ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಪಕ್ರರಣ: ಕೇಂದ್ರ ಹಾಗೂ ರಾಜ್ಯ ನಾಯಕರಿಗೆ ಪತ್ರ ಬರೆದ ಹುಬ್ಬಳ್ಳಿ ಜನ

ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪಕ್ರರಣ ಕುರಿತು ಹುಬ್ಬಳ್ಳಿ ಜನ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದಾರೆ.

ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಪಕ್ರರಣ: ಕೇಂದ್ರ ಹಾಗೂ ರಾಜ್ಯ ನಾಯಕರಿಗೆ ಪತ್ರ ಬರೆದ ಹುಬ್ಬಳ್ಳಿ ಜನ
ಪತ್ರ (ಎಡಚಿತ್ರ) ಯುವಕ ಸಂದೀಪ್​ (ಬಲಚಿತ್ರ)
Follow us
| Updated By: ವಿವೇಕ ಬಿರಾದಾರ

Updated on: Jul 18, 2023 | 12:41 PM

ಹುಬ್ಬಳ್ಳಿ: ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪಕ್ರರಣ ಕುರಿತು ಹುಬ್ಬಳ್ಳಿ (Hubli) ಜನ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದಾರೆ. ಯುವಕ ಸಂದೀಪ್ ಮೇಲೆ ನಡೆಸಿರುವ ಹಲ್ಲೆ ಮತ್ತು ಹುಬ್ಬಳ್ಳಿ-ಧಾರವಾಡ (Hubli-Dharwad) ಅವಳಿ ನಗರದಲ್ಲಿ‌ ನಡೆಯುತ್ತಿರುವ ಪೈಶಾಚಿಕ‌ ಕೃತ್ಯಗಳ‌ ಕುರಿತು ಎಸ್​.ಆರ್​ ಪಾಟೀಲ್​ ಎಂಬುವರು ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಚಿವ ಪ್ರಹ್ಲಾದ್​ ಜೋಶಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 13 ಜನರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಯುವಕ ಸಂದೀಪ ಪ್ರಕರಣವನ್ನು ರಾಷ್ಟ್ರ ಮಟ್ಟದಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ

ಯುವಕ ಸಂದೀಪ್ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಹುಬ್ಬಳ್ಳಿಗೆ ನಾನೇ ಡಾನ್ ಎಂದು ಎದುರಾಳಿ ಗ್ಯಾಂಗ್​ಗೆ ಸಂದೇಶ ರವಾನೆ ಮಾಡಿದ್ದನು. ಇದರಿಂದ ಸಿಟ್ಟೆಗೆದ್ದ ಪ್ರಜ್ವಲ್ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂದೀಪ್​ನನ್ನು ಗಬ್ಬೂರನಿಂದ ಅಪಹರಿಸಿ ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ ಮಾಡಿದ್ದರು. ಈ ಪ್ರಕರಣ ನಡೆದು ಮೂರು ತಿಂಗಳು ನಂತರ ಜುಲೈ 11 ರಂದು ಪ್ರಕರಣ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ

ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು ಮಾತನಾಡಿ ಎರಡು ವಿಡಿಯೋ ಮೂಲಕ ವಿಷಯ ನಮ್ಮ ಗಮನಕ್ಕೆ ಬಂದಿದೆ. ಆರೋಪಿ ಪ್ರಜ್ವಲ್ ತಾಯಿಗೆ ರೀಲ್ಸ್ ಮೂಲಕ ಸಂದೀಪ್ ಬೈದಿದ್ದನು. ಇನ್​ಸ್ಟಾಗ್ರಾಂ ರೀಲ್ಸ್​ನಲ್ಲಿ ಅತ್ಯಂತ ಕೆಟ್ಟದಾಗಿ ಬೈತಿದ್ದನು. ಮೂರ್ನಾಲ್ಕು ತಿಂಗಳ ಹಿಂದಿನ ಘಟನೆ‌ ಇದಾಗಿದ್ದು, ಈವರೆಗೆ ಸಂದೀಪ್ ದೂರು ಕೊಟ್ಟಿಲ್ಲ. ಅಲ್ಲದೆ, ಹುಬ್ಬಳ್ಳಿಯ ಸೆಟ್ಲಮೆಂಟ್​ನಲ್ಲಿ ನಡೆದ ಘಟನೆ ಎಂಬ ಅನುಮಾನ ಇದೆ ಎಂದಿದ್ದರು. ಹಲ್ಲೆ ಪ್ರಕರಣ ಸಂಬಂಧ ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್, ಮಂಜು ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ