AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಟವರ್​ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ, ಹಿಂಜಾವೇ ದೂರು

ಹುಬ್ಬಳ್ಳಿಯಲ್ಲಿ ಅಶಾಂತಿ ಕದಡುವ ಯತ್ನ ನಡೆದಿದೆ. ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಲಾಗಿದ್ದು, ಇದನ್ನು ವ್ಯಕ್ತಿಯೊಬ್ಬನೇ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಹಿಂಜಾವೇ ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಪೊಲೀಸರು ಧ್ವಜಗಳನ್ನು ತೆರವುಗೊಳಿಸಿದ್ದಾರೆ.

ಹುಬ್ಬಳ್ಳಿ: ಟವರ್​ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ, ಹಿಂಜಾವೇ ದೂರು
ಟವರ್ ಮೇಲೆ ಇಸ್ಲಾಂ ಬಾವುಟದ ಕೆಳಗೆ ಕಟ್ಟಿದ ಕೇಸರಿ ಧ್ವಜ
ಶಿವಕುಮಾರ್ ಪತ್ತಾರ್
| Updated By: Rakesh Nayak Manchi|

Updated on:Aug 15, 2023 | 9:44 PM

Share

ಹುಬ್ಬಳ್ಳಿ, ಆಗಸ್ಟ್ 15: ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಿ ಅಶಾಂತಿ ಸೃಷ್ಟಿಸುವ ಹುನ್ನಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆ (Hindu Jagarana Vedik) ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಹಳೇ ಹುಬ್ಬಳ್ಳಿ ಪೊಲೀಸರು ಟವರ್​ನಲ್ಲಿದ್ದ ಧ್ವಜಗಳನ್ನು ತೆರವುಗೊಳಿಸಿದ್ದಲ್ಲದೆ, ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಹುಬ್ಬಳ್ಳಿಯ ಆನಂದನಗರದ ಗೋಡ್ಕೆ ಫ್ಲ್ಯಾಟ್​​ನಲ್ಲಿರುವ ಟವರ್ ಮೇಲೆ ಇಸ್ಲಾಂ ಧರ್ಮದ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಲಾಗಿದೆ. ಈ ಎರಡು ಬಾವುಟಗಳನ್ನು ಒಬ್ಬನೇ ಕಟ್ಟಲಾಗಿದೆ. ಅಲ್ಲದೆ, ಇದು ಜಿಹಾದಿ ಕೆಲಸವಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ಹಳೇ ಹುಬ್ಬಳ್ಳಿ ಠಾಣೆಗೆ ದೂರು ನೀಡಿತ್ತು.

ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ, ಹಿಂದೂ ಸಂಘಟನೆ ಕಾರ್ಯಕರ್ತರ ಅಸಮಾಧಾನ, ಆಕ್ರೋಶ

ಕೂಡಲೇ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಆಗಮಿಸಿ ಎರಡೂ ಧ್ವಜಗಳನ್ನು ತೆರವುಗೊಳಿಸಿದ್ದಾರೆ. ಅಲ್ಲದೆ, ಘಟನಾ ಸ್ಥಳದಲ್ಲೇ ಪೊಲೀಸರು ಬೀಡುಬಿಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರೇಣುಕಾ ಸುಕಾಮಾರ ಅವರು ಮಾಹಿತಿ ಸಂಗ್ರಹಿಸಿದ್ದಾರೆ.

ಬಳಿಕ ಮಾತನಾಡಿದ ಪೊಲೀಸ್ ಆಯುಕ್ತರು, ಗೋಡ್ಕೆ ಪ್ಲಾಟ್​ನಲ್ಲಿರುವ ಏರಟೆಲ್ ಟವರ್ ಮೇಲೆ ಎರಡು ಧರ್ಮದ ಬಾವುಟ ಹಾರಿಸಿದ್ದಾರೆ. ಅದರಲ್ಲಿ ಧ್ವಜ ಏರುಪೇರಿದೆ ಎಂದು ದೂರು ಕೊಟ್ಟಿದ್ದಾರೆ. ಎರಡು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಕಿಡಗೇಡಿ ಇಂದು ದ್ವಜಗಳನ್ನು ಕಟ್ಟಿದ್ದಾರೆ. ಆದರೆ ಅದು ಪಾಕಿಸ್ತಾನ ಧ್ವಜ ಅಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಆರೋಪಿ ಬಂಧನಕ್ಕೆ ತನಿಖೆ ಕೈಗೊಳ್ಳಲಾಗಿದೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Tue, 15 August 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!