AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಥಳಿಸಿದವರ ಮೇಲೂ ಕೇಸ್​

ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಆರೋಪಿಗಳಿಗೆ ಹಲ್ಲೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದ ನಾಲ್ವರು ಸ್ಥಳೀಯರ ವಿರುದ್ಧವೂ ಪ್ರಕರಣ ದಾಖಲಾಗಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಸಾರ್ವಜನಿಕರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದು, ಆರೋಪಿಗಳಿಗೆ ಥಳಿಸಿದವರ ಮೇಲಿನ ಕೇಸ್‌ ರದ್ದುಪಡಿಸುವಂತೆ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಥಳಿಸಿದವರ ಮೇಲೂ ಕೇಸ್​
ಆರೋಪಿಗಳು
ಸಂಜಯ್ಯಾ ಚಿಕ್ಕಮಠ
| Edited By: |

Updated on:Jan 11, 2026 | 12:42 PM

Share

ಹುಬ್ಬಳ್ಳಿ, ಜನವರಿ 11: ಮಹಿಳೆಗೆ ಮದ್ಯ ಕುಡಿಸಿ ಆಕೆಯ ಮೇಲೆ ಗ್ಯಾಂಗ್​​ ರೇಪ್​ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಇನ್ನು ಸಂತ್ರಸ್ತೆಗೆ ಅಗತ್ಯ  ಚಿಕಿತ್ಸೆಯನ್ನು ನೀಡಲಾಗ್ತಿದೆ.

ಜ.9ರಂದು ನಡೆದಿರುವ ಘಟನೆ

ಘಟನೆ ಬಗ್ಗೆ ಪೊಲೀಸ್​ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಜ.9ರಂದು ಅಂಬೇಡ್ಕರ್ ಮೈದಾನದಿಂದ ಇಬ್ಬರು ಯುವಕರು ಆಟೋದಲ್ಲಿ ಮಹಿಳೆಯನ್ನು ಕರೆದೊಯ್ದಿದ್ದರು. ಮದ್ಯ ಕುಡಿಸಿ ಅನುಚಿತವಾಗಿ ವರ್ತಿಸಿ ವಿಡಿಯೋ ಮಾಡಿಕೊಂಡಿದ್ದಾರೆ. ಒಂದು ದಿನದ ನಂತರ ಮಹಿಳೆ ಠಾಣೆಗೆ ಬಂದು ಅತ್ಯಾಚಾರ ಮಾಡಿ ವಿಡಿಯೋ ಮಾಡಿ ಹರಿಬಿಟ್ಟ ಬಗ್ಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ಆರೋಪಿಗಳಾದ ಶಿವಾನಂದ, ಗಣೇಶ್​ಗೆ ಸ್ಥಳೀಯರು ಥಳಿಸಿದ್ದಾರೆ. ಕಟ್ಟಿಹಾಕಿ ತಲೆ ಬೋಳಿಸಿದ್ದಾರೆ. ಹಲ್ಲೆ ಸಂಬಂಧ ನಾಲ್ವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ; ರಸ್ತೆ ಅಪಘಾತದಲ್ಲಿ ನಾಲ್ವರು ದಾರುಣ ಸಾವು; ಮೂವರು ಗಂಭೀರ

ಆರೋಪಿಗೆ ಥಳಿಸಿದವರ ಮೇಲೆ ಕೇಸ್​​ಗೆ ಖಂಡನೆ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದ ನಾಲ್ವರ ವಿರುದ್ಧ ದೂರು ದಾಖಲಾಗಿರೋದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹುಬ್ಬಳ್ಳಿ ನಗರದ ಶಿವಶಂಕರ ಕಾಲೋನಿಯ ನಾಲ್ವರ ವಿರುದ್ಧ ಪ್ರಕರಣ ಖಂಡಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಬಳಿ ಸ್ಥಳೀಯರು ಕಿಡಿ ಕಾರಿದ್ದಾರೆ. ಆರೋಪಿಗಳನ್ನು ಹಿಡಿದು ಕೊಟ್ಟವರ ವಿರುದ್ಧ ಕೇಸ್​ ಹಾಕಲಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:39 pm, Sun, 11 January 26

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್