದಾರ
|

Updated on:Apr 26, 2024 | 2:55 PM

Share

ಹುಬ್ಬಳ್ಳಿ, ಏಪ್ರಿಲ್​ 26: ನಗರದ ಬಿವಿಬಿ ಕಾಲೇಜು (BVB College) ಆವರಣದಲ್ಲಿ ಕಳೆದ ಗುರುವಾರ (ಏ.18) ರಂದು ಹಾಡುಹಗಲೆ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ (Niranjan Hiremath) ಅವರ ಪುತ್ರಿ, ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ನೇಹಾ ಕೊಲೆ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆ (CID) ತನಿಖೆ ನಡೆಸುತ್ತಿದ್ದು, ಆರೋಪಿ ಫಯಾಜ್​ನನ್ನು ವಶಕ್ಕೆ ಪಡೆದುಕೊಂಡಿದೆ. ಈ ಮಧ್ಯೆ ಹುಬ್ಬಳ್ಳಿಯ ಸದ್ಭಾವ ವೇದಿಕೆ ನೇಹಾ ಹತ್ಯೆ ಖಂಡಿಸಿ ನಾಳೆ (ಏ.27) ರಂದು ನಗರದಲ್ಲಿ ಮೌನವಾಗಿ ಪಂಜಿನ ಮೆರವಣಿಗೆ ಮಾಡಲು ನಿರ್ಧರಿಸಿದೆ.

ರಾಷ್ಟ್ರವಿರೋಧಿ ಹಾಗೂ ಜಿಹಾದಿ ಮಾನಸಿಕತೆ ವಿರೋಧಿಸಿ, ಅಮಾಯಕ ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ ಹಾಗೂ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ತುಷ್ಠೀಕರಣದ ನೀತಿಯನ್ನು ವಿರೋಧಿಸಿ ಬೃಹತ ಪ್ರತಿಭಟನಾ ಮೆರವಣಿಗೆಗೆ ಸದ್ಭಾವ ವೇದಿಕೆ ಕರೆ ನೀಡಿದೆ. “ಲವ್​ ಜಿಹಾದ್​ಗೆ ಬಲಿಯಾಗುತ್ತಿದ್ದಾರೆ ಮನೆಯ ಹೆಣ್ಣುಮಕ್ಕಳು ನಿನ್ನೆ ನೇಹಾ ನಾಳೆ ನಮ್ಮ ಮಗಳು!” ಎಂಬ ಘೋಷ ವಾಕ್ಯದೊಂದಿಗೆ ಸದ್ಭಾವ ವೇದಿಕೆ ಮೌನಯುತವಾಗಿ ಪಂಜಿನ ಮೆರವಣಿಗೆ ನಡೆಸಲಿದೆ.

ಮೆರವಣಿಗೆ, ಮೂರುಸಾವಿರ ಮಠದ ಮೈದಾನದಿಂದ ಆರಂಭವಾಗಿ ಮಹಾವೀರ ಓಣಿ – ತುಳಜಾ ಭವಾನಿ ವೃತ್ತ – ದಾಜಿಬಾನ್​ ಪೇಟೆ ಮುಖಾಂತರ ಕಿತ್ತೂರು ರಾಣಿ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಅಂತ್ಯಗೊಳ್ಳಲಿದೆ.

ಇದನ್ನೂ ಓದಿ: ನೇಹಾ ಹಿರೇಮಠಳನ್ನು 14 ಬಾರಿ ಕೊಚ್ಚಿ ಕೊಂದ ಫಯಾಜ್​

ಈ ಬೃಹತ್​ ಪ್ರತಿಭಟನಾ ಮೆರವಣಿಗೆ ಕುರಿತಾಗಿ ಸದ್ಭವ ವೇದಿಕೆ ಸದಸ್ಯ, ಕಾರ್ಯಕ್ರಮ ಸಂಯೋಜಕ ಸುಭಾಷ್​ ಸಿಂಗ್​ ಜಮಾದಾರ ಮಾತನಾಡಿ, “ನೇಹಾ ಹತ್ಯೆ ಪ್ರಕರಣ ಮುನ್ನಲೆ ಮಾಡಿಕೊಂಡು, ಇದುವರೆಗೆ ಲವ್​ ಜಿಹಾದ್​ಗೆ ಬಲಿಯಾದ ಹೆಣ್ಣಮಕ್ಕಳಿಗೆ ನ್ಯಾಯಕೊಡಿಸುವ ನಿಟ್ಟಿನಲ್ಲಿ, ರಾಜ್ಯದಲ್ಲಿ ನಡೆಯುತ್ತಿರುವ ಮುಸ್ಲಿಂ ದಬ್ಬಾಳಿಕೆ, ಸರ್ಕಾರದ ಮುಸ್ಲಿಂ ತುಷ್ಟಿಕರಣ ಮತ್ತು ದೇಶ ವಿರೋಧಿ ಚಟುವಟಿಕೆಗಳನ್ನು ವಿರೋಧಿಸಿ ಪಂಜಿನ ಮೆರವಣಿಗೆ ಮಾಡುತ್ತಿದ್ದೇವೆ. ಅಲ್ಲದೆ ಹಿಂದೂ ಸಾಮಾಜದ ಒಗ್ಗಟ್ಟು ಮತ್ತು ಶಕ್ತಿ ಪ್ರದರ್ಶನಕ್ಕೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ಹಿಂದೂಗಳು ಒಗ್ಗಟ್ಟಾಗಿದ್ದು, ಜಿಹಾದಿ ಮಾನಸಿಕತೆ ಇರುವವರಿಗೆ ದಿಟ್ಟ ಸಂದೇಶ ನೀಡಲಿದ್ದೇವೆ” ಎಂದು ಹೇಳಿದರು.

ಪ್ರತಿಭಟನಾ ಮೆರಣಿಗೆಗೂ ಮುನ್ನ ಸಭೆ ನಡೆಯಲಿದೆ. ಸಭೆಯ ಸಾನಿಧ್ಯವನ್ನು ಮೂರುಸಾವಿರ ಮಠದ ಶ್ರೀ ಗುರುಸಿದ್ಧರಾಜಯೋಗಿಂದ್ರ ಮಹಾ ಸ್ವಾಮಿಗಳು ವಹಿಸಲಿದ್ದಾರೆ. ವಾಗ್ಮಿ, ಯುವಾ ಬ್ರಿಗೇಡ್​ ಸ್ಥಾಪಕ ಚಕ್ರವರ್ತಿ ಸೂಲೆಬೆಲೆ ಮುಖ್ಯ ಭಾಷಣ ಮಾಡಲಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​​ನ ಶಿವಾನಿ ಶೆಟ್ಟಿ, ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಭಾಗ್ಯಶ್ರೀ ಬೆಳ್ಳೆ ಉಪಸ್ಥಿತಿ ಇರಲಿದ್ದಾರೆ.

ಕಾರ್ಯಕ್ರಮವು ಶನಿವಾರ (ಏ.27) ಸಾಯಂಕಲ 6 ಗಂಟೆಗೆ ಮೂರುಸಾವಿರ ಮಠ ಶಾಲೆಯ ಮೈದಾನದಲ್ಲಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:54 pm, Fri, 26 April 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ