AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್; ಜನವರಿ 24ಕ್ಕೆ ಭರ್ಜರಿ ಕಾರ್ಯಕ್ರಮ

ಹುಬ್ಬಳ್ಳಿಯಲ್ಲಿ ಜನವರಿ 24ರಂದು ರಾಜ್ಯ ಸರ್ಕಾರದ ಮಹತ್ವದ ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ರಾಜ್ಯಾದ್ಯಂತ ನಿರ್ಮಿಸಿದ 42,000ಕ್ಕೂ ಹೆಚ್ಚು ಮನೆಗಳನ್ನು, ವಿಶೇಷವಾಗಿ ಹುಬ್ಬಳ್ಳಿಯ ಮಂಟೂರು ರಸ್ತೆಯ ಸಾವಿರಾರು ಸ್ಲಂ ಬೋರ್ಡ್ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿದಂತೆ ಗಣ್ಯರು ಭಾಗವಹಿಸಲಿದ್ದು, ಸಾವಿರಾರು ಕುಟುಂಬಗಳ ಸ್ವಂತ ಸೂರು ಕನಸು ನನಸಾಗಲಿದೆ.

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್; ಜನವರಿ 24ಕ್ಕೆ ಭರ್ಜರಿ ಕಾರ್ಯಕ್ರಮ
ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Jan 21, 2026 | 12:21 PM

Share

ಹುಬ್ಬಳ್ಳಿ, ಜನವರಿ 21: ಸ್ವಂತದಾದ ಸೂರು ಹೊಂದಬೇಕು ಎನ್ನುವುದು ಬಡ ಮತ್ತು ಮಧ್ಯಮ ವರ್ಗದವರ ಕನಸು. ರಾಜ್ಯ ಸರ್ಕಾರ ಈ ಕನಸನ್ನು ಈಡೇರಿಸಲು ಮುಂದಾಗಿದ್ದು, ರಾಜ್ಯದಲ್ಲಿ ನಲವತ್ತೆರಡು ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣ ಮಾಡಿದೆ. ಈ ಮನೆಗಳ ಹಂಚಿಕೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಇದೇ ಜನವರಿ 24ರಂದು ಹುಬ್ಬಳ್ಳಿಯಲ್ಲಿ (Hubballi) ಅದ್ದೂರಿ ಕಾರ್ಯಕ್ರಮ ನಡೆಯಲಿದೆ.

ಒಂದು ವರ್ಷ ಕಾಯಿಸಿದ ಸರ್ಕಾರ!

ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ಜಿ+3 ಮಾದರಿಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಮನೆಗಳಿಗೆ ಕಳೆದ ಒಂದು ವರ್ಷದಿಂದ ಉದ್ಘಾಟನೆ ಭಾಗ್ಯ ಸಿಕ್ಕಿರಲಿಲ್ಲ. ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರು ಸೇರಿದಂತೆ ಹಿರಿಯ ನಾಯಕರ ಸಮಯಾವಕಾಶ ಲಭ್ಯವಾಗದೇ ಮನೆ ಹಂಚಿಕೆ ಕಾರ್ಯಕ್ರಮ ಪದೇಪದೇ ಮುಂದೂಡಲ್ಪಟ್ಟಿತ್ತು. 2013–18ರ ಅವಧಿಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರ ಕಾಲದಲ್ಲಿ ಈ ಮನೆಗಳಿಗೆ ಮಂಜೂರಾತಿ ದೊರೆತಿದ್ದರೂ, ಕಾಮಗಾರಿಯ ನಿಧಾನಗತಿಯ ಕಾರಣ ತಡವಾಗಿತ್ತು. ಕಳೆದ ವರ್ಷವೇ ಮನೆಗಳ ನಿರ್ಮಾಣ ಪೂರ್ಣಗೊಂಡರೂ ಫಲಾನುಭವಿಗಳಿಗೆ ಹಂಚಿಕೆ ಆಗಿರಲಿಲ್ಲ.

ಸಚಿವ ಜಮೀರ್ ನೇತೃತ್ವದಲ್ಲಿ ಮನೆ ಹಂಚಿಕೆ

ಈಗ ವಸತಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದು, ಬೃಹತ್ ವೇದಿಕೆ, ಜನರಿಗಾಗಿ ಬಸ್ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಅನೇಕ ವರ್ಷಗಳಿಂದ ಸ್ವಂತ ಮನೆ ಕನಸು ಕಂಡಿದ್ದ ಸಾವಿರಾರು ಕುಟುಂಬಗಳಿಗೆ ಇದು ಹೊಸ ಜೀವನದ ಆರಂಭವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ