AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಭಾವಚಿತ್ರ ಪೋಸ್ಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಇನ್​​​ಸ್ಟಾಗ್ರಾಮನಲ್ಲಿ ಪೋಸ್ಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆಯ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಭಾವಚಿತ್ರ ಪೋಸ್ಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಹುಬ್ಬಳ್ಳಿ ಸೈಬರ್​ ಕ್ರೈಂ ಪೊಲೀಸ್​ ಠಾಣೆ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Aug 12, 2023 | 10:33 AM

Share

ಹುಬ್ಬಳ್ಳಿ: ಖಾಸಗಿ ಕಾಲೇಜಿನ (College) ವಿದ್ಯಾರ್ಥಿನಿಯರ (Students) ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಇನ್​​​ಸ್ಟಾಗ್ರಾಮನಲ್ಲಿ (Instagram) ಪೋಸ್ಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆಯ ಪೊಲೀಸರು (Police) ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅದೇ ಕಾಲೇಜಿನಲ್ಲಿ ಓದುತ್ತಿರುವ ಬಿಕಾಂ ದ್ವಿತೀಯ ವರ್ಷದ ವಿದ್ಯಾರ್ಥಿ ನವೀನ ಅಕ್ಕಿ ಹಾಗೂ ಹ್ಯಾಕರ್ ಕಿರಣ ಚೌಹಾನಗೌಡರ ಬಂಧಿತ ಆರೋಪಿಗಳು. ಇತ್ತೀಚಿಗೆ ಪೊಲೀಸರು ಇದೇ ಕಾಲೇಜಿನ ಹಳೇ ವಿದ್ಯಾರ್ಥಿ, ಆರೋಪಿ ರಂಜನಿಕಾಂತ್​ನನ್ನು ಬಂಧಿಸಿದ್ದರು.

ಈ ಮೂವರಲ್ಲಿ ಮಾಸ್ಟರ್ ಮೈಂಡ್ ಕಿರಣ ಚೌಹಾನಗೌಡರ್ ಎಂಬುವುದು ತಿಳಿದುಬಂದಿದೆ. ಹ್ಯಾಕರ್ ಕಿರಣ ಚೌಹಾನಗೌಡರ್ ವಿದ್ಯಾರ್ಥಿನಿಯ ಇನ್​ಸ್ಟಾಗ್ರಾಮ್​ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದನು. ಕಿರಣ ಮಾಡುತ್ತಿದ್ದ ಹ್ಯಾಕ್​ಗೆ ನವೀನ್ ಹಾಗೂ ರಜನಿಕಾಂತ್ ಸಾಥ್ ನೀಡುತ್ತಿದ್ದರು.

ಇದನ್ನೂ ಓದಿ: ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಿಚ್ಚಿಟ್ಟ ಪೊಲೀಸ್​ ಆಯುಕ್ತ

ಕಿರಣ್ ಚೌಹಾನಗೌಡರ್ ಈವರೆಗೂ ಅನೇಕ‌ ಜನರ ಇನ್​ಸ್ಟಾಗ್ರಾಮ್​​ ಮತ್ತು ಫೇಸ್​​​ಬುಕ್ ಖಾತೆಗಳನ್ನು ಹ್ಯಾಕ್ ಮಾಡಿದ್ದನು. ಇದೀಗ ವಿದ್ಯಾರ್ಥಿನಿಯರ ಇನ್​ಸ್ಟಾಗ್ರಾಮ್​ ಹ್ಯಾಕ್ ಮಾಡಿದ್ದನು. ಸೈಬರ್ ಪೊಲೀಸರು ಮೂವರು ಆರೋಪಿಗಳನ್ನು ಪ್ರತಿಯೊಂದು ಆಯಾಮದಲ್ಲಿ ತನಿಖೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ.

ಏನಿದು ಪ್ರಕರಣ

ಆರೋಪಿ ರಜನಿಕಾಂತ್ ಕಳೆದ ಕೆಲದಿನಗಳ ಹಿಂದೆ ಇನ್​ಸ್ಟಾಗ್ರಾಮನಲ್ಲಿ Kashmira1990_0 ಹೆಸರಿನ ನಕಲಿ ಖಾತೆ ತೆರೆದು ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ‌ ಅಪ್ಲೋಡ್ ಮಾಡಿದ್ದನು. ಅಲ್ಲದೇ ತಾಕತ್​ ಇದ್ದರೇ ತನ್ನನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲ್ ಹಾಕಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ