AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮತದಾನ ಮಾಡಿದವರಿಗೆ ರಿಯಾತಿ ದರದಲ್ಲಿ ಉಪಾಹಾರ

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದೆ. ಅಂದು ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಬೀದಿ ಬದಿ ಹೊಟೇಲ್​ ವ್ಯಪಾರಿ ರಿಯಾತಿ ದರದಲ್ಲಿ ಉಪಾಹಾರ ನೀಡಲು ನಿರ್ಧರಿಸಿದ್ದಾರೆ. ಹುಬ್ಬಳ್ಳಿಯ ದುರ್ಗದಬೈಲ್ ಸರ್ಕಲ್‌ನ ಇಡ್ಲಿ ಮಾರಾಟಗಾರ ಭಾಸ್ಕರ್ ಡೋಂಗ್ರೆ ಅವರು ಮೇ 7 ರಂದು ಮತ ಚಲಾಯಿಸುವವರಿಗೆ ಕೇವಲ 5 ರೂಪಾಯಿಗೆ ಇಡ್ಲಿ ನೀಡುವುದಾಗಿ ಘೋಷಿಸಿದ್ದಾರೆ.

ಹುಬ್ಬಳ್ಳಿ: ಮತದಾನ ಮಾಡಿದವರಿಗೆ ರಿಯಾತಿ ದರದಲ್ಲಿ ಉಪಾಹಾರ
ಮತದಾನ ಮಾಡಿದವರಿಗೆ ರಿಯಾತಿ ದರದಲ್ಲಿ ಉಪಹಾರ
ವಿವೇಕ ಬಿರಾದಾರ
|

Updated on:May 06, 2024 | 8:04 AM

Share

ಹುಬ್ಬಳ್ಳಿ ಮೇ 06: ಲೋಕಸಭೆ ಚುನಾವಣೆಗೆ (Lok Sabha Election) ರಾಜ್ಯದ ಮೊದಲ ಹಂತದ ಮತದಾನ (Voting) ದಿನ ಬೆಂಗಳೂರಿನ (Bengaluru) ಹೊಟೇಲ್​​ಗಳು ಮತದಾನ ಮಾಡಿದವರಿಗೆ ಉಚಿತ ಆಹಾರ ನೀಡಿದ್ದವು. ಇದೀಗ ರಾಜ್ಯದ ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅಂದು ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ (Hubballi) ಬೀದಿ ಬದಿ ಹೊಟೇಲ್​ ವ್ಯಪಾರಿ ರಿಯಾತಿ ದರದಲ್ಲಿ ಉಪಾಹಾರ ನೀಡಲು ನಿರ್ಧರಿಸಿದ್ದಾರೆ. ಹುಬ್ಬಳ್ಳಿಯ ದುರ್ಗದಬೈಲ್ ಸರ್ಕಲ್‌ನ (Durgadbail Circle) ಇಡ್ಲಿ ಮಾರಾಟಗಾರ ಭಾಸ್ಕರ್ ಡೋಂಗ್ರೆ ಅವರು ಮೇ 7 ರಂದು ಮತ ಚಲಾಯಿಸುವವರಿಗೆ ಕೇವಲ 5 ರೂಪಾಯಿಗೆ ಇಡ್ಲಿ ನೀಡುವುದಾಗಿ ಘೋಷಿಸಿದ್ದಾರೆ.

ರಿಯಾತಿ ದರದಲ್ಲಿ ಉಪಹಾರ ಸೇವಿಸಬೇಕಿದ್ದರೇ ಗ್ರಾಹಕರು ತಮ್ಮ ಶಾಯಿ ಹಚ್ಚಿದ ಬೆರಳನ್ನು ತೋರಿಸಬೇಕು. ರಿಯಾತಿ ದರದಲ್ಲಿ ಇಡ್ಲಿ ನೀಡುವ ಮೂಲಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳುವುದು ಭಾಸ್ಕರ್ ಡೋಂಗ್ರೆ ಅವರ ಉದ್ದೇಶವಾಗಿದೆ.

ಈ ಬಗ್ಗೆ ಹೊಟೇಲ್​ ಮಾಲಿಕ ಭಾಸ್ಕರ್ ಡೋಂಗ್ರೆ ಮಾತನಾಡಿ, ನಗರ ಪ್ರದೇಶಗಳಲ್ಲಿನ ಕಳಪೆ ಮತದಾವನ್ನು ನೋಡಿದಾಗ, ನಾನು ಒಂದು ಇಡ್ಲಿಯನ್ನು 5 ರೂ.ಗೆ ಮಾರಾಟ ಮಾಡಲು ಯೋಜಿಸಿದೆ. ಇದು ಸಾಮಾನ್ಯ ಬೆಲೆಗಿಂತ ಅರ್ಧದಷ್ಟಾಗಿದೆ. ಪ್ರಸ್ತುತ, ನಾನು ಸುಮಾರು 500 ಮತದಾರರಿಗೆ ರಿಯಾತಿ ದರದಲ್ಲಿ ಇಡ್ಲಿ ನೀಡಲು ನಿರ್ಧರಿಸಿದ್ದೇನೆ. ಈ ಸಂಖ್ಯೆ ಮೀರಿದರೂ ನಾನು ಸಿದ್ಧನಿದ್ದೇನೆ. ನಾನು ಇದನ್ನು ಮೊದಲ ಬಾರಿಗೆ ಮಾಡುತ್ತಿರುವುದರಿಂದ, ಮತ ಚಲಾಯಿಸಿದ ನಂತರ ಎಷ್ಟು ಜನರು ನನ್ನ ಹೊಟೇಲ್​ ಭೇಟಿ ನೀಡುತ್ತಾರೆ ಎಂಬುದು ನನಗೆ ತಿಳಿದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ 2024: ಬಹಿರಂಗ ಪ್ರಚಾರಕ್ಕೆ ಬ್ರೇಕ್, ಮೇ 7ಕ್ಕೆ 14 ಕ್ಷೇತ್ರಗಳಿಗೆ ಮತದಾನ

ಹೊಟೇಲ್​ ಬೆಳಿಗ್ಗೆ 7 ಗಂಟೆಗೆ ತೆರೆಯುತ್ತೇನೆ. ನಾನು ಇಡ್ಲಿಗಳನ್ನು ಬೆಳಿಗ್ಗೆ 9 ಗಂಟೆಯವರೆಗೆ ಮಾರಾಟ ಮಾಡಲು ಯೋಜಿಸಿದೆ. ಅಗತ್ಯವಿದ್ದರೆ, ನಾನು ಸಮಯವನ್ನು ವಿಸ್ತರಿಸುತ್ತೇನೆ. ರಿಯಾತಿ ದರದಲ್ಲಿ ಇಡ್ಲಿ ಪಡೆಯಲು ಮತದಾರರು ತಮ್ಮ ಶಾಯಿಯ ಬೆರಳನ್ನು ತೋರಿಸಬೇಕು. ಯಾವುದೇ ಪಾರ್ಸೆಲ್ ಸೇವೆಯನ್ನು ಒದಗಿಸುವುದಿಲ್ಲ ಹೇಳಿದರು.

ಇದೊಂದು ಉತ್ತಮ ಉಪಕ್ರಮ ಎಂದು ಸಾಮಾಜಿಕ ಹೋರಾಟಗಾರ ವಾದಿರಾಜ ಕುಲಕರ್ಣಿ ಹೇಳಿದರು. “ಜನರು ಮತದಾನಕ್ಕಾಗಿ ಮನೆಯಿಂದ ಹೊರಬಂದು ತಮ್ಮ ಹಕ್ಕು ಚಲಾಯಿಸಬೇಕು” ಎಂದು ಅವರು ಮನವಿ ಮಾಡಿದರು.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:52 am, Mon, 6 May 24

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು