AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕಾಂತ್ ಪೂಜಾರಿ ಬಂಧನ ಕೇಸ್​​: ಆರ್​ ಅಶೋಕ್‌ ಸೇರಿ ಬಿಜೆಪಿಯ 43 ಮುಖಂಡರ ವಿರುದ್ಧ ದೂರು

ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷನಾಯಕ ಆರ್​​. ಅಶೋಕ್‌, ಉಪನಾಯಕ ಅರವಿಂದ ಬೆಲ್ಲದ್​, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಬಿಜೆಪಿಯ 43 ಮುಖಂಡರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗೆ ಕಾಂಗ್ರೆಸ್ ನಿಯೋಗದಿಂದ ದೂರು ನೀಡಲಾಗಿದೆ.

ಶ್ರೀಕಾಂತ್ ಪೂಜಾರಿ ಬಂಧನ ಕೇಸ್​​: ಆರ್​ ಅಶೋಕ್‌ ಸೇರಿ ಬಿಜೆಪಿಯ 43 ಮುಖಂಡರ ವಿರುದ್ಧ ದೂರು
ವಿಪಕ್ಷನಾಯಕ ಆರ್. ಅಶೋಕ್‌
ಶಿವಕುಮಾರ್ ಪತ್ತಾರ್
| Edited By: |

Updated on: Jan 04, 2024 | 7:50 PM

Share

ಹುಬ್ಬಳ್ಳಿ, ಜನವರಿ 04: ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿಪಕ್ಷನಾಯಕ ಆರ್​​. ಅಶೋಕ್‌ (R Ashok), ಉಪನಾಯಕ ಅರವಿಂದ ಬೆಲ್ಲದ್​, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಬಿಜೆಪಿಯ 43 ಮುಖಂಡರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗೆ ಕಾಂಗ್ರೆಸ್ ನಿಯೋಗದಿಂದ ದೂರು ನೀಡಲಾಗಿದೆ. ಸಿಎಂರ ಜಾತಿ ನಿಂದಿಸಿ ಸಿದ್ರಾಮುಲ್ಲಾಖಾನ್, ಲುಚ್ಚಾ, ಹೇಡಿ ಎಂದಿದ್ದಾರೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಿಯೋಗದಿಂದ ದೂರು ನೀಡಲಾಗಿದೆ.

ನಿನ್ನೆ ಶಹರ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು, ಈ ವೇಳೆ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪ ಕೇಳಿಬಂದಿದೆ.

ಭಯದ ವಾತಾವರಣ ಉಂಟು‌ ಮಾಡಲು ಪ್ರಯತ್ನ: ಅಲ್ತಾಪ್ ಹಳ್ಳೂರ 

ಬಿಜೆಪಿ ವಿರುದ್ದ ದೂರು ಕೊಟ್ಟ ಬಳಿಕ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಪ್ ಹಳ್ಳೂರ ಪ್ರತಿಕ್ರಿಯೆ ನೀಡಿದ್ದು, ಹುಬ್ಬಳ್ಳಿಯಲ್ಲಿ ಬಿಜೆಪಿಯವರು ಭಯದ ವಾತಾವರಣ ಉಂಟು‌ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಆರ್. ಅಶೋಕ ಅವರು ಹಿರಿಯ ನಾಯಕರಾಗಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕದಿರೋದಕ್ಕೆ ನಮ್ಮ ವಿರೋಧ ಇದೆ. ಅವರು ವ್ಯಾಪರಸ್ಥರಿಗೆ ತೊಂದರೆ ಕೊಟ್ಟಿದ್ದಾರೆ. ಹೀಗಾಗಿ ಅವರ ವಿರುದ್ದ ದೂರು ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿ ನಾಳೆಗೆ ಮುಂದೂಡಿಕೆ

ಶ್ರೀಕಾಂತ್ ಪೂಜಾರಿಯನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಬಾರದು. ಶ್ರೀಕಾಂತ್ ಪೂಜಾರಿ ಅಕ್ರಮ ಸರಾಯಿ ಮಾರಾಟ ಮಾಡಿದ್ದಾನೆ. ಇವರೆಲ್ಲ ಅವರಿಗೆ ಸಪೋರ್ಟ್ ಮಾಡಿದ್ದಾರೆ. ಇವರೆಲ್ಲ ಡೋಂಗಿ ರಾಮ ಭಕ್ತರು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭ: ಸುನೀಲ್‍ ಕುಮಾರ್

ಕಾಂಗ್ರೆಸ್ ಕಚೇರಿ ಮೇಲೆ ಹಾಕಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬ್ಯಾನರ್ ಚಾಕುವಿನಿಂದ ಹರಿದು ಹಾಕಿದ್ದಾರೆ. ಅವರ ವಿರುದ್ದವೂ ಹಳೇ‌ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?