AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ: ಇಬ್ಬರ ಬಂಧನ

ನಕಲಿ ಆಹಾರ ಇಲಾಖೆ ಅಧಿಕಾರಿಗಳು ಹುಬ್ಬಳ್ಳಿಯಲ್ಲಿನ ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಮತ್ತು ಲಕ್ಷ್ಮಣ ಎಂಬ ಇಬ್ಬರು ಆರೋಪಿಗಳು ಆಹಾರ ಇಲಾಖೆ ಅಧಿಕಾರಿಗಳು ಎಂದು ಹೇಳಿಕೊಂಡು ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು. ಈ ಘಟನೆಯಿಂದ ನಕಲಿ ಅಧಿಕಾರಿಗಳ ಚಟುವಟಿಕೆ ಬಯಲಾಗಿದೆ ಮತ್ತು ಕಿರಾಣಿ ವ್ಯಾಪಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ: ಇಬ್ಬರ ಬಂಧನ
ಘಂಟಿಗೇರಿ ಪೊಲೀಸ್​ ಠಾಣೆ, ನಕಲಿ ಅಧಿಕಾರಿಗಳು
ಶಿವಕುಮಾರ್ ಪತ್ತಾರ್
| Edited By: |

Updated on:Mar 12, 2025 | 8:55 AM

Share

ಹುಬ್ಬಳ್ಳಿ, ಮಾರ್ಚ್​ 12: ಕಳೆದ ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ (Hubballi) ನಕಲಿ ‌ಮದ್ಯ ತಯಾರಿಕೆ ಗ್ಯಾಂಗ್ ಅಬಕಾರಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಇದಕ್ಕೂ ಮುನ್ನ ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳು ತಲೆ ಎತ್ತಿದ್ದಾರೆ.ಹಣ ಮಾಡೋ ಉದ್ದೇಶಕ್ಕೆ ಕೆಲವರು ಅಧಿಕಾರಿಗಳ ಸೋಗಿನಲ್ಲಿ ರೋಲ್ ಕಾಲ್​ಗೆ ಇಳದಿದ್ದಾರೆ. ಆಹಾರ ಇಲಾಖೆ ಹೆಸರಿನಲ್ಲಿ ದುರ್ಗದ ಬೈಲ್​ನಲ್ಲಿನ ಕಿರಾಣಿ ಅಂಗಡಿಗಳ ಮೇಲೆ ಏಕಾಏಕಿ ದಾಳಿ ಮಾಡಿದ್ದ ನಕಲಿ ಅಧಿಕಾರಿಗಳನ್ನು (Fake Food Officers) ಪೊಲೀಸರು ಬಂಧಿಸಿದ್ದಾರೆ.

ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ ಮಂಜುನಾಥ ಹಾಗೂ ಲಕ್ಷ್ಮಣ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹಣ ಕೇಳುತ್ತಲೇ ಕಿರಾಣಿ ಅಂಗಡಿ ಮಾಲೀಕರು ನಕಲಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡಿದ್ದಾರೆ. ಕೊನೆಗೆ ಇವರಿಬ್ಬರು ನಕಲಿ ಅಧಿಕಾರಿಗಳು ಎಂದು ಅಂಗಡಿ ಮಾಲೀಕರಿಗೆ ತಿಳಿಯುತ್ತಿದ್ದಂತೆ ಲಕ್ಷ್ಮಣ ಅಲ್ಲಿಂದ ಕಾಲ್ಕಿತ್ತಿದ್ದಾನೆ. ನಕಲಿ ಅಧಿಕಾರಿ ಮಂಜುನಾಥನನ್ನು ಕಿರಾಣಿ ಅಂಗಡಿ ಮಾಲೀಕರು ಹುಬ್ಬಳ್ಳಿಯ ಘಂಟಿಕೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ನಕಲಿ ಅಧಿಕಾರಿಗಳ ಗ್ಯಾಂಗ್​ಗೆ ಕಿರಾಣಿ ಅಂಗಡಿ ಮಾಲೀಕರು ರೋಸಿ ಹೋಗಿದ್ದರು. ಕಳೆದ ಕೆಲ ದಿನಗಳಿಂದ ಒಂದಲ್ಲಾ ಒಂದು ಅಂಗಡಿ ಇವರ ಟಾರ್ಗೆಟ್ ಆಗಿತ್ತು. ಅಂಗಡಿಗೆ ಹೋಗಿ, ಆಹಾರ ಇಲಾಖೆ ಅಧಿಕಾರಿಗಳು ಅಂತ ಸುಳ್ಳು ಹೇಳಿ, ಬಿಲ್ ಕೇಳುವುದು, ಲೇಬಲ್ ಬಗ್ಗೆ ವಿಚಾರಣೆ ಮಾಡುವುದು, ಅದು ಸರಿ ಇಲ್ಲ, ಇದು ಸರಿ ಇಲ್ಲ ಅಂತ ಹೇಳಿ, ಹಣ ಕೇಳುತ್ತಿದ್ದರು. ಆರೋಪಿಗಳು ಕೇವಲ ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ, ಮಾಲೀಕರಿಂದ ಹಣ ವಸೂಲಿ‌ ಮಾಡತಿದ್ದರಂತೆ. ನಕಲಿ ಅಧಿಕಾರಿಗಳ ಬಂಡವಾಳ ಬಯಲಾಗುತ್ತಲೇ ಕಿರಾಣಿ ಅಂಗಡಿ ಮಾಲೀಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ
Image
ಹುಬ್ಬಳ್ಳಿ: ತೋಟದ ಮನೆಯಲ್ಲಿ ಸಿಕ್ತು 5 ಲಕ್ಷ ರೂ. ಮೌಲ್ಯದ ನಕಲಿ ಮದ್ಯ
Image
ಪೌಷ್ಟಿಕ ಆಹಾರ ಅಕ್ರಮ ಸಾಗಾಟ: ಕಿಂಗ್​ಪಿನ್ ಕೈ ನಾಯಕಿಗೆ ದರ್ಗಾದಲ್ಲಿ ಆಶ್ರಯ?
Image
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 4 ಲಕ್ಷ ರೂ. ಮೌಲ್ಯದ ಗಾಂಜಾ ಪತ್ತೆ
Image
ಅಂಗನವಾಡಿ ಆಹಾರ ಅಕ್ರಮವಾಗಿ ಸಂಗ್ರಹ: 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ

ಇದನ್ನೂ ಓದಿ: ಮಕ್ಕಳ ಅನ್ನಕ್ಕೂ ಕನ್ನ ಹಾಕಿದ ‘ಕೈ’ ನಾಯಕಿ, ಗೋಡೌನ್​ನಲ್ಲಿ ಸಂಗ್ರಹಿಸಿದ್ದ ಪೌಷ್ಟಿಕ ಆಹಾರ ಜಪ್ತಿ

ಕಿರಾಣಿ ಅಂಗಡಿ ಮಾಲೀಕರು ಬಳಿ ತಗಲಾಕೊಂಡಿದ್ದೇ, ತಡ ನಕಲಿ‌ ಅಧಿಕಾರಿಗಳು ಮಾದ್ಯಮದ ಹೆಸರು ಬಳಕೆ‌ ಮಾಡಿಕೊಂಡಿದ್ದಾರೆ. ಕಿರಾಣಿ ಅಂಗಡಿ‌ ಮಾಲೀಕರು ಘಂಟಿಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 am, Wed, 12 March 25

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​