AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ರೇಪ್​​ ಕೇಸ್​: ಬಂಧಿತ ಮುಫ್ತಿ ಗುಲಾಮ ಜಿಲಾನಿ ಅಜಹರಿ ಭಾರತದವನೇ ಅಲ್ಲ; ತನಿಖೆ ವೇಳೆ ಹಲವು ಅಂಶ ಬಯಲು

ಹುಬ್ಬಳ್ಳಿ ಮೂಲದ ಯುವತಿಗೆ ತನ್ನ ಮದರಸಾದಲ್ಲಿ ಕೆಲಸ ಕೊಟ್ಟು, ಬಳಿಕ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ನಿರಂತರವಾಗಿ ಅತ್ಯಾಚರವೆಸಗಿದ್ದ ಮುಫ್ತಿ ಗುಲಾಮ ಜಿಲಾನಿ ಅಜಹರಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ವೇಳೆ ಪೊಲೀಸರಿಗೆ ಹಲವು ಅಂಶ ತಿಳಿದುಬಂದಿದೆ.

ಹುಬ್ಬಳ್ಳಿ ರೇಪ್​​ ಕೇಸ್​: ಬಂಧಿತ ಮುಫ್ತಿ ಗುಲಾಮ ಜಿಲಾನಿ ಅಜಹರಿ ಭಾರತದವನೇ ಅಲ್ಲ; ತನಿಖೆ ವೇಳೆ ಹಲವು ಅಂಶ ಬಯಲು
ಆರೋಪಿ ಮುಫ್ತಿ ಗುಲಾಮ ಜಿಲಾನಿ ಅಜಹರಿ
ಶಿವಕುಮಾರ್ ಪತ್ತಾರ್
| Edited By: |

Updated on:Jan 01, 2024 | 11:14 AM

Share

ಹುಬ್ಬಳ್ಳಿ, ಜನವರಿ 01: ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಅತ್ಯಾಚಾರವೆಸಿಗಿದ್ದ ಆರೋಪಿ ಮುಫ್ತಿ (ಮುಸ್ಲಿಂ ಧರ್ಮ ಗುರು) ಗುಲಾಮ ಜಿಲಾನಿ ಅಜಹರಿ ಭಾರತದವನೇ (India) ಅಲ್ಲ ಎಂಬ ಅಂಶ ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಹೌದು ಮುಫ್ತಿ ಗುಲಾಮ ಜಿಲಾನಿ ಅಜಹರಿ ಮೂಲತಃ ನೇಪಾಳದವನು. ಈತನನ್ನು ಅಲ್ಲಿ ಶೇರ್ ಎ ನೇಪಾಳ (Nepal) ಎಂದು ಕರೆಯಲಾಗುತ್ತಿತ್ತು. ಕಳೆದ ಆರು ವರ್ಷಗಳ ಹಿಂದೆ ಮಧ್ಯಪ್ರದೇಶದ ಖಂಡವಾ ಎಂಬ ಪಟ್ಟಣಕ್ಕೆ ಬಂದು ನೆಲೆಸಿದ್ದಾನೆ. ಮುಫ್ತಿ ಗುಲಾಮ ಜಿಲಾನಿ ಅಜಹರಿ ನಕಲಿ‌ ದಾಖಲೆಗಳನ್ನು ಸೃಷ್ಟಿಸಿ ಭಾರತದಲ್ಲಿ ನೆಲೆಸಿದ್ದಾನೆ. ಖಂಡವಾದಲ್ಲಿ ಮದರಸಾವೊಂದನ್ನು ಪ್ರಾರಂಭಿಸಿದ್ದಾನೆ.

ಮುಫ್ತಿ ಗುಲಾಮ ಜಿಲಾನಿ ಅಜಹರಿ ಈಗಾಗಲೇ ಎರಡು ಮದುವೆಯಾಗಿದ್ದಾನೆ. ಮೊದಲನೇ ಪತ್ನಿ ನೇಪಾಳದವಳು. ಮೊದಲ ಪತ್ನಿಗೆ ವಿಚ್ಛೇದನ ನೀಡಿ ಬಳಿಕ ಈತ ನೇಪಾಳದಿಂದ ಭಾರತಕ್ಕೆ ಬಂದು ನೆಲೆಸಿದ್ದಾನೆ. ನೇಪಾಳ ಪೌರತ್ವ ಹೊಂದಿರುವ ಈತ, ಖಂಡವಾಗೆ ಬಂದು ನೆಲೆಸಿದ ಬಳಿಕ ನಕಲಿ ಆಧಾರ್ ಕಾರ್ಡ್, ಪ್ಯಾನ್​ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿ ಮಾಡಿಸಿಕೊಂಡಿದ್ದಾನೆ. ನೇಪಾಳದಲ್ಲಿ ಈತನ ಕುಟುಂಬವಿದ್ದು, ಅಲ್ಲಿಗೆ ಆಗಾಗ ಹೋಗಿ ಬರುತ್ತಿದ್ದನು.

ಗುಲಾಮ ಜಿಲಾನಿ ಅಜಹರಿ ದೇಶದ ವಿವಿಧ ರಾಜ್ಯಗಳಿಗೆ ಹೋಗಿ ಧಾರ್ಮಿಕ ಪ್ರವಚನ ನೀಡಿ ಜನಮನ್ನಣೆ ಗಳಿಸಿದ್ದಾನೆ. ಅಲ್ಲದೆ ಭಾರತದ ಹೆಸರಾಂತ ಧಾರ್ಮಿಕ ಪ್ರವಚನಕಾರರ ವಿರುದ್ಧ ಹೇಳಿಕೆಗಳನ್ನು ಕೊಡುತ್ತಿದ್ದನು ಎಂದು ಹಳೇ ಹುಬ್ಬಳ್ಳಿ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಸದ್ಯ ಈತನ ಭಾರತೀಯ ಪೌರತ್ವದ ಬಗ್ಗೆಯೂ ತನಿಖೆಯಾಗಬೇಕಾಗಿದೆ.

ಇದನ್ನೂ ಓದಿ: ಕಲಬುರಗಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು; ಕೋರ್ಟ್​

ಇನ್ನು ನೇಪಾಳದವನಾದ ಗುಲಾಮ ಜಿಲಾನಿ ಅಜಹರಿ ಭಾರತದೊಳಗೆ ನುಸುಳಿ ಇಂತಹ ಕೃತ್ಯ ಮಾಡಿದ್ದನ್ನು ಮೌಲ್ವಿಗಳು ಖಂಡಿಸಿದ್ದಾರೆ.

ಏನಿದು ಪ್ರಕರಣ

ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ ಪರಿಚಯಸ್ಥನಾಗಿದ್ದನು. ಹೀಗಾಗಿ ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ ನಿಮ್ಮ ಮಗಳಿಗೆ ನಮ್ಮ ಮದರಸಾದಲ್ಲಿ ಕೆಲಸ ಕೊಡಿಸುತ್ತೇನೆ ಎಂದು ಹೇಳಿ ಖಂಡವಾ ಪಟ್ಟಣಕ್ಕೆ ಕರೆಸಿಕೊಂಡಿದ್ದನು. ಖಂಡವಾದಲ್ಲಿ  ಮುಫ್ತಿ ಯುವತಿಗೆ ಮದರಸಾದಲ್ಲಿ ಕೆಲಸ ಕೊಡಸಿದ್ದನು.

ಬಳಿಕ ಯುವತಿಯನ್ನು ಪುಸಲಾಯಿಸಿದ ಮುಫ್ತಿ ಗುಲಾಮ ಜಿಲಾನಿ ಅಜಹರಿ, ನನ್ನ ಮೊದಲ ಹೆಂಡತಿಗೆ ವಿಚ್ಚೆದನ ನೀಡಿದ್ದೇನೆ. ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳುತ್ತಲೇ ಯುವತಿಗೆ ಮತ್ತು ಬರುವ ಔಷಧ ಕೊಟ್ಟು ನಿರಂತರವಾಗಿ ಅತ್ಯಾಚಾರವೆಸಗಿದ್ದನು. ಈ ಬಗ್ಗೆ ಸಂತ್ರಸ್ತೆ ಹಳ್ಳೇ ಹುಬ್ಬಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:13 am, Mon, 1 January 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ