AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು, ಡಕಾಯಿತನ​ ಮೇಲೆ ಫೈರಿಂಗ್​

ಸೋಮವಾರ ಬೆಳ್ಳಂ ಬೆಳಗ್ಗೆ ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಕೇಳಿಸಿದೆ. ಹಲ್ಲೆ ಮಾಡಲು ಯತ್ನಿಸಿದ ಆರೋಪಿಯ ಮೇಲೆ ಹುಬ್ಬಳ್ಳಿಯ ಗೋಕುಲ್​ ರೋಡ್​ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಶೀಘ್ರದಲ್ಲೆ ವಿಚಾರಣೆಗೆ ಒಳಪಡಿಸಲಾಗುತ್ತದೆ.

ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು, ಡಕಾಯಿತನ​ ಮೇಲೆ ಫೈರಿಂಗ್​
ಆರೋಪಿ ಮಹೇಶ್​
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Oct 07, 2024 | 9:02 AM

Share

ಹುಬ್ಬಳ್ಳಿ, ಅಕ್ಟೋಬರ್​ 07: ಡಕಾಯಿತಿ ಗ್ಯಾಂಗ್​ ಸದಸ್ಯನ ಮೇಲೆ ಗೋಕುಲ ರೋಡ್ ಪೊಲೀಸರು (Gokul Road Police) ಗುಂಡು ಹಾರಿಸಿ, ಬಂಧಿಸಿದ್ದಾರೆ. ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ. ಸೋಮವಾರ ನಸುಕಿನ ಜಾವ ಮಹೇಶ್ ಮತ್ತು ಈತನ ಗ್ಯಾಂಗ್‌ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್​ ಸೀತಾರಾಮ್​​ನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಉಳಿದವರು ಪರಾರಿಯಾದರು.

ಉಳಿದ ಡಕಾಯಿತರು ಇರುವ ಜಾಗ ತೋರಿಸುತ್ತೇನೆ ಅಂತ ಮಹೇಶ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಡಕಾಯಿತರು ಇದ್ದ ಸ್ಥಳಕ್ಕೆ ಹೋದ ಬಳಿಕ ಮಹೇಶ್​ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ಸ್ಥಳಕ್ಕೆ ಕಮಿಷನರ್ ಶಶಿಕುಮಾರ್ ಭೇಟಿ

ಪ್ರಾಣ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್​ಐ ಸಚಿನ ದಾಸರೆಡ್ಡಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡು ತಿಂದು ನೋವಿನಿಂದ ಒದ್ದಾಡುತ್ತಿದ್ದ ಮಹೇಶ್​ನನ್ನು ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್​​ಐ ಸಚಿನ್​ ಮತ್ತು ಪೇದೆ ವಸಂತ ಗುಡಿಗೇರಿಗೆ ಅವರಿಗೆ ಗಾಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ