AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಮಟ್ಟದಲ್ಲಿ ಮಿನುಗಿದ ಹುಬ್ಬಳ್ಳಿ ಹುಡುಗಿ: ಜರ್ಮನಿಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಐಶ್ವರ್ಯಾ ಬಾಲೇಹೊಸೂರ್

ಜರ್ಮನಿಯ ಸುಲ್‌ನಲ್ಲಿ ನಡೆದ ISSF ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಹುಬ್ಬಳ್ಳಿಯ ಐಶ್ವರ್ಯಾ ಬಾಲೇಹೊಸೂರ್ 50 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಚಿನ್ನದ ಪದಕ ಕೂದಲೆಳೆ ಅಂತರದಲ್ಲಿ ಕೈತಪ್ಪಿದರೂ, ಐಶ್ವರ್ಯಾ ಅವರ ಸಾಧನೆ ರಾಜ್ಯ ಹಾಗೂ ದೇಶಕ್ಕೆ ಹೆಮ್ಮೆ ತಂದಿದೆ. ಭಾರತ ತಂಡವು ಒಟ್ಟು 25 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ವಿಶ್ವ ಮಟ್ಟದಲ್ಲಿ ಮಿನುಗಿದ ಹುಬ್ಬಳ್ಳಿ ಹುಡುಗಿ: ಜರ್ಮನಿಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಐಶ್ವರ್ಯಾ ಬಾಲೇಹೊಸೂರ್
ಐಶ್ವರ್ಯಾ ಬಾಲೇಹೊಸೂರ್Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on: Jun 26, 2026 | 11:35 AM

Share

ಮುಖ್ಯಾಂಶಗಳು

  • ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌
  • ಭಾರತವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಹುಬ್ಬಳ್ಳಿಯ ಶೂಟರ್ ಐಶ್ವರ್ಯಾ ರವಿಚಂದ್ರ
  • ಭರ್ಜರಿ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ

ಹುಬ್ಬಳ್ಳಿ, ಜೂ.26: ಜರ್ಮನಿಯ ಸುಲ್ ನಗರದಲ್ಲಿ ನಡೆದ ಐಎಸ್‌ಎಸ್‌ಎಫ್ (ISSF) ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌ನ 50 ಮೀಟರ್ ಪಿಸ್ತೂಲ್ ವೈಯಕ್ತಿಕ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಹುಬ್ಬಳ್ಳಿಯ ಶೂಟರ್ ಐಶ್ವರ್ಯಾ ರವಿಚಂದ್ರ ಬಾಲೇಹೊಸೂರ್ (Aishwarya Balehosur) ಭರ್ಜರಿ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಅತ್ಯಂತ ರೋಮಾಂಚನಕಾರಿಯಾಗಿದ್ದ ಫೈನಲ್ ಪಂದ್ಯದಲ್ಲಿ ಕೂದಲೆಳೆ ಅಂತರದಲ್ಲಿ ಅವರಿಗೆ ಚಿನ್ನದ ಪದಕ ಕೈತಪ್ಪಿದೆ.  ಈ ಬಗ್ಗೆ ಡೆಕ್ಕನ್ ಹೆರಾಲ್ಡ್ ವರದಿಯನ್ನು ಮಾಡಿದೆ.

6ನೇ ಹಾಗೂ ಅಂತಿಮ ಸುತ್ತಿನ ಮುಕ್ತಾಯದ ವೇಳೆಗೆ ಐಶ್ವರ್ಯಾ ಮತ್ತು ರಷ್ಯಾದ ತಟಸ್ಥ ಅಥ್ಲೀಟ್ ಸೋಫಿಯಾ ಸ್ಮೆಟಾಂಕಿನಾ ಇಬ್ಬರೂ 540 ಅಂಕಗಳ ಸಮಾನ ಸ್ಕೋರ್ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದರು. ಆದರೆ, ನಿಖರವಾಗಿ ಗುರಿ ಇಟ್ಟ ಹೊಡೆದಿರುವ ಲೆಕ್ಕಾಚಾರದಲ್ಲಿ ರಷ್ಯಾದ ಶೂಟರ್ 12 ಬಾರಿ ಗುರಿ ತಲುಪಿದ್ದರೆ, ಐಶ್ವರ್ಯಾ 11 ಬಾರಿ ಮಾತ್ರ ಯಶಸ್ವಿಯಾಗಿದ್ದರು. ಕೇವಲ ಒಂದು ಇನ್ನರ್-10 ಶಾಟ್ ಕೊರತೆಯಿಂದಾಗಿ ಐಶ್ವರ್ಯಾ ಅವರಿಗೆ ಬೆಳ್ಳಿ ಪದಕ ಒಲಿದರೆ, ರಷ್ಯಾದ ಸೋಫಿಯಾ ಚಿನ್ನದ ಪದಕ ಗೆದ್ದುಕೊಂಡರು. ಇದೇ ಸ್ಪರ್ಧೆಯಲ್ಲಿ ಮಂಗೋಲಿಯಾದ ಅರಿಯುಂಜಯ ಅಮರಬಯಾಸ್ಗಲನ್ ಕಂಚಿನ ಪದಕ ಪಡೆದಿದ್ದಾರೆ.

ಇದನ್ನೂ ಓದಿ: ಒಲಿಂಪಿಕ್ಸ್​ನಲ್ಲಿ ಚಿನ್ನ ಗೆಲ್ಲುವುದು ನನ್ನ ಗುರಿ; ಟಿವಿ9 ಜೊತೆ ಯುವ ಟೆನಿಸ್ ಆಟಗಾರ್ತಿ ಸೃಷ್ಟಿ ಕಿರಣ್ ಮಾತು

ಸ್ಪರ್ಧೆಯ ಆರಂಭದಿಂದಲೂ ಅತ್ಯಂತ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಐಶ್ವರ್ಯಾ, ಮೊದಲ ಸುತ್ತಿನಲ್ಲಿಯೇ 90 ಅಂಕ ಗಳಿಸಿ ಭರ್ಜರಿ ಆರಂಭ ಪಡೆದಿದ್ದರು. ನಂತರದ ಸುತ್ತುಗಳಲ್ಲೂ ಸತತವಾಗಿ 90ಕ್ಕೂ ಹೆಚ್ಚು ಸ್ಕೋರ್ ಕಾಯ್ದುಕೊಳ್ಳುವ ಮೂಲಕ 5ನೇ ಸುತ್ತಿನವರೆಗೂ ಅಗ್ರಸ್ಥಾನದಲ್ಲಿದ್ದರು. ಭಾರತದ ಇತರ ಶೂಟರ್‌ಗಳಾದ ಪಾರ್ಶಿನಾ ಗುಪ್ತಾ 4ನೇ, ಸಂಸ್ಕೃತಿ ಬಾನಾ 8ನೇ ಮತ್ತು ಸೇಜಲ್ ಕಾಂಬ್ಳೆ 13ನೇ ಸ್ಥಾನ ಪಡೆದರು. ಇನ್ನು ಈ ಜಾಗತಿಕ ಟೂರ್ನಿಯಲ್ಲಿ ಭಾರತ ತಂಡವು ಒಟ್ಟು 7 ಚಿನ್ನ, 8 ಬೆಳ್ಳಿ ಮತ್ತು 10 ಕಂಚು ಸೇರಿ ಒಟ್ಟು 25 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಜಾಗತಿಕವಾಗಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಕಳೆದ ಫೆಬ್ರವರಿಯಷ್ಟೇ 18ನೇ ವಸಂತಕ್ಕೆ ಕಾಲಿಟ್ಟ ಐಶ್ವರ್ಯಾ ಅವರಿಗೆ ಶೂಟಿಂಗ್ ಕಲೆ ಹುಟ್ಟಿನಿಂದಲ್ಲೇ ಬಂದಿದೆ. ಅವರ ತಂದೆ ರವಿಚಂದ್ರ ಬಾಲೇಹೊಸೂರ್ ಅವರು ರಾಷ್ಟ್ರೀಯ ಮಟ್ಟದಲ್ಲಿ ‘ಸರ್ವಿಸಸ್’ ತಂಡವನ್ನು ಪ್ರತಿನಿಧಿಸಿದ್ದ ಖ್ಯಾತ ಶೂಟರ್ ಆಗಿದ್ದಾರೆ. ರವಿಚಂದ್ರ ಮತ್ತು ಅವರ ಸಹೋದರ ಶಿವಾನಂದ ಅವರು ಹುಬ್ಬಳ್ಳಿಯಲ್ಲಿ ನಡೆಸುತ್ತಿರುವ ಶೂಟಿಂಗ್ ಅಕಾಡೆಮಿಯಲ್ಲೇ ಐಶ್ವರ್ಯಾ ಕಠಿಣ ತರಬೇತಿ ಪಡೆದಿದ್ದಾರೆ.

ಈ ಹಿಂದೆ 2023ರಲ್ಲಿ ಕೇವಲ 15 ವರ್ಷದ ಪ್ರಾಯದಲ್ಲೇ ಭೋಪಾಲ್‌ನಲ್ಲಿ ನಡೆದ ಸೀನಿಯರ್ ನ್ಯಾಷನಲ್ಸ್‌ನ 50 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಚಿನ್ನ ಗೆದ್ದು ದೇಶದ ಗಮನ ಸೆಳೆದಿದ್ದ ಐಶ್ವರ್ಯಾ, ಈ ವರ್ಷ ದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ನಡೆದ ರಾಷ್ಟ್ರೀಯ ಸೀನಿಯರ್ ಶೂಟಿಂಗ್‌ನಲ್ಲಿ ಕಂಚು ಗೆದ್ದು ಅಂತರರಾಷ್ಟ್ರೀಯ ಕ್ವಾಲಿಫಿಕೇಶನ್ ಪಡೆದಿದ್ದರು. ಹುಬ್ಬಳ್ಳಿಯ ಈ ಯುವತಿಯ ಜಾಗತಿಕ ಸಾಧನೆಗೆ ಇಡೀ ಕರ್ನಾಟಕದಾದ್ಯಂತ ಭಾರಿ ಶ್ಲಾಘನೆ ವ್ಯಕ್ತವಾಗುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ