AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಭಾವಚಿತ್ರ ಪೋಸ್ಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಇನ್​​​ಸ್ಟಾಗ್ರಾಮನಲ್ಲಿ ಪೋಸ್ಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆಯ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಭಾವಚಿತ್ರ ಪೋಸ್ಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಹುಬ್ಬಳ್ಳಿ ಸೈಬರ್​ ಕ್ರೈಂ ಪೊಲೀಸ್​ ಠಾಣೆ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Aug 12, 2023 | 10:33 AM

Share

ಹುಬ್ಬಳ್ಳಿ: ಖಾಸಗಿ ಕಾಲೇಜಿನ (College) ವಿದ್ಯಾರ್ಥಿನಿಯರ (Students) ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಇನ್​​​ಸ್ಟಾಗ್ರಾಮನಲ್ಲಿ (Instagram) ಪೋಸ್ಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆಯ ಪೊಲೀಸರು (Police) ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅದೇ ಕಾಲೇಜಿನಲ್ಲಿ ಓದುತ್ತಿರುವ ಬಿಕಾಂ ದ್ವಿತೀಯ ವರ್ಷದ ವಿದ್ಯಾರ್ಥಿ ನವೀನ ಅಕ್ಕಿ ಹಾಗೂ ಹ್ಯಾಕರ್ ಕಿರಣ ಚೌಹಾನಗೌಡರ ಬಂಧಿತ ಆರೋಪಿಗಳು. ಇತ್ತೀಚಿಗೆ ಪೊಲೀಸರು ಇದೇ ಕಾಲೇಜಿನ ಹಳೇ ವಿದ್ಯಾರ್ಥಿ, ಆರೋಪಿ ರಂಜನಿಕಾಂತ್​ನನ್ನು ಬಂಧಿಸಿದ್ದರು.

ಈ ಮೂವರಲ್ಲಿ ಮಾಸ್ಟರ್ ಮೈಂಡ್ ಕಿರಣ ಚೌಹಾನಗೌಡರ್ ಎಂಬುವುದು ತಿಳಿದುಬಂದಿದೆ. ಹ್ಯಾಕರ್ ಕಿರಣ ಚೌಹಾನಗೌಡರ್ ವಿದ್ಯಾರ್ಥಿನಿಯ ಇನ್​ಸ್ಟಾಗ್ರಾಮ್​ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದನು. ಕಿರಣ ಮಾಡುತ್ತಿದ್ದ ಹ್ಯಾಕ್​ಗೆ ನವೀನ್ ಹಾಗೂ ರಜನಿಕಾಂತ್ ಸಾಥ್ ನೀಡುತ್ತಿದ್ದರು.

ಇದನ್ನೂ ಓದಿ: ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಿಚ್ಚಿಟ್ಟ ಪೊಲೀಸ್​ ಆಯುಕ್ತ

ಕಿರಣ್ ಚೌಹಾನಗೌಡರ್ ಈವರೆಗೂ ಅನೇಕ‌ ಜನರ ಇನ್​ಸ್ಟಾಗ್ರಾಮ್​​ ಮತ್ತು ಫೇಸ್​​​ಬುಕ್ ಖಾತೆಗಳನ್ನು ಹ್ಯಾಕ್ ಮಾಡಿದ್ದನು. ಇದೀಗ ವಿದ್ಯಾರ್ಥಿನಿಯರ ಇನ್​ಸ್ಟಾಗ್ರಾಮ್​ ಹ್ಯಾಕ್ ಮಾಡಿದ್ದನು. ಸೈಬರ್ ಪೊಲೀಸರು ಮೂವರು ಆರೋಪಿಗಳನ್ನು ಪ್ರತಿಯೊಂದು ಆಯಾಮದಲ್ಲಿ ತನಿಖೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ.

ಏನಿದು ಪ್ರಕರಣ

ಆರೋಪಿ ರಜನಿಕಾಂತ್ ಕಳೆದ ಕೆಲದಿನಗಳ ಹಿಂದೆ ಇನ್​ಸ್ಟಾಗ್ರಾಮನಲ್ಲಿ Kashmira1990_0 ಹೆಸರಿನ ನಕಲಿ ಖಾತೆ ತೆರೆದು ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ‌ ಅಪ್ಲೋಡ್ ಮಾಡಿದ್ದನು. ಅಲ್ಲದೇ ತಾಕತ್​ ಇದ್ದರೇ ತನ್ನನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲ್ ಹಾಕಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?