AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ

ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಕೊಲೆಗಳಾದವು. ಇದೀಗ, ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗೆ ಐವರು ಹಲ್ಲೆ ಮಾಡಲಾಗಿದೆ. ಅಶೋಕ ನಗರ ​ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ
ಬಾಲಕನ ಮೇಲೆ ಹಲ್ಲೆ ದೃಶ್ಯ
ಶಿವಕುಮಾರ್ ಪತ್ತಾರ್
| Edited By: |

Updated on: Jul 08, 2024 | 10:39 AM

Share

ಹುಬ್ಬಳ್ಳಿ, ಜುಲೈ 08: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ (Hubballi) ಅಶೋಕನಗರ ಠಾಣೆ ಪೊಲೀಸರು (Police) ವಶಕ್ಕೆ ಪಡೆದುಕೊಂಡಿದ್ದಾರೆ. ಶಾಲಾ ವಿದ್ಯಾರ್ಥಿ ಓರ್ವ ಯುವತಿಯೊಂದಿಗೆ ಮಾತನಾಡುತ್ತಿದ್ದನು. ಇದನ್ನು ಕಂಡ ಕೆಲ ಹುಡುಗರು ಯುವತಿಯೊಂದಿಗೆ ಏಕೆ ಮಾತನಾಡಿದ್ದಿ ಎಂದು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಮಾತಿನ ಚಕಮಕಿ ಆಗಿದೆ. ಇದು ವಿಕೋಪಕ್ಕೆ ತಿರುಗಿದ್ದು, ವಿದ್ಯಾರ್ಥಿಗೆ ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದಿದ್ದಾರೆ.

ಈ ವಿಚಾರ ವಿದ್ಯಾರ್ಥಿಯ ಶಾಲೆಯ ಪ್ರಾಂಶುಪಾಲರಿಗೆ ತಿಳಿದಿದೆ. ಪ್ರಾಂಶುಪಾಲರು ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಾಂಶುಪಾಲರು ನೀಡಿದ ದೂರಿನ ಅನ್ವಯ ಪೋಲೀಸರ ತನಿಖೆ ನಡೆಸಿ, ಹಲ್ಲೆ ಮಾಡಿದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಲ್ಲೆ ಮಾಡಿದವರು ವಿವಿಧ ಶಾಲೆ ಮತ್ತು ಕಾಲೇಜಿಗೆ ಸೇರಿದವರೆಂಬ ಮಾಹಿತಿ ದೊರೆತಿದ್ದು, ಒಟ್ಟು ಐವರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಎಣ್ಣೆ ಹೊಡೆಯುವ ವಿಚಾರಕ್ಕಾಗಿ ನಡೆಯಿತು ಆಕಾಶ್​ ಮಠಪತಿ ಕೊಲೆ!

ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಫ್ರಾನ್ಸಿಸ್ ಉಡುಮಿಲ ಸೇರಿದಂತೆ ಐವರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಶಾಲಾ – ಕಾಲೇಜು ಪ್ರಾಂಶುಪಾಲರಿಗೆ, ಪೋಷಕರಿಗೆ ಪೊಲೀಸರು ಮಕ್ಕಳ ಮೇಲೆ ನಿಗಾ ಇರಲಿ ಎಂದು ಸೂಚನೆ ನೀಡಿದ್ದಾರೆ.

ಮದ್ಯ ಕುಡಿಯುವ ವಿಚಾರವಾಗಿ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವೆ ಗಲಾಟೆಯಾಗಿತ್ತು. ಈ ಗಲಾಟೆಯಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪತ್ರ ಆಕಾಶ್​ನ ಕೊಲೆಯಾಗಿತ್ತು.

ಗ್ರಾಮ ಪಂಚಾಯತಿ ಸದಸ್ಯನ ಕೊಲೆ

ಹೊಸಕೋಟೆ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ನಡೆದಿದೆ. ಅಪಾಕ್ ಅಮಿರ್ ಖಾನ್ (45) ಮೃತ ಗ್ರಾಮ ಪಂಚಾಯತಿ ಸದಸ್ಯ.

ಅಪಾಕ್ ಅಮಿರ್ ಖಾನ್ ಗ್ರಾಮ ಪಂಚಾಯತಿ ಮುಂದೆ ಪೋನ್ ಮಾತನಾಡುತ್ತಾ ನಿಂತಿದ್ದ ವೇಳೆ ಗ್ರಾಮದ ಮೆಹಬೂಬ್ ಎಂಬುವನು ಏಕಾಏಕಿ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ಮಾಡಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್