AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಗ್ಗಣಗಳ ಕಾಟ ತಪ್ಪಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಹುಬ್ಬಳ್ಳಿಯ ವ್ಯಕ್ತಿ

ಇತ್ತೀಚಿಗೆ ಚಿತ್ರ-ವಿಚಿತ್ರ ಪ್ರಕರಣಗಳು ಪೊಲೀಸ್​ ಠಾಣೆಯಲ್ಲಿ ದಾಖಲಾಗುತ್ತಿವೆ. ಪಕ್ಕದ ಮನೆಯಲ್ಲಿನ ಹೆಗ್ಗಣಗಳ ಕಾಟದಿಂದ ಮುಕ್ತಿ ನೀಡಿ ಎಂದು ಹುಬ್ಬಳ್ಳಿಯ ಆನಂದನಗರ ನಿವಾಸಿಯೊಬ್ಬರು ಹಳೆ ಹುಬ್ಬಳ್ಳಿಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೆಗ್ಗಣಗಳ ಕಾಟ ತಪ್ಪಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಹುಬ್ಬಳ್ಳಿಯ ವ್ಯಕ್ತಿ
ದೂರುದಾರ ಅನಿಲ್​ ಮುಂಡರಗಿ
ಶಿವಕುಮಾರ್ ಪತ್ತಾರ್
| Edited By: |

Updated on:May 29, 2024 | 9:59 AM

Share

ಹುಬ್ಬಳ್ಳಿ, ಮೇ 29: ಇತ್ತೀಚಿಗೆ ಜನರು ವಿಚಿತ್ರ ಕಾರಣಗಳಿಗಾಗಿ ಪೊಲೀಸ್​ ಠಾಣೆ (Police Station) ಮೆಟ್ಟಿಲೇರುತ್ತಿದ್ದಾರೆ. ಹೆಗ್ಗಣಗಳಿಂದ (Bandicoot) ಮುಕ್ತಿ ನೀಡುವಂತೆ ಹಳೆ ಹುಬ್ಬಳ್ಳಿಯ (Old Hubballi) ಆನಂದ ನಗರ ನಿವಾಸಿ ಅನಿಲ್ ಮುಂಡರಗಿ ಎಂಬುವರು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಅನಿಲ್ ಮುಂಡರಗಿ ಅವರ ಪಕ್ಕದ ಮನೆಯಲ್ಲಿನ ಹಗ್ಗೆಣಗಳಿಂದ ನಮಗೆ ನೆಮ್ಮದಿ ಹಾಳಾಗಿದೆ. ಹೆಗ್ಗಣಗಳು ನಮ್ಮ ಮನೆಯಲ್ಲಿನ ಗ್ಯಾಸ್ ಪೈಪ್ ಲೈನ್, ಸಿಂಕ್ ಪೈಪ್ ಲೈನ್ ಕತ್ತರಿಸಿವೆ. ಎಲ್ಲೆಂದರಲ್ಲಿ ನೆಲ ಅಗೆದು ಮಣ್ಣು ಹೊರ ಹಾಕುತ್ತಿವೆ. ಮನೆಯಲ್ಲಿ ಎಲ್ಲೆಂದರಲ್ಲಿ ರಂಧ್ರಗಳು ಬಿದ್ದಿವೆ ಎಂದು ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರತಿದಿನ 15 ರಿಂದ 20 ಹೆಗ್ಗಣಗಳು ಕಾಟ ಕೊಡುತ್ತಿವೆ. ಪಕ್ಕದ ಮನೆಯವರಿಗೆ ಸಾಕಷ್ಟು ಬಾರಿ ಹೇಳಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ನೀವೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕು. ಸಿಲಿಂಡರ್ ಸೋರಿಕೆಯಾಗಿ ಅನಾಹುತವಾದರೆ ಯಾರು ಹೊಣೆ ಎಂದು ಅನೀಲ್​ ಅವರು ಪೊಲೀಸರಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸೋರುತ್ತಿವೆ ಧಾರವಾಡ ಜಿಲ್ಲೆಯ 469 ಸರ್ಕಾರಿ ಶಾಲೆಗಳ ಕೊಠಡಿಗಳು

ದೂರು ಆಧರಿಸಿ ಪೊಲೀಸರು ಅನಿಲ್​ ಅವರ ಪಕ್ಕದ ಮನೆಯ ಮಾಲೀಕ ಸಿದ್ದು ಅಂಗಡಿ ಎಂಬುವರನ್ನು ಕರೆಯಿಸಿ, ನಾಲ್ಕೈದು ದಿನಗಳಲ್ಲಿ ಹೆಗ್ಗಣಗಳ ನಿಯಣಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ, ಮುಚ್ಚಳಿಕೆ ಬರೆಯಿಸಿಕೊಂಡಿದ್ದಾರೆ. ಇನ್ನು ಅನೀಲ್​ ಅವರ ಪಕ್ಕದ ಮನೆಯಲ್ಲಿ ಯಾರೂ ವಾಸಿಸುವುದಿಲ್ಲ.

ಹೀಗಾಗಿ ಅಲ್ಲಿ ಹೆಗ್ಗಣಗಳು ಬೀಡು ಬಿಟ್ಟಿದ್ದೇ ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣವಾಗಿದೆ ಎಂದು ಅನಿಲ ಮುಂಡರಗಿ ನೆರೆಹೊರೆಯವರು ಹೇಳಿದ್ದಾರೆ. ಯಾವುದೇ ಕ್ರಮ ಆಗದೇ ಇದ್ದಲ್ಲಿ ಮತ್ತೆ ಪೊಲೀಸರ ಮೊರೆ ಹೋಗೋದಾಗಿ ಅನಿಲ್ ಮುಂಡರಗಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Wed, 29 May 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ