AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್​ ಪ್ರಾಣ ತಗೊಳ್ಳುವೆ; ಮಗಳ ಶವದ ಮೇಲೆ ಶಪಥ ಮಾಡಿದ್ದೇನೆಂದ ನೇಹಾ ತಂದೆ ಹಿರೇಮಠ

ಆರೋಪಿ ಫಯಾಜ್ ನನ್ನ ಮಗಳನ್ನು ಅಪಹರಿಸಿಕೊಂಡು ಹೋಗಲು ಯತ್ನಿಸಿದ್ದ. ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್​ ಪ್ರಾಣ ತಗೊಳ್ಳುತ್ತೇನೆ ಎಂದು ಶಪಥ ಮಾಡಿರುವ ನಿರಂಜನ್ ಹಿರೇಮಠ, ಆರೋಪಿ ಫಯಾಜ್​ಗೆ ಸಹಾಯ‌ ಮಾಡಿದವರನ್ನೂ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್​ ಪ್ರಾಣ ತಗೊಳ್ಳುವೆ; ಮಗಳ ಶವದ ಮೇಲೆ ಶಪಥ ಮಾಡಿದ್ದೇನೆಂದ ನೇಹಾ ತಂದೆ ಹಿರೇಮಠ
ನಿರಂಜನ ಹಿರೇಮಠ
ಶಿವಕುಮಾರ್ ಪತ್ತಾರ್
| Edited By: |

Updated on:Apr 25, 2024 | 2:44 PM

Share

ಹುಬ್ಬಳ್ಳಿ, ಏಪ್ರಿಲ್ 25: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಹುಬ್ಬಳ್ಳಿ (Hubballi) ವಿದ್ಯಾರ್ಥಿನಿ ನೇಹಾ ಕೊಲೆ (Neha Murder) ಪ್ರಕರಣ ದಿಢೀರಾಗಿ ಸಂಭವಿಸಿದ್ದಲ್ಲ. ಆರೋಪಿ ಫಯಾಜ್ ವಾರದ ಮೊದಲೇ ಸಿದ್ಧತೆ ಮಾಡಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ, ನೇಹಾಳನ್ನು ಅಪಹರಿಸಲು ಆತ ಯತ್ನಿಸಿದ್ದ ಎಂದು ಆಕೆಯ ತಂದೆ ನಿರಂಜನ ಹಿರೇಮಠ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತಂಡದಿಂದ ನೇಹಾ ತಂದೆ ನಿರಂಜನ, ತಾಯಿ ಗೀತಾ ವಿಚಾರಣೆ ನಡೆಯಿತು. ಬಳಿಕ ನಿರಂಜನ ಹಿರೇಮಠ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್​ ಪ್ರಾಣ ತಗೊಳ್ಳುತ್ತೇನೆ. ನನ್ನ ಮಗಳ ಶವದ ಮೇಲೆ ನಾನು ಶಪಥ ಮಾಡಿದ್ದೇನೆ. ಆರೋಪಿ ಫಯಾಜ್​ಗೆ ಸಹಾಯ‌ ಮಾಡಿದವರನ್ನೂ ಬಂಧಿಸಬೇಕು ಎಂದು ನಿರಂಜನ ಹಿರೇಮಠ ಆಗ್ರಹಿಸಿದ್ದಾರೆ.

ಎಲ್ಲ ವಿಷಯಗಳನ್ನು ಸಿಐಡಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ನಿನ್ನೆ ಫಯಾಜ್​ನನ್ನು ಮಹಜರು ಮಾಡಿರುವ ಬಗ್ಗೆಯೂ ಅವರು ತಿಳಿಸಿದರು. ಹಂತಕ ಫಯಾಜ್ ನನ್ನ ಮಗಳನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದ. ಕೆಲ ದಿನಗಳಿಂದ ನಮಗೆ ಬೆದರಿಕೆ ಇದೆ. ಯಾಱರೋ ಮನೆಗೆ ಬಂದು ವಿಡಿಯೋ ಮಾಡುತ್ತಿದ್ದಾರೆ. ಕೆಲ ದಿನಗಳಿಂದ ಅನಾಮಿಕರು ಮನೆ ಸುತ್ತಮುತ್ತ ಒಡಾಡುತ್ತಿದ್ದಾರೆ. ಇದನ್ನು ಸಿಐಡಿ ಅಧಿಕಾರಿಗಳ ಗಮನಕ್ಕೂ ತಂದಿದ್ದೇನೆ‌ ಎಂದು ನಿರಂಜನ ಹಿರೇಮಠ ಹೇಳಿದ್ದಾರೆ.

ಇದನ್ನೂ ಓದಿ: ನೇಹಾಳ ಹತ್ಯೆ ಕೋಪದಲ್ಲಿ ಮಾಡಿದ್ದಲ್ಲ! ಸ್ಪಾಟ್​​ ಇನ್ಸ್​​​​ಪೆಕ್ಷನ್​ ಮಾಡಿ, ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್​

ಸದ್ಯ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು, ಆರೋಪಿ ಫಯಾಜ್​​ನನ್ನು 6 ದಿನಗಳ ಕಾಲ ವಶಕ್ಕೆ ಪಡೆದಿದೆ. ಕೊಲೆ ಮಾಡುವ ಕೆಲವು ದಿನಗಳ ಮುನ್ನ ಆರೋಪಿ ಫಯಾಜ್​​ ನೇಹಾ ಹಿರೇಮಠ ಮನೆ ಬಳಿಯೇ ಓಡಾಡಿದ್ದ. ಆ ಮೂಲಕ ನೇಹಾ ಚಲನವಲನವನ್ನು ಗಮನಿಸಿದ್ದ. ಆಕೆಯ ಪ್ರತಿಯೊಂದು ವಿಚಾರಗಳನ್ನು ಗಮನಿಸುತ್ತಿದ್ದ. ಇನ್ನು ಕೊಲೆ ಮಾಡುವ ಐದು ದಿನಗಳ ಮೊದಲೇ ಚಾಕುವೊಂದನ್ನು ಖರೀದಿ ಮಾಡಿದ್ದ ಎಂಬ ವಿಚಾರ ಆರಂಭಿಕ ಹಂತದ ತನಿಖೆ ವೇಳೆ ಬೆಳಕಿಗೆ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Thu, 25 April 24

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ