AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧು ವರರ ಕುರ್ಚಿಯಲ್ಲಿ ಕುಳಿತ ತಂದೆ-ತಾಯಿ! ಮಧುಮಕ್ಕಳಿಲ್ಲದೇ ಹುಬ್ಬಳ್ಳಿಯಲ್ಲಿ ನಡೆಯಿತು ಆರತಕ್ಷತೆ: ಇಂಡಿಗೋ ವಿಮಾನ ರದ್ದು ಕಾರಣ

ಹುಬ್ಬಳ್ಳಿಯಲ್ಲಿ ನಡೆದ ಅಪರೂಪದ ಆರತಕ್ಷತೆಯೊಂದು ಈಗ ಎಲ್ಲರ ಗಮನ ಸೆಳೆದಿದೆ. ಇಂಡಿಗೋ ವಿಮಾನ ರದ್ದಾದ ಕಾರಣ ನೂತನ ವಧು-ವರರು ತಮ್ಮದೇ ಆರತಕ್ಷತೆಗೆ ಬರಲಾಗದೆ ಆನ್​ಲೈನ್ ಮೂಲಕ ಭಾಗವಹಿಸುವಂತಾಯಿತು. ಭುವನೇಶ್ವರದಿಂದ ಹುಬ್ಬಳ್ಳಿಗೆ ಬರಬೇಕಿದ್ದ ಮೇಧಾ-ಸಂಗಮ ದಾಸ್ ಜೋಡಿ ಬಾರದೆ, ಅನಿವಾರ್ಯವಾಗಿ ವಧುವಿನ ಪೋಷಕರು ವಧು-ವರರ ಸ್ಥಾನದಲ್ಲಿ ಕುಳಿತು ಅತಿಥಿಗಳನ್ನು ಎದುರುಗೊಳ್ಳಬೇಕಾಯಿತು!

ವಧು ವರರ ಕುರ್ಚಿಯಲ್ಲಿ ಕುಳಿತ ತಂದೆ-ತಾಯಿ! ಮಧುಮಕ್ಕಳಿಲ್ಲದೇ ಹುಬ್ಬಳ್ಳಿಯಲ್ಲಿ ನಡೆಯಿತು ಆರತಕ್ಷತೆ: ಇಂಡಿಗೋ ವಿಮಾನ ರದ್ದು ಕಾರಣ
ವಧು ವರರ ಕುರ್ಚಿಯಲ್ಲಿ ಕುಳಿತ ತಂದೆ-ತಾಯಿ! ಮಧುಮಕ್ಕಳಿಲ್ಲದೇ ಹುಬ್ಬಳ್ಳಿಯಲ್ಲಿ ನಡೆಯಿತು ಆರತಕ್ಷತೆ
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 05, 2025 | 10:44 AM

Share

ಹುಬ್ಬಳ್ಳಿ, ಡಿಸೆಂಬರ್ 5: ಆರತಕ್ಷತೆಗೆ ಎಲ್ಲ ಸಿದ್ಧತೆ ನಡೆದಿತ್ತು. ಇನ್ನೇನು ಸಮಾರಂಭ ಶುರುವಾಗಬೇಕು, ಆದರೂ ವಧು ಹಾಗೂ ವರನ ಆಗಮನವಿಲ್ಲ. ಕೊನೆಗೆ ವಧುವಿನ ತಂದೆ ತಾಯಿಯೇ ವಧು-ವರರ ಕುರ್ಚಿಯಲ್ಲಿ ಕುಳಿತ ಬಂದ ಬಂಧುಗಳಿಂದ ಶುಭ ಹಾರೈಕೆ ಸ್ವೀಕರಿಸಿದರು! ಇಂಥದ್ದೊಂದು ಅಪರೂಪದ ವಿದ್ಯಮಾನಕ್ಕೆ ಹುಬ್ಬಳ್ಳಿಯ (Hubballi) ಗುಜರಾತ್ ಭವನ ಸಾಕ್ಷಿಯಾಗಿದೆ. ಇದಕ್ಕೆ ಕಾರಣವಾಗಿದ್ದು ಇಂಡಿಗೋ ವಿಮಾನ (IndiGo Flight) ರದ್ದತಿ. ದೇಶದಾದ್ಯಂತ ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದ್ದರ ಬಿಸಿ ನೂತನ ವಧು ವರರಿಗೂ ತಟ್ಟಿದೆ.

ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಬುಧವಾರ ವಧು ಮೇಧಾ ಕ್ಷೀರಸಾಗರ ಹಾಗೂ ವರ ಸಂಗಮ ದಾಸ್ ಅವರ ಆರತಕ್ಷತೆ ಆಯೋಜಿಸಲಾಗಿತ್ತು. ನವೆಂಬರ್ 23ರಂದು ಭುವನೇಶ್ವರದಲ್ಲಿ ಮದುವೆಯಾದ ಈ ಜೋಡಿ, ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಹುಬ್ಬಳ್ಳಿಗೆ ಬರಲು ಡಿಸೆಂಬರ್ 2ರ ವಿಮಾನ ಬುಕ್ ಮಾಡಿದ್ದರು. ಕೆಲ ಸಂಬಂಧಿಕರು ಭುವನೇಶ್ವರ–ಮುಂಬೈ–ಹುಬ್ಬಳ್ಳಿ ಮಾರ್ಗದಲ್ಲಿ ವಿಮಾನ ಟಿಕೆಟ್ ಬುಕ್ ಮಾಡಿದ್ದರು.

ನಿಜಕ್ಕೂ ಆಗಿದ್ದೇನು? ವಧು-ವರರು ಬಾಕಿ ಆಗಿದ್ಹೇಗೆ?

ಡಿಸೆಂಬರ್ 2ರ ಬೆಳಗ್ಗೆ 9ರಿಂದ ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಅನೇಕ ವಿಮಾನಗಳ ಸಂಚಾರ ರದ್ದಾಗಿದೆ. ಭುವನೇಶ್ವರದಿಂದ ಮೇಧಾ ಕ್ಷೀರಸಾಗರ ಹಾಗೂ ಸಂಗಮ ದಾಸ್ ಪ್ರಯಾಣಿಸಬೇಕಿದ್ದ ವಿಮಾನ ಸಂಚಾರ ಮುಂದಿನ ದಿನ (ಡಿ.3) ಬೆಳಗಿನ 4–5 ಗಂಟೆಗಳವರೆಗೆ ವಿಳಂಬವಾಗುವ ಸಂದೇಶ ಬಂದಿತ್ತು. ಹೀಗಾಗಿ ಅವರು ಪರ್ಯಾಯ ಪ್ರಯಾಣಕ್ಕೆ ಯೋಚಿಸಿರಲಿಲ್ಲ. ಆದರೆ, ಕೊನೇ ಕ್ಷಣದಲ್ಲಿ ಏಕಾಏಕಿ ಡಿಸೆಂಬರ್ 3ರಂದು ಬೆಳಗ್ಗೆ ವಿಮಾನ ಸಂಚಾರವೇ ರದ್ದಾಯಿತು. ಪರಿಣಾಮವಾಗಿ ವಧು-ವರರು ಹುಬ್ಬಳ್ಳಿಗೆ ಆರಕ್ಷತೆ ವೇಳೆಗೆ ತಲುಪಲು ಸಾಧ್ಯವಾಗಲಿಲ್ಲ.

ಆನ್​ಲೈನ್ ರಿಸೆಪ್ಷನ್: ವಿಡಿಯೋ ಇಲ್ಲಿ ನೋಡಿ

ಈ ನಡುವೆ ಗುಜರಾತ್ ಭವನದಲ್ಲಿ ಆರತಕ್ಷತೆಯ ಎಲ್ಲಾ ಸಿದ್ಧತೆಗಳೂ ಪೂರ್ಣಗೊಂಡಿದ್ದರಿಂದ, ಕುಟುಂಬಸ್ಥರು ಹೊಸ ಪರಿಹಾರ ಹುಡುಕಿದರು. ಕೊನೆಗೆ ವಧುವಿನ ತಂದೆ-ತಾಯಿ ತಮ್ಮ ಮಗಳು ಹಾಗೂ ಅಳಿಯನ ಬದಲು ವಧು-ವರರ ಕುರ್ಚಿಯಲ್ಲಿ ಕುಳಿತು ಶಾಸ್ತ್ರಗಳನ್ನು ನಡೆಸಿದರು.

ಇದನ್ನೂ ಓದಿ: 550 ಇಂಡಿಗೋ ವಿಮಾನಗಳ ಸಂಚಾರ ರದ್ದು, ಬೆಂಗಳೂರು ಸೇರಿ ಹಲವೆಡೆ ಪ್ರಯಾಣಿಕರ ಒದ್ದಾಟ

ವಧು ಮೇಧಾ ಮತ್ತು ವರ ಸಂಗಮ ದಾಸ್ ಇಬ್ಬರೂ ಭುವನೇಶ್ವರದಲ್ಲೇ ಸಿದ್ಧರಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರತಕ್ಷತೆಯಲ್ಲಿ ಭಾಗವಹಿಸುವ ಅನಿವಾರ್ಯ ಸ್ಥಿತಿ ಎದುರಾಯಿತು. ಇಂಡಿಗೋ ವಿಮಾನಗಳ ರದ್ದು ಮತ್ತು ವಿಳಂಬದಿಂದ ಅನೇಕರು ಪರದಾಡುತ್ತಿದ್ದರೆ, ಹುಬ್ಬಳ್ಳಿಯಲ್ಲಿ ನಡೆದ ಈ ವಿದ್ಯಮಾನ ಎಲ್ಲರ ಗಮನ ಸೆಳೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:14 am, Fri, 5 December 25