AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಗಲಭೆ ಕೇಸ್: ಶ್ರೀಕಾಂತ್​ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು, ಬಿಡುಗಡೆ ಅನುಮಾನ

ರಾಮಜನ್ಮಭೂಮಿ ಹೋರಾಟದ ಕೇಸ್​ನಲ್ಲಿ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಸಮಯದ ಅಭಾವದಿಂದ ತೀರ್ಪು ಆದೇಶ ಕೈ ಸೇರುವುದು ತಡವಾದರೆ ಶ್ರೀಕಾಂತಗೆ ಇಂದು ಬಿಡುಗಡೆ ಭಾಗ್ಯ ಅನುಮಾನವೆನ್ನಲಾಗುತ್ತಿದೆ.

ಹುಬ್ಬಳ್ಳಿ ಗಲಭೆ ಕೇಸ್: ಶ್ರೀಕಾಂತ್​ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು, ಬಿಡುಗಡೆ ಅನುಮಾನ
ಶ್ರೀಕಾಂತ ಪೂಜಾರಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Jan 05, 2024 | 6:04 PM

Share

ಹುಬ್ಬಳ್ಳಿ, ಜನವರಿ 05: ರಾಮಜನ್ಮಭೂಮಿ ಹೋರಾಟದ ಕೇಸ್​ನಲ್ಲಿ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಹುಬ್ಬಳ್ಳಿ  (Hubballi) ಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ. 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಬಂದ ನಂತರ ದಾಖಲೆಗಳನ್ನು 5 ಮತ್ತು 3ನೇ ಜೆಎಮ್ಎಫ್‌ಸಿ ನ್ಯಾಯಾಲಕ್ಕೆ ನೀಡಬೇಕು.

ತೀರ್ಪು ಆದೇಶವನ್ನ ಈ ಎರಡೂ ಕೋರ್ಟ್‌ಗಳಿಗೆ ತಲುಪಿಸಬೇಕು. ಬಳಿಕ ಸಂಜೆ 6 ಗಂಟೆಯೊಳಗೆ ತೀರ್ಪಿನ ಆದೇಶ ಜೈಲು ಅಧಿಕಾರಿಗಳ ಕೈ ಸೇರಬೇಕು. ಸಮಯದ ಅಭಾವದಿಂದ ತೀರ್ಪು ಆದೇಶ ಕೈ ಸೇರುವುದು ತಡವಾದರೆ ಶ್ರೀಕಾಂತಗೆ ಇಂದು ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗುತ್ತಿದೆ.

ಶ್ರೀಕಾಂತ ಪೂಜಾರಿಗೆ ವಿಧಿಸಿದ ಷರತ್ತುಗಳು

  • ಇಬ್ಬರು ಜಾಮೀನುದಾರರ ಭದ್ರತೆ ನೀಡಬೇಕು
  • ಒಂದು ಲಕ್ಷ ರೂಪಾಯಿ 2 ಬಾಂಡ್ ನೀಡಬೇಕು
  • ನ್ಯಾಯಾಲಯದ ಪ್ರತಿ ವಿಚಾರಣೆಗೂ ಹಾಜರಾಗಬೇಕು
  • ನ್ಯಾಯಾಲಯದ ಪರವಾನಿಗೆ ಇಲ್ಲದೇ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು
  • ಸಾಕ್ಷ್ಯ ನಾಶಪಡಿಸುವಂತಿಲ್ಲ.
  • ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ.  ಒಂದು ವೇಳೆ ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗುವುದಾದರೆ ಅನುಮತಿ ಕಡ್ಡಾಯ.
  • ಪ್ರತಿ ಮುದ್ದಾತ್ತಿಗೂ ಕಡ್ಡಾಯವಾಗಿ ಹಾಜರಿರಬೇಕು.
  • ಇಬ್ಬರು ವ್ಯಕ್ತಿಗಳಿಂದ ತಲಾ 2 ಲಕ್ಷ ರೂ. ಭದ್ರತಾ ಬಾಂಡ್ ಶೂರಿಟಿ ಕೊಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ಮೇಲಿನ 16 ಕೇಸ್​ಗಳಲ್ಲಿ 15 ಖುಲಾಸೆಯಾಗಿವೆ, ಸರ್ಕಾರ ದಿಕ್ಕುತಪ್ಪಿಸಿದೆ: ಮಹೇಶ್ ಟೆಂಗಿನಕಾಯಿ

1992 ರಲ್ಲಿ ರಾಮಮಂದಿರ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಶ್ರೀಕಾಂತ್‌ ಪೂಜಾರಿ ಭಾಗಿಯಾಗಿದ್ದರು. ಈ ಹಿನ್ನೆಲೆ ಇತ್ತೀಚೆಗೆ ಅರೆಸ್ಟ್‌ ಮಾಡಲಾಗಿತ್ತು. ಇದರಿಂದ ರಾಜ್ಯದಲ್ಲಿ ಬಿಜೆಪಿ  ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿತ್ತು.

ಇದನ್ನೂ ಓದಿ: ಈ ಪ್ರಕರಣ ಖಂಡಿತವಾಗಿ ಬಿದ್ದು ಹೋಗುತ್ತದೆ: ಕರಸೇವಕ ಶ್ರೀಕಾಂತ್ ಪರ ವಕೀಲರು ಹೀಗೆ ಹೇಳಿದ್ದೇಕೆ?

ಶ್ರೀಕಾಂತ್‌ ಪೂಜಾರಿಯನ್ನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಹೋರಾಟ ನಡೆದಿತ್ತು. ವಿಪಕ್ಷ ನಾಯಕ ಆರ್‌ ಅಶೋಕ್​ ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದಂತೆ ಪ್ರತಿಭಟನೆ ಮತ್ತೊಂದು ಸ್ವರೂಪ ಪಡೆದಿತ್ತು. ಠಾಣೆ ಮುಂದೆ ಟೈರ್‌ಗೆ ಬೆಂಕಿ ಹಚ್ಚಿದ್ದರು. ಹಿಂಬದಿ ಗೇಟ್​​ನಿಂದ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಅದರಲ್ಲಿಯೂ ಬಿಜೆಪಿ ಮುಖಂಡರು ಠಾಣೆ ಒಳಗೆ ನುಗ್ಗಲು ಯತ್ನಿಸುತ್ತಿದ್ದಂತೆ, ಆರ್‌. ಅಶೋಕ್‌, ಶಾಸಕರಾದ ಮಹೇಶ್‌ ತೆಂಗಿನಕಾಯಿ, ಅರವಿಂದ್‌ ಬೆಲ್ಲದ್‌ರನ್ನ ವಶಕ್ಕೆ ಪಡೆಯಲಾಗಿತ್ತು. ಹಿಂದೂ ಕಾರ್ಯಕರ್ತರನ್ನೇ ಸಿದ್ದರಾಮಯ್ಯ ಸರ್ಕಾರ ಟಾರ್ಗೆಟ್‌ ಮಾಡುತ್ತಿದೆ ಎಂದು ಆರೋಪಿಸಿದ ಅಶೋಕ್‌, ಶಹರ ಠಾಣೆ ಇನ್ಸ್‌ಪೆಕ್ಟರ್‌ ಅಮಾನತಿಗೆ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:42 pm, Fri, 5 January 24

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು