AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ತಿರುವು ಪಡೆದುಕೊಂಡ ಹುಬ್ಬಳ್ಳಿಯ ಪುಷ್ಕರಣಿ ವಿವಾದ: ದಾಖಲೆ ಸಮೇತ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

Hubballi Pushkarani Dispute: ಹುಬ್ಬಳ್ಳಿಯ ಅಸಾರ ಓಣಿಯಲ್ಲಿ ರಸ್ತೆ ನಿರ್ಮಾಣದ ವೇಳೆ ಪುಷ್ಕರಣಿ ಮುಚ್ಚಿರುವುದು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಹಿಂದೂ ಭಾವನೆಗಳಿಗೆ ಧಕ್ಕೆ ಎಂದು ಆರೋಪಿಸಿದರೆ, ಕಾಂಗ್ರೆಸ್ ಇದು ರಾಜಕೀಯ ಗಿಮಿಕ್ ಎಂದು ತಿರುಗೇಟು ನೀಡಿದೆ. ಬಿಜೆಪಿ ನಾಯಕರೇ ಹಿಂದೂ ದೇಗುಲಗಳು ಮತ್ತು ಐತಿಹಾಸಿಕ ಕಟ್ಟಡಗಳ ಬಳಿ ಅನುಮತಿ ಇಲ್ಲದೆ ಅಭಿವೃದ್ಧಿ ಮಾಡಿದ್ದನ್ನು ಕಾಂಗ್ರೆಸ್ ದಾಖಲೆ ಸಮೇತ ಬಹಿರಂಗಪಡಿಸಿದೆ.

ರಾಜಕೀಯ ತಿರುವು ಪಡೆದುಕೊಂಡ ಹುಬ್ಬಳ್ಳಿಯ ಪುಷ್ಕರಣಿ ವಿವಾದ: ದಾಖಲೆ ಸಮೇತ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು
ಕಾಂಗ್ರೆಸ್​​ ನಾಯಕರಿಂದ ದಾಖಲೆ ಬಿಡುಗಡೆImage Credit source: tv9 kannada
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 29, 2026 | 4:05 PM

Share

ಧಾರವಾಡ, ಆಗಸ್ಟ್​ 29: ಹುಬ್ಬಳ್ಳಿಯ ಅಸಾರ ಓಣಿಯಲ್ಲಿ ಇತ್ತೀಚಿಗೆ ರಸ್ತೆ ನಿರ್ಮಾಣ ಮಾಡುವಾಗ ಅಲ್ಲಿ ಪುರಾತನ ಕಾಲದ ಪುಷ್ಕರಣಿ (Pushkarani Road Row) ಇತ್ತು ಅಂತಾ ಬಿಜೆಪಿ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿತ್ತು. ಇದರಿಂದಾಗಿ ಕಳೆದೊಂದು ವಾರದಿಂದ ವಾಣಿಜ್ಯ ನಗರಿ ಹುಬ್ಬಳ್ಳಿ ಕಾದ ಕೆಂಡವಾಗಿತ್ತು. ಆದರೆ ಇದೀಗ ಪುಷ್ಕರಣಿ ವಿಚಾರವಾಗಿಯೇ ಕಾಂಗ್ರೆಸ್ ಪಾಳಯ ಬೀದಿಗೆ ಇಳಿಯಲು ನಿರ್ಧರಿಸಿದೆ. ಈ ಮುಂಚೆ ಅವಳಿ ನಗರದಲ್ಲಿದ್ದ ಪುರಾತನ ಮಂದಿರ ಮತ್ತು ಕಟ್ಟಡಗಳ ಬಳಿಯೇ ಅಭಿವೃದ್ಧಿ ಕಾರ್ಯ ನಡೆಸಿರುವ ಸಂಗತಿಗಳನ್ನು ಮುಂದಿಟ್ಟುಕೊಂಡು ಬಿಜೆಪಿಗೆ ತಿರುಗೇಟು ನೀಡಿದೆ.

ಬಿಜೆಪಿ ಆರೋಪಗಳಿಗೆ ಕಾಂಗ್ರೆಸ್ ಮುಖಂಡರು ತಿರುಗೇಟು

ಹುಬ್ಬಳ್ಳಿಯ ಅಸಾರ ಓಣಿಯಲ್ಲಿ ರಸ್ತೆ ನಿರ್ಮಾಣ ಮಾಡುವಾಗ ಶ್ರೀ ಭವಾನಿ ಶಂಕರ ದೇವಸ್ಥಾನದ ಬಳಿ ಪುಷ್ಕರಣಿ ಇತ್ತು. ಅಲ್ಲಿ ಉತ್ಖನನ ನಡೆಸಬೇಕು. ಅದೊಂದು ಪುರಾತನ ದೇವಾಲಯವಾಗಿದ್ದು, ಅಲ್ಲಿದ್ದ ಪುಷ್ಕರಣಿಯನ್ನು ಮುಚ್ಚಲಾಗಿದೆ. ಇದೀಗ ಅದರ ಮೇಲೆಯೇ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದು ನಮ್ಮ ಹಿಂದೂಗಳ ಭಾವನೆಗೆ ಧಕ್ಕೆ ತರುವ ವಿಷಯವಾಗಿದೆ ಅನ್ನೋದು ಬಿಜೆಪಿ ಆರೋಪವಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯ ಅಸಾರ ಓಣಿಯ ಪುಷ್ಕರಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದೇಕೆ? ಏನಿದರ ಹಿನ್ನೆಲೆ?

ಇದೀಗ ಧಾರವಾಡದ ಕಾಂಗ್ರೆಸ್ ಮುಖಂಡರು ಇದಕ್ಕೆ ತಿರುಗೇಟು ನೀಡಿದ್ದು, ಅಲ್ಲಿ ಪುಷ್ಕರಣಿಯೇ ಇರಲಿಲ್ಲ ಎಂಬ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಇದರೊಂದಿಗೆ ಅವಳಿ ನಗರದಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರೇ ಅಭಿವೃದ್ಧಿಪಡಿಸಿರುವ ಹುಬ್ಬಳ್ಳಿಯ ಅಮರಗೋಳದಲ್ಲಿರುವ ಬನಶಂಕರಿ ದೇವಸ್ಥಾನ ಹಾಗೂ ಧಾರವಾಡದ ಪುರಾತನ ಕಿಲ್ಲಾಗಳ ಫೋಟೋಗಳನ್ನು ಕಾಂಗ್ರೆಸ್ ನಾಯಕ ದೀಪಕ್ ಚಿಂಚೋರೆ ಬಿಡುಗಡೆ ಮಾಡಿ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು.

ಚುನಾವಣೆ ಬಂದಾಗ ಮಾತ್ರ ಧರ್ಮ ನೆನಪಾಗುತ್ತದೆಯೇ?

ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರಿಗೆ ಧರ್ಮ ನೆನಪಾಗುತ್ತದೆ ಅಂತಾ ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರು, ಅದೇ ರಸ್ತೆಗೆ ಈ ಹಿಂದೆ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗಲೇ ಅನುದಾನ ನೀಡಲಾಗಿತ್ತು ಅನ್ನೋದರ ಬಗ್ಗೆ ದಾಖಲೆ ಬಿಡುಗಡೆ ಮಾಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. 2013 ರಲ್ಲಿಯೇ ಶೆಟ್ಟರ್ ಈ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ನೀಡಿದ್ದರು. ಆಗ ಇವರಿಗೆ ಪುಷ್ಕರಣಿ ಇರುವ ವಿಷಯ ಗೊತ್ತಿರಲಿಲ್ಲವೇ ಅನ್ನೋದು ಕಾಂಗ್ರೆಸ್ ನಾಯಕರ ಪ್ರಶ್ನೆ. ಹಲವು ವರ್ಷಗಳವರೆಗೆ ಹುಬ್ಬಳ್ಳಿಯ ಈದ್ಗಾ ಮೈದಾನದ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ರಾಜಕೀಯ ಮಾಡಿದರು. ಅಲ್ಲಿ ಕೊನೆಗೆ ಗಣೇಶನ ಪ್ರತಿಷ್ಠಾಪನೆ ಮಾಡಿದ ಬಳಿಕ ಇದೀಗ ಮತ್ತೊಂದು ವಿಷಯ ಬೇಕಾಗಿದೆ. ಅದಕ್ಕಾಗಿಯೇ ಪುಷ್ಕರಣಿ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಅನ್ನೋದು ಕೈ ನಾಯಕರ ವಾದವಾಗಿದೆ.

ಆರ್‌ಎಸ್‌ಎಸ್ ಕಚೇರಿಯವರೆಗೆ ಪಾದಯಾತ್ರೆಯ ಎಚ್ಚರಿಕೆ

ಇನ್ನು ಧಾರವಾಡದ ಮರಾಠಾ ಗಲ್ಲಿಯಲ್ಲಿರುವ ಅರವಿಂದ ಬೆಲ್ಲದ್ ಅವರ ಮನೆಯ ಬಳಿ ಇದ್ದ ಐತಿಹಾಸಿಕ ಬಾವಿಯನ್ನು ಕೂಡ ಬೆಲ್ಲದ್ ಕುಟುಂಬ ನುಂಗಿದೆ ಅನ್ನೋ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು, ಆ ಬಾವಿಯ ನೀರನ್ನು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುಡಿದಿರುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ಇಂಥ ಪ್ರಕರಣಗಳನ್ನು ರಾಜಕೀಯಕ್ಕಾಗಿ ಎಳೆ ತರೋದು ನಿಲ್ಲಿಸದಿದ್ದರೆ ಹಿಂದೂ ಯುವಕರೊಂದಿಗೆ ಸೇರಿ ಬೆಲ್ಲದ್ ಅವರ ಮನೆಯಿಂದ ಹುಬ್ಬಳ್ಳಿಯ ಆರ್​ಎಸ್​ಎಸ್​ ಕಚೇರಿವರೆಗೆ ಪಾದಯಾತ್ರೆ ಮಾಡುವ ಎಚ್ಚರಿಕೆಯನ್ನು ದೀಪಕ್ ನೀಡಿದ್ದಾರೆ.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಆಸಾರ ಓಣಿಯ ಪುಷ್ಕರಣಿ ವಿವಾದ: ಎಂಎಲ್​ಸಿ ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ

ನಿರಂತರವಾಗಿ ಪುಷ್ಕರಣಿ ವಿಚಾರವಾಗಿ ಹೋರಾಟ ಮಾಡುತ್ತಿರುವ ಬಿಜೆಪಿಗೆ ಇದೀಗ ಕಾಂಗ್ರೆಸ್ ನೀಡಿರುವ​ ತಿರುಗೇಟು ಅಚ್ಚರಿ ನೀಡಿದೆ. ಇದಕ್ಕೆ ಕಮಲ ಪಾಳಯ ಯಾವ ರೀತಿ ಕೌಂಟರ್ ನೀಡುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು