AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳಿನಿಂದ ಹಣ ಬಾರದೇ ಗೃಹಲಕ್ಷ್ಮೀಯರು ಕಂಗಾಲು: ಪ್ರತಿದಿನ ಬ್ಯಾಂಕ್​ಗೆ ಅಲೆದು ಸುಸ್ತಾದ ಮಹಿಳೆಯರು

ಕರ್ನಾಟಕದಲ್ಲಿ ಗೃಹಣಿಯರು ಆರ್ಥಿಕವಾಗಿ ಸಭಲರಾಗಬೇಕು ಅನ್ನೋ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದೆ. ಯೋಜನೆಯಲ್ಲಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡ್ತಿದೆ. ಆದ್ರೆ ಪ್ರತಿ ತಿಂಗಳು ಹಣ ಬಾರದೆ ಇರೋದು ಇದೀಗ ಗೃಹಲಕ್ಷ್ಮಿಯರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಕಳೆದ ಮೂರು ತಿಂಗಳಿಂದ ಹಣ ಬಂದಿಲ್ಲವಂತೆ. ಹೀಗಾಗಿ ಆದಷ್ಟು ಬೇಗನೆ ಹಣ ಹಾಕಬೇಕು ಎಂದು ಗೃಹಲಕ್ಷ್ಮಿಯರು ಆಗ್ರಹಿಸುತ್ತಿದ್ದಾರೆ.

3 ತಿಂಗಳಿನಿಂದ ಹಣ ಬಾರದೇ ಗೃಹಲಕ್ಷ್ಮೀಯರು ಕಂಗಾಲು: ಪ್ರತಿದಿನ ಬ್ಯಾಂಕ್​ಗೆ ಅಲೆದು ಸುಸ್ತಾದ ಮಹಿಳೆಯರು
Gruhalakshmi
ಸಂಜಯ್ಯಾ ಚಿಕ್ಕಮಠ
| Edited By: |

Updated on: Jun 26, 2025 | 5:51 PM

Share

ಹುಬ್ಬಳ್ಳಿ, (ಜೂನ್ 26): ರಾಜ್ಯದಲ್ಲಿ ತಾವು ಅಧಿಕಾರಕ್ಕೆ ಬಂದ್ರೆ ಪ್ರತಿಯೊಬ್ಬ ಗೃಹಲಕ್ಷ್ಮಿಯರಿಗೆ ಎರಡು ಸಾವಿರ ಹಣ ನೀಡುವುದಾಗಿ ಕಾಂಗ್ರೆಸ್ (Congress) ನಾಯಕರು ಹೇಳಿದ್ದರು. ಅದರಂತೆ ಅಧಿಕಾರಕ್ಕೆ ಬಂದಮೇಲೆ 2023 ರ ಜುಲೈ ತಿಂಗಳಿಂದ ಈ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Guarantee Scheme )ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಸರಿಸುಮಾರು 1.25 ಕೋಟಿ ಗೃಹಣಿಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಯೋಜನೆಗಾಗಿಯೇ ಕಳೆದ ಬಜೆಟ್ ನಲ್ಲಿ ಸರ್ಕಾರ ಬಜೆಟ್ ನಲ್ಲಿ 28608 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಆದ್ರೆ ಗೃಹಲಕ್ಷ್ಮಿ ಹಣ ಸರಿಯಾಗಿ ಪ್ರತಿ ತಿಂಗಳು ಖಾತೆಗೆ ಜಮೆಯಾಗದಿರುವುದರಿಂದ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಗೃಹಲಕ್ಷ್ಮಿ ಹಣದ ವಿಚಾರವಾಗಿ ವಿರೋಧ ಪಕ್ಷಗಳು ಆಗಾಗ ಸರ್ಕಾರದ ವಿರುದ್ದ ಹರಿಹಾಯುತ್ತಲೇ ಇವೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ ಎಂದು ಆರೋಪಿಸುತ್ತಿವೆ. ಸರ್ಕಾರ ಕೂಡಾ ಸರಿಯಾಗಿ ಹಣ ಹಾಕುತ್ತೇವೆ ಎಂದು ಹೇಳುತ್ತಲೇ ಇದೆ. ಆದ್ರೆ ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮಿಯರಿಗೆ ಹಣ ಬಂದಿಲ್ಲವಂತೆ. ಪ್ರತಿ ತಿಂಗಳು ಹಣ ಜಮೆಯಾಗದಿರುವುದಕ್ಕೆ ಹುಬ್ಬಳ್ಳಿಯಲ್ಲಿ ಫಲಾನುಭವಿಗಳು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಹಿಂದೆ ಸರ್ಕಾರ ಪ್ರತಿ ತಿಂಗಳು ಹಣ ಹಾಕುವುದಾಗಿ ಹೇಳಿತ್ತು. ಆದ್ರೆ ಕಳೆದ ಮೂರು ತಿಂಗಳಿಂದ ನಮ್ಮ ಅಕೌಂಟ್ ಗೆ ಹಣ ಬಂದಿಲ್ಲ. ಹಣ ಬಂದಿದೆ ಎಂದು ಬ್ಯಾಂಕ್ ಗೆ ಹೋಗಿ ಬರುತ್ತಿದ್ದೇವೆ. ಆದ್ರೆ ಬ್ಯಾಂಕ್ ನವರು ಯಾವುದೇ ಹಣ ಜಮೆಯಾಗಿಲ ಎಂದು ಹೇಳುತ್ತಿದ್ದಾರೆ.

ವೃದ್ದರು ಮಾತ್ರೆ ಖರ್ಚಿಗಾಗಿ ಈ ಹಣ ಬಳಸಿದ್ರೆ, ಕೆಲವರು ಮಕ್ಕಳ ಶಾಲೆ ಪೀಸ್ ಕಟ್ಟಲು ಹಣ ಬಳಸಿಕೊಳ್ಳುತ್ತಿದ್ದೇವೆ. ಪ್ರತಿ ತಿಂಗಳು ಮನೆಯ ರೇಷನ್ ಖರ್ಚಿಗೆ ಹಣ ಬಳಕೆ ಆಗ್ತಿತ್ತು. ಆದ್ರೆ ಸರಿಯಾಗಿ ಹಣ ಬಾರದೇ ಇದ್ದಿದ್ದರಿಂದ ಇದೀಗ ಎಲ್ಲದಕ್ಕೂ ತೊಂದರೆಯಾಗಿದೆ. ಹೀಗಾಗಿ ಸರ್ಕಾರ ಪ್ರತಿ ತಿಂಗಳು ಅಕೌಂಟ್ ಗೆ ಹಣ ಜಮೆ ಮಾಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆದಷ್ಟು ಬೇಗನೆ ಹಣ ಹಾಕುವುದಾಗಿ ಪ್ರತಿ ಸಲ ಹೇಳುತ್ತಲೇ ಇದ್ದಾರೆ. ಆದ್ರೆ ಪ್ರತಿ ತಿಂಗಳು ಮಾತ್ರ ಸರಿಯಾಗಿ ಗೃಹಲಕ್ಷ್ಮಿಯರಿಗೆ ಹಣ ಜಮೆಯಾಗುತ್ತಿಲ್ಲ. ಯಾವಾಗ ಬರುತ್ತೆ ಎನ್ನುವುದು ಸಹ ಗ್ಯಾರಂಟಿ ಇಲ್ಲದಂತಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎನ್ನುವುದು ಫಲಾನುಭವಿಗಳ ಆಗ್ರಹವಾಗಿದೆ.

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?