AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಟವರ್​ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ, ಹಿಂಜಾವೇ ದೂರು

ಹುಬ್ಬಳ್ಳಿಯಲ್ಲಿ ಅಶಾಂತಿ ಕದಡುವ ಯತ್ನ ನಡೆದಿದೆ. ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಲಾಗಿದ್ದು, ಇದನ್ನು ವ್ಯಕ್ತಿಯೊಬ್ಬನೇ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಹಿಂಜಾವೇ ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಪೊಲೀಸರು ಧ್ವಜಗಳನ್ನು ತೆರವುಗೊಳಿಸಿದ್ದಾರೆ.

ಹುಬ್ಬಳ್ಳಿ: ಟವರ್​ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ, ಹಿಂಜಾವೇ ದೂರು
ಟವರ್ ಮೇಲೆ ಇಸ್ಲಾಂ ಬಾವುಟದ ಕೆಳಗೆ ಕಟ್ಟಿದ ಕೇಸರಿ ಧ್ವಜ
Follow us
ಶಿವಕುಮಾರ್ ಪತ್ತಾರ್
| Updated By: Rakesh Nayak Manchi

Updated on:Aug 15, 2023 | 9:44 PM

ಹುಬ್ಬಳ್ಳಿ, ಆಗಸ್ಟ್ 15: ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಿ ಅಶಾಂತಿ ಸೃಷ್ಟಿಸುವ ಹುನ್ನಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆ (Hindu Jagarana Vedik) ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಹಳೇ ಹುಬ್ಬಳ್ಳಿ ಪೊಲೀಸರು ಟವರ್​ನಲ್ಲಿದ್ದ ಧ್ವಜಗಳನ್ನು ತೆರವುಗೊಳಿಸಿದ್ದಲ್ಲದೆ, ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಹುಬ್ಬಳ್ಳಿಯ ಆನಂದನಗರದ ಗೋಡ್ಕೆ ಫ್ಲ್ಯಾಟ್​​ನಲ್ಲಿರುವ ಟವರ್ ಮೇಲೆ ಇಸ್ಲಾಂ ಧರ್ಮದ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಲಾಗಿದೆ. ಈ ಎರಡು ಬಾವುಟಗಳನ್ನು ಒಬ್ಬನೇ ಕಟ್ಟಲಾಗಿದೆ. ಅಲ್ಲದೆ, ಇದು ಜಿಹಾದಿ ಕೆಲಸವಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ಹಳೇ ಹುಬ್ಬಳ್ಳಿ ಠಾಣೆಗೆ ದೂರು ನೀಡಿತ್ತು.

ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ, ಹಿಂದೂ ಸಂಘಟನೆ ಕಾರ್ಯಕರ್ತರ ಅಸಮಾಧಾನ, ಆಕ್ರೋಶ

ಕೂಡಲೇ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಆಗಮಿಸಿ ಎರಡೂ ಧ್ವಜಗಳನ್ನು ತೆರವುಗೊಳಿಸಿದ್ದಾರೆ. ಅಲ್ಲದೆ, ಘಟನಾ ಸ್ಥಳದಲ್ಲೇ ಪೊಲೀಸರು ಬೀಡುಬಿಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರೇಣುಕಾ ಸುಕಾಮಾರ ಅವರು ಮಾಹಿತಿ ಸಂಗ್ರಹಿಸಿದ್ದಾರೆ.

ಬಳಿಕ ಮಾತನಾಡಿದ ಪೊಲೀಸ್ ಆಯುಕ್ತರು, ಗೋಡ್ಕೆ ಪ್ಲಾಟ್​ನಲ್ಲಿರುವ ಏರಟೆಲ್ ಟವರ್ ಮೇಲೆ ಎರಡು ಧರ್ಮದ ಬಾವುಟ ಹಾರಿಸಿದ್ದಾರೆ. ಅದರಲ್ಲಿ ಧ್ವಜ ಏರುಪೇರಿದೆ ಎಂದು ದೂರು ಕೊಟ್ಟಿದ್ದಾರೆ. ಎರಡು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಕಿಡಗೇಡಿ ಇಂದು ದ್ವಜಗಳನ್ನು ಕಟ್ಟಿದ್ದಾರೆ. ಆದರೆ ಅದು ಪಾಕಿಸ್ತಾನ ಧ್ವಜ ಅಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಆರೋಪಿ ಬಂಧನಕ್ಕೆ ತನಿಖೆ ಕೈಗೊಳ್ಳಲಾಗಿದೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Tue, 15 August 23

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ