ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಭಾವಚಿತ್ರ ಪೋಸ್ಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಇನ್​​​ಸ್ಟಾಗ್ರಾಮನಲ್ಲಿ ಪೋಸ್ಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆಯ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಭಾವಚಿತ್ರ ಪೋಸ್ಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಹುಬ್ಬಳ್ಳಿ ಸೈಬರ್​ ಕ್ರೈಂ ಪೊಲೀಸ್​ ಠಾಣೆ
Edited By:

Updated on: Aug 12, 2023 | 10:33 AM

ಹುಬ್ಬಳ್ಳಿ: ಖಾಸಗಿ ಕಾಲೇಜಿನ (College) ವಿದ್ಯಾರ್ಥಿನಿಯರ (Students) ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಇನ್​​​ಸ್ಟಾಗ್ರಾಮನಲ್ಲಿ (Instagram) ಪೋಸ್ಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆಯ ಪೊಲೀಸರು (Police) ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅದೇ ಕಾಲೇಜಿನಲ್ಲಿ ಓದುತ್ತಿರುವ ಬಿಕಾಂ ದ್ವಿತೀಯ ವರ್ಷದ ವಿದ್ಯಾರ್ಥಿ ನವೀನ ಅಕ್ಕಿ ಹಾಗೂ ಹ್ಯಾಕರ್ ಕಿರಣ ಚೌಹಾನಗೌಡರ ಬಂಧಿತ ಆರೋಪಿಗಳು. ಇತ್ತೀಚಿಗೆ ಪೊಲೀಸರು ಇದೇ ಕಾಲೇಜಿನ ಹಳೇ ವಿದ್ಯಾರ್ಥಿ, ಆರೋಪಿ ರಂಜನಿಕಾಂತ್​ನನ್ನು ಬಂಧಿಸಿದ್ದರು.

ಈ ಮೂವರಲ್ಲಿ ಮಾಸ್ಟರ್ ಮೈಂಡ್ ಕಿರಣ ಚೌಹಾನಗೌಡರ್ ಎಂಬುವುದು ತಿಳಿದುಬಂದಿದೆ. ಹ್ಯಾಕರ್ ಕಿರಣ ಚೌಹಾನಗೌಡರ್ ವಿದ್ಯಾರ್ಥಿನಿಯ ಇನ್​ಸ್ಟಾಗ್ರಾಮ್​ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದನು. ಕಿರಣ ಮಾಡುತ್ತಿದ್ದ ಹ್ಯಾಕ್​ಗೆ ನವೀನ್ ಹಾಗೂ ರಜನಿಕಾಂತ್ ಸಾಥ್ ನೀಡುತ್ತಿದ್ದರು.

ಇದನ್ನೂ ಓದಿ: ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಿಚ್ಚಿಟ್ಟ ಪೊಲೀಸ್​ ಆಯುಕ್ತ

ಕಿರಣ್ ಚೌಹಾನಗೌಡರ್ ಈವರೆಗೂ ಅನೇಕ‌ ಜನರ ಇನ್​ಸ್ಟಾಗ್ರಾಮ್​​ ಮತ್ತು ಫೇಸ್​​​ಬುಕ್ ಖಾತೆಗಳನ್ನು ಹ್ಯಾಕ್ ಮಾಡಿದ್ದನು. ಇದೀಗ ವಿದ್ಯಾರ್ಥಿನಿಯರ ಇನ್​ಸ್ಟಾಗ್ರಾಮ್​ ಹ್ಯಾಕ್ ಮಾಡಿದ್ದನು. ಸೈಬರ್ ಪೊಲೀಸರು ಮೂವರು ಆರೋಪಿಗಳನ್ನು ಪ್ರತಿಯೊಂದು ಆಯಾಮದಲ್ಲಿ ತನಿಖೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ.

ಏನಿದು ಪ್ರಕರಣ

ಆರೋಪಿ ರಜನಿಕಾಂತ್ ಕಳೆದ ಕೆಲದಿನಗಳ ಹಿಂದೆ ಇನ್​ಸ್ಟಾಗ್ರಾಮನಲ್ಲಿ Kashmira1990_0 ಹೆಸರಿನ ನಕಲಿ ಖಾತೆ ತೆರೆದು ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ‌ ಅಪ್ಲೋಡ್ ಮಾಡಿದ್ದನು. ಅಲ್ಲದೇ ತಾಕತ್​ ಇದ್ದರೇ ತನ್ನನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲ್ ಹಾಕಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us