AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕಾಂತ್ ಪೂಜಾರಿ ಬಂಧನ ಕೇಸ್​​: ಆರ್​ ಅಶೋಕ್‌ ಸೇರಿ ಬಿಜೆಪಿಯ 43 ಮುಖಂಡರ ವಿರುದ್ಧ ದೂರು

ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷನಾಯಕ ಆರ್​​. ಅಶೋಕ್‌, ಉಪನಾಯಕ ಅರವಿಂದ ಬೆಲ್ಲದ್​, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಬಿಜೆಪಿಯ 43 ಮುಖಂಡರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗೆ ಕಾಂಗ್ರೆಸ್ ನಿಯೋಗದಿಂದ ದೂರು ನೀಡಲಾಗಿದೆ.

ಶ್ರೀಕಾಂತ್ ಪೂಜಾರಿ ಬಂಧನ ಕೇಸ್​​: ಆರ್​ ಅಶೋಕ್‌ ಸೇರಿ ಬಿಜೆಪಿಯ 43 ಮುಖಂಡರ ವಿರುದ್ಧ ದೂರು
ವಿಪಕ್ಷನಾಯಕ ಆರ್. ಅಶೋಕ್‌
ಶಿವಕುಮಾರ್ ಪತ್ತಾರ್
| Edited By: |

Updated on: Jan 04, 2024 | 7:50 PM

Share

ಹುಬ್ಬಳ್ಳಿ, ಜನವರಿ 04: ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿಪಕ್ಷನಾಯಕ ಆರ್​​. ಅಶೋಕ್‌ (R Ashok), ಉಪನಾಯಕ ಅರವಿಂದ ಬೆಲ್ಲದ್​, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಬಿಜೆಪಿಯ 43 ಮುಖಂಡರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗೆ ಕಾಂಗ್ರೆಸ್ ನಿಯೋಗದಿಂದ ದೂರು ನೀಡಲಾಗಿದೆ. ಸಿಎಂರ ಜಾತಿ ನಿಂದಿಸಿ ಸಿದ್ರಾಮುಲ್ಲಾಖಾನ್, ಲುಚ್ಚಾ, ಹೇಡಿ ಎಂದಿದ್ದಾರೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಿಯೋಗದಿಂದ ದೂರು ನೀಡಲಾಗಿದೆ.

ನಿನ್ನೆ ಶಹರ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು, ಈ ವೇಳೆ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪ ಕೇಳಿಬಂದಿದೆ.

ಭಯದ ವಾತಾವರಣ ಉಂಟು‌ ಮಾಡಲು ಪ್ರಯತ್ನ: ಅಲ್ತಾಪ್ ಹಳ್ಳೂರ 

ಬಿಜೆಪಿ ವಿರುದ್ದ ದೂರು ಕೊಟ್ಟ ಬಳಿಕ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಪ್ ಹಳ್ಳೂರ ಪ್ರತಿಕ್ರಿಯೆ ನೀಡಿದ್ದು, ಹುಬ್ಬಳ್ಳಿಯಲ್ಲಿ ಬಿಜೆಪಿಯವರು ಭಯದ ವಾತಾವರಣ ಉಂಟು‌ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಆರ್. ಅಶೋಕ ಅವರು ಹಿರಿಯ ನಾಯಕರಾಗಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕದಿರೋದಕ್ಕೆ ನಮ್ಮ ವಿರೋಧ ಇದೆ. ಅವರು ವ್ಯಾಪರಸ್ಥರಿಗೆ ತೊಂದರೆ ಕೊಟ್ಟಿದ್ದಾರೆ. ಹೀಗಾಗಿ ಅವರ ವಿರುದ್ದ ದೂರು ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿ ನಾಳೆಗೆ ಮುಂದೂಡಿಕೆ

ಶ್ರೀಕಾಂತ್ ಪೂಜಾರಿಯನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಬಾರದು. ಶ್ರೀಕಾಂತ್ ಪೂಜಾರಿ ಅಕ್ರಮ ಸರಾಯಿ ಮಾರಾಟ ಮಾಡಿದ್ದಾನೆ. ಇವರೆಲ್ಲ ಅವರಿಗೆ ಸಪೋರ್ಟ್ ಮಾಡಿದ್ದಾರೆ. ಇವರೆಲ್ಲ ಡೋಂಗಿ ರಾಮ ಭಕ್ತರು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭ: ಸುನೀಲ್‍ ಕುಮಾರ್

ಕಾಂಗ್ರೆಸ್ ಕಚೇರಿ ಮೇಲೆ ಹಾಕಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬ್ಯಾನರ್ ಚಾಕುವಿನಿಂದ ಹರಿದು ಹಾಕಿದ್ದಾರೆ. ಅವರ ವಿರುದ್ದವೂ ಹಳೇ‌ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ