AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi News: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಶಾಲಾ ಆಟೋಗಳು, ವ್ಯಾನ್‌ಗಳ ಮೇಲೆ ಪೊಲೀಸರ ಕಣ್ಗಾವಲು

ಶಾಲಾ ಮಕ್ಕಳ ಸುರಕ್ಷತೆಗೆ ನಗರ ಪೊಲೀಸರು ಸಾರಿಗೆ ಇಲಾಖೆ ನಿಯಮಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ವಾಹನದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುವುದಕ್ಕಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುವ ವಾಹನ ಮಾಲೀಕರ ವಿರುದ್ಧ 96 ಪ್ರಕರಣಗಳು ದಾಖಲಾಗಿವೆ

Hubballi News: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಶಾಲಾ ಆಟೋಗಳು, ವ್ಯಾನ್‌ಗಳ ಮೇಲೆ ಪೊಲೀಸರ ಕಣ್ಗಾವಲು
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಶಾಲಾ ಆಟೋಗಳು, ವ್ಯಾನ್‌ಗಳ ಮೇಲೆ ಪೊಲೀಸರ ಕಣ್ಗಾವಲು
TV9 Web
| Edited By: |

Updated on:Dec 19, 2022 | 3:01 PM

Share

ಹುಬ್ಬಳ್ಳಿ: ಸಾರಿಗೆ ಇಲಾಖೆ ವತಿಯಿಂದ ಅನುಮತಿ ಹೊಂದಿರುವುದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು (school children) ಕರೆದೊಯ್ಯುತ್ತಿದ್ದ ಶಾಲಾ ಆಟೋರಿಕ್ಷಾ ವ್ಯಾನ್‌ ಮತ್ತು ಬಸ್‌ಗಳ (auto, van, bus) ವಿರುದ್ಧ ಹುಬ್ಬಳ್ಳಿ ಮತ್ತು ಧಾರವಾಡ (Hubballi, Dharwad) ಪೊಲೀಸರು 100 ಪ್ರಕರಣಗಳನ್ನು ದಾಖಲಿಸಿಕೊಂಡು 11 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು timesofindia.indiatimes.com ವರದಿ ಮಾಡಿದೆ. ಶಾಲಾ ವಾಹನಗಳು ತನ್ನ ಮಿತಿಯನ್ನು ಮೀರಿ ಹೆಚ್ಚಿನ ಮಕ್ಕಳನ್ನು ಸಾಗಿಸುವ ಮೂಲಕ ಮಕ್ಕಳ ಜೀವಕ್ಕೆ ಅಪಾಯವನ್ನುಂಟುಮಾಡುವ ಬಗ್ಗೆ ಪೋಷಕರಿಂದ ದೂರುಗಳು ಸುರಿಮಳೆಯಾದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಅಪಾಯಕಾರಿ ವಾಹನ ಚಾಲನೆಗೆ ನಾವು ಬ್ರೇಕ್ ಹಾಕಬೇಕಿದೆ ಎಂದು ಅವಳಿ ನಗರ ಪೊಲೀಸ್ ಆಯುಕ್ತ ಲಾಭುರಾಮ್ (police commissioner Labhuram) ಹೇಳಿದ್ದಾರೆ.

ಸದ್ಯಕ್ಕೆ, ಅವಳಿ ನಗರದಲ್ಲಿ ಶಾಲೆಗೆ ಹೋಗುವ ಮಕ್ಕಳ ಸುರಕ್ಷತೆಗಾಗಿ ಟ್ರಾಫಿಕ್ ಪೊಲೀಸರು (Traffic police ) ವಿಶೇಷ ಅಭಿಯಾನ ನಡೆಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಈಗ ಶಾಲಾ ಆಟೋ ರಿಕ್ಷಾ ಮತ್ತು ವ್ಯಾನ್‌ಗಳತ್ತ ಗಮನ ಹರಿಸಿದ್ದು, ವಾಹನಗಳಲ್ಲಿ ಸಾಮರ್ಥ್ಯ ಮೀರಿ ಶಾಲಾ ಮಕ್ಕಳನ್ನು ಸಾಗಿಸುವ ಮಾಲೀಕರು ಮತ್ತು ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ.

ಶಾಲಾ ಮಕ್ಕಳ ಸುರಕ್ಷತೆಗೆ ನಗರ ಪೊಲೀಸರು ಸಾರಿಗೆ ಇಲಾಖೆ ನಿಯಮಗಳಿಗೆ (RTO department) ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ವಾಹನದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುವುದಕ್ಕಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುವಾಗ ಸಿಕ್ಕಿಬಿದ್ದ ವಾಹನಗಳ ಮಾಲೀಕರು ಅಥವಾ ಚಾಲಕರ ವಿರುದ್ಧ 96 ಪ್ರಕರಣಗಳು ದಾಖಲಾಗಿವೆ ಎಂದು ಅಂದಾಜಿಸಲಾಗಿದೆ. ಜತೆಗೆ 11 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿ ಧಾರವಾಡ ಉಪ ಪೊಲೀಸ್ ಆಯುಕ್ತ ಹೇಳುವುದೇನು?:

ಪೊಲೀಸ್ ಆಯುಕ್ತ ಲಾಭುರಾಮ್ ಪ್ರಕಾರ, ಶಾಲಾ ವಾಹನಗಳ ಬಗ್ಗೆ ಪೊಲೀಸರಿಗೆ ಹಲವಾರು ದೂರುಗಳು ಬಂದಿವೆ. ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ನಿಗದಿತ ಮಿತಿಯನ್ನು ಮೀರಿ ಮಕ್ಕಳನ್ನು ಸಾಗಿಸುವುದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಅವರು ನಿರ್ಧರಿಸಿದ್ದಾರೆ.

ಇದನ್ನೂ ಓದಿ:

Attica Gold: ಕಳ್ಳತನ ಚಿನ್ನ ಖರೀದಿ, ವರದಕ್ಷಿಣೆ ಕಿರುಕುಳ ಆರೋಪ ಎರಡೂ ಸುಳ್ಳು: ಅಟ್ಟಿಕಾ ಬಾಬು ಸ್ಪಷ್ಟನೆ

ನಾವು ಶಾಲಾ ವಾಹನಗಳನ್ನು ವಶಪಡಿಸಿಕೊಳ್ಳಲು ಮತ್ತು ದಂಡ ವಿಧಿಸಲು ಪ್ರಾರಂಭಿಸಿದ್ದೇವೆ. ನಾವು ಶಾಲಾ ಆಟೋರಿಕ್ಷಾಗಳು ಮತ್ತು ವ್ಯಾನ್‌ಗಳ ಅನಿಯಂತ್ರಿತ ಚಾಲನೆಗೆ ಕಡಿವಾಣ ಹಾಕಲು ವಿಶೇಷ ಅಭಿಯಾನವನ್ನು ಕೈಗೊಳ್ಳಲು ಯೋಜಿಸಿದ್ದೇವೆ ಎಂದು ಅವರು ಸೇರಿಸಿದರು. ಶಾಲಾ ಆಟೋರಿಕ್ಷಾ ಮತ್ತು ವ್ಯಾನ್‌ಗಳಿಗೆ ದಂಡ ವಿಧಿಸುವುದು ಮುಂದುವರಿಯಲಿದೆ ಎಂದು ಉಪ ಪೊಲೀಸ್ ಆಯುಕ್ತ ಗೋಪಾಲ್ ಬ್ಯಾಕೋಡ್ ಸ್ಪಷ್ಟಡಿಸಿದ್ದಾರೆ.

ಹುಬ್ಬಳ್ಳಿ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ್ ಮಾತನಾಡಿ ಶಾಲಾ ಆಟೋರಿಕ್ಷಾ, ವ್ಯಾನ್ ಗಳು ಪರವಾನಿಗೆ ಬದ್ಧವಾಗಿ ಸಂಚರಿಸಬೇಕು. ಆಟೊಗಳಲ್ಲಿ ಚಾಲಕನ ಹೊರತಾಗಿ ಆರು ಶಾಲಾ ಮಕ್ಕಳಿಗೆ ಅವಕಾಶವಿದ್ದು, ವ್ಯಾನ್‌ಗಳು ಪರ್ಮಿಟ್‌ನ ಪ್ರಕಾರ ವಿದ್ಯಾರ್ಥಿಗಳನ್ನು ಸಾಗಿಸಬೇಕು. ವಾಹನಗಳ ಆಸನ ಸಾಮರ್ಥ್ಯದ ಆಧಾರದ ಮೇಲೆ ಪರವಾನಗಿ ಬದಲಾಗುತ್ತದೆ ಎಂದು ಅವರು ಹೇಳಿದರು. ಸಂಚಾರ ನಿಯಮ ಉಲ್ಲಂಘಿಸುವವರಿಗೆ ಆರ್‌ಟಿಒ ಇಲಾಖೆ ದಂಡ ವಿಧಿಸುತ್ತಿದೆ ಎಂದು ದಾಮೋದರ್ ಹೇಳಿದರು.

ನಾವು ಶಾಲಾ ವಾಹನಗಳಿಗೆ ಚಾಲನೆ ಮಾಡಲಷ್ಟೇ ಅನುಮತಿ ನೀಡಿಲ್ಲ. ಶಾಲಾ ವಾಹನಗಳ ನಿಯಮ ಉಲ್ಲಂಘನೆ ತಡೆಗೆ ಶೀಘ್ರವೇ ವಿಶೇಷ ಅಭಿಯಾನ ನಡೆಸುತ್ತೇವೆ. ಇತ್ತೀಚೆಗೆ ಧಾರವಾಡದಲ್ಲಿ ಕರೆದಿದ್ದ ಆರ್‌ಟಿಎ ಸಭೆಯಲ್ಲಿ ಪೊಲೀಸ್‌ ಆಯುಕ್ತರೊಂದಿಗೆ ವಿಶೇಷ ಅಭಿಯಾನದ ಕುರಿತು ಈಗಾಗಲೇ ಚರ್ಚಿಸಿದ್ದೇವೆ ಎಂದು ಅವರು ಹೇಳಿದರು.

ಶಾಲೆಗಳ ಬಳಿ ತೀವ್ರ ನಿಗಾ ಇರಿಸುವ ಮೂಲಕ ಪರವಾನಗಿ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ. ಎಲ್ಲಾ ಶಾಲೆಗಳಿಗೆ ಭೇಟಿ ನೀಡುವ ಮೂಲಕ ಶಾಲಾ ಆಟೋರಿಕ್ಷಾಗಳು ಮತ್ತು ವ್ಯಾನ್‌ಗಳ ವಿರುದ್ಧ ಕ್ರಮ ಪ್ರಾರಂಭಿಸುವುದು ತುಂಬಾ ಕಷ್ಟ. ಆದರೆ ಕೆಲವು ಪ್ರಮುಖ ಶಾಲೆಗಳನ್ನು ಗುರುತಿಸಲಾಗಿದೆ, ಅಲ್ಲಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಸೇರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Mon, 19 December 22

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ