AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ : ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಕೇಂದ್ರ ಸಚಿವ ಜೋಶಿ ಕಾಳಜಿಗೆ ಸಿಎಂ ಬೊಮ್ಮಾಯಿ ಸ್ಪಂದನೆ

ಸಂತ್ರಸ್ತರ ಪರ ಜೋಶಿ ಅವರ ಕಾಳಜಿಗೆ ಸ್ಪಂದಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ : ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಕೇಂದ್ರ ಸಚಿವ ಜೋಶಿ ಕಾಳಜಿಗೆ ಸಿಎಂ ಬೊಮ್ಮಾಯಿ ಸ್ಪಂದನೆ
ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ : ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಕೇಂದ್ರ ಸಚಿವ ಜೋಶಿ ಕಾಳಜಿಗೆ ಸಿಎಂ ಬೊಮ್ಮಾಯಿ ಸ್ಪಂದನೆ
TV9 Web
| Edited By: |

Updated on:Jul 25, 2022 | 2:27 PM

Share

ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ವಲಯದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂತ್ರಸ್ತರಿಗೆ ಕೂಡಲೇ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಾಳಜಿ ವಹಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ (CM Basavaraj Bommai) ದೂರವಾಣಿ ಕರೆ ಮಾಡಿ ಮಾತನಾಡಿದರು. ಈ ವೇಳೆ ಅಗ್ನಿ ಅವಘಡದ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಕೇಂದ್ರ ಸಚಿವರು, ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ನೆರವು ನೀಡುವ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಸಂತ್ರಸ್ತರ ಪರ ಜೋಶಿ ಅವರ ಕಾಳಜಿಗೆ ಸ್ಪಂದಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಈ ದುರ್ಘಟನೆಯ ಬಗ್ಗೆ ತಿಳಿದು ಅಘಾತವಾಯಿತು, ಬೆಂಕಿ ಅವಘಡಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವಘಡದಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬಳಿ ಮಾತಾಡಿದ್ದೇನೆ. ಸಿಎಂ ಕೂಡಲೇ ಈ ಬಗ್ಗೆ ಕ್ರಮವಹಿಸೋದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸ್ಪಂದನೆಗೆ ಧನ್ಯವಾದ ಎಂದು ಪ್ರಲ್ಹಾದ ಜೋಶಿಯವರು ಟ್ವೀಟ್ ಮಾಡಿದ್ದಾರೆ.

Published On - 2:26 pm, Mon, 25 July 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ