ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ

ದಕ್ಷಿಣ ರೈಲ್ವೆಯ ಕಾರ್ಯಾಚರಣಾ ನಿರ್ಬಂಧಗಳಿಂದಾಗಿ, 07355/07356 ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ವಿಸ್ತರಿಸಲಾಗಿದೆ. ರೈಲು ಈಗ ರಾಮನಾಥಪುರಂನಲ್ಲಿ ನಿಲ್ಲಲಿದೆ. ಪ್ರಸ್ತುತ ಸಮಯ ಮತ್ತು ನಿಲುಗಡೆಗಳು ಬದಲಾಗಿಲ್ಲ. ಹೆಚ್ಚುವರಿಯಾಗಿ ನಾಲ್ಕು ಟ್ರಿಪ್​ ರೈಲು ಸಂಚರಿಸಲಿದೆ ನೈಋತ್ಯ ರೈಲ್ವೆ ವಲಯ ತಿಳಿಸಿದೆ.

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ
ಹುಬ್ಬಳ್ಳಿ ರೈಲು ನಿಲ್ದಾಣ
Edited By: ವಿವೇಕ ಬಿರಾದಾರ

Updated on: Jul 15, 2025 | 11:03 PM

ಹುಬ್ಬಳ್ಳಿ, ಜುಲೈ 15: ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ (Hubballi-Rameswaram Train) ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ (South Western Railway). ಈ ವಿಶೇಷ ರೈಲು ತನ್ನ ಹಿಂದಿನ ನಿಗದಿತ ನಿಲ್ದಾಣವಾದ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ ಮತ್ತು ಅಲ್ಲಿಂದಲೇ ವಾಪಸ್​ ಬರಲಿದೆ. ಆದಾಗ್ಯೂ, ಈ ರೈಲುಗಳು ಪ್ರಸ್ತುತ ಸಮಯ ಮತ್ತು ನಿಲುಗಡೆಗಳೊಂದಿಗೆ ಸಂಚಾರವನ್ನು ಮುಂದುವರಿಸಲಿವೆ.

ಈ ಹಿಂದೆ ಜುಲೈ 26ರವರೆಗೆ ಸಂಚರಿಸಬೇಕಿದ್ದ, 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈಗ ಆಗಸ್ಟ್ 9 ರಿಂದ 30 ರವರೆಗೆ ಹೆಚ್ಚುವರಿಯಾಗಿ ನಾಲ್ಕು ಟ್ರಿಪ್ ಸಂಚರಿಸಲಿದೆ. ಈ ರೈಲು ಈಗ ರಾಮೇಶ್ವರಂ ಬದಲು ರಾಮನಾಥಪುರಂ ನಿಲ್ದಾಣದಲ್ಲಿ ತನ್ನ ಸಂಚಾರವನ್ನು ಮೊಟಕುಗೊಳಿಸಲಿದೆ.

ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಕರ್ನಾಟಕದ ಈ ಭಾಗದಿಂದ ಸಿಕಂದರಾಬಾದ್, ಹೈದರಾಬಾದ್​ಗೆ ವಿಶೇಷ ರೈಲು

ಅದೇ ರೀತಿ, ಈ ಹಿಂದೆ ಜುಲೈ 27ರವರೆಗೆ ಸಂಚರಿಸಬೇಕಿದ್ದ, 07356 ಸಂಖ್ಯೆಯ ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ರೈಲು, ಈಗ ಆಗಸ್ಟ್ 10 ರಿಂದ 31 ರವರೆಗೆ ಹೆಚ್ಚುವರಿಯಾಗಿ ನಾಲ್ಕು ಟ್ರಿಪ್ ಸಂಚರಿಸಲಿದೆ. ಈ ರೈಲು ಈಗ ರಾಮೇಶ್ವರಂ ಬದಲು ರಾಮನಾಥಪುರಂ ನಿಲ್ದಾಣದಿಂದ ಸಂಚಾರವನ್ನು ಪ್ರಾರಂಭಿಸಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us