AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ವಾಟ್ಸಪ್ ಕಾಲ್​​ನಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಹಣಕ್ಕೆ ಬೇಡಿಕೆ; ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ

ಫೇಸಬುಕ್ ಮೂಲಕ  ಹುಬ್ಬಳ್ಳಿ(Hubballi) ಮೂಲದ ವ್ಯಕ್ತಿಗೆ ಪರಿಚಯವಾಗಿ ಬಳಿಕ ವಾಟ್ಸಪ್​ನಲ್ಲಿ‌ ಚಾಟ್ ಮಾಡಿದ್ದ ಗ್ಯಾಂಗ್, ವಿಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡು ಬೆತ್ತಲೆ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ನಿಮ್ಮ ವಿಡಿಯೋ ವಿವಿಧ ವೆಬ್​ಸೈಟ್​ನಲ್ಲಿ ಓಡಾಡುತ್ತಿದೆ ಎಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಹೆದರಿ ಫೋನ್ ಪೇ ಹಾಗೂ RTGS ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಹುಬ್ಬಳ್ಳಿ: ವಾಟ್ಸಪ್ ಕಾಲ್​​ನಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಹಣಕ್ಕೆ ಬೇಡಿಕೆ; ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ
ಸಂತ್ರಸ್ಥ ಯುವಕ
ಶಿವಕುಮಾರ್ ಪತ್ತಾರ್
| Edited By: |

Updated on:Nov 23, 2023 | 4:57 PM

Share

ಹುಬ್ಬಳ್ಳಿ, ನ.23: ವಾಟ್ಸಪ್ ಕಾಲ್​ನಲ್ಲಿ ಹುಬ್ಬಳ್ಳಿ(Hubballi) ಮೂಲದ ದತ್ತಾತ್ರೇಯ ಎಂಬುವವರಿಗೆ ಅಶ್ಲೀಲ ವಿಡಿಯೋ ಕಳಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದೆ. ಮರ್ಯಾದೆಗೆ ಹೆದರಿ ಬರೊಬ್ಬರಿ 2 ಲಕ್ಷದ 40 ಸಾವಿರ ಕಳೆದುಕೊಂಡಿದ್ದಾರೆ. ಫೇಸಬುಕ್ ಮೂಲಕ  ವ್ಯಕ್ತಿಗೆ ಪರಿಚಯವಾಗಿ ಬಳಿಕ ವಾಟ್ಸಪ್​ನಲ್ಲಿ‌ ಚಾಟ್ ಮಾಡಿದ್ದ ಗ್ಯಾಂಗ್, ವಿಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡು ಬೆತ್ತಲೆ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ನಿಮ್ಮ ವಿಡಿಯೋ ವಿವಿಧ ವೆಬ್​ಸೈಟ್​ನಲ್ಲಿ ಓಡಾಡುತ್ತಿದೆ ಎಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಹೆದರಿ ಫೋನ್ ಪೇ ಹಾಗೂ RTGS ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಹಣಕ್ಕೆ ಪೀಡಿಸುತ್ತಿರೋ ಹಿನ್ನಲೆ ದೂರು ದಾಖಲು

ಮರ್ಯಾದೆಗೆ ಹೆದರಿ ಬರೋಬ್ಬರಿ ಲಕ್ಷಾಂತರ ರೂಪಾಯಿ ಹಣ ನೀಡಿದರೂ, ಮತ್ತಷ್ಟು ಹಣಕ್ಕೆ ಪೀಡಿಸುತ್ತಿದ್ದರಂತೆ. ಈ ಹಿನ್ನಲೆ ಅವರ ಕಾಟ ತಡೆಯಲಾರದೇ ಇಂದು(ನ.23) ಸಂತ್ರಸ್ಥ ದತ್ತಾತ್ರೇಯ ಅವರು ಹುಬ್ಬಳ್ಳಿ ಕಸಾಬಾಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಶನಿವಾರ ವಾಟ್ಸಪ್ ಚಾಟ್ ಮಾಡಿದ್ದ ಗ್ಯಾಂಗ್, ಹಣಕ್ಕೆ ಬೇಡಿಕೆ ಇಟ್ಟಿತ್ತಂತೆ. ಹೀಗಾಗಿ ಮರ್ಯಾದೆಗೆ ಹೆದರಿ ತಾಯಿ ಚಿಕಿತ್ಸಗೆ ಇಟ್ಟಿರುವ ಹಣವನ್ನೇ ಹಂತ ಹಂತವಾಗಿ ಪೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ:ಸ್ತ್ರೀರೋಗ ತಜ್ಞೆ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ.. ಅಶ್ಲೀಲ ವಿಡಿಯೋ ಕಳಿಸಿ ಎಂದ ಕಿರಾತಕರು!

ಇನ್ನು ಇದೆ ನ.4 ರಂದು ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ ಬರೊಬ್ಬರಿ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹಿಳೆ ಬೆಂಗಳೂರು ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ ತನಗೆ ಮೋಸ ಮಾಡಿದ್ದಾರೆ ಎಂದು ಉದ್ಯಮಿ ನೀಲಿಮಾ ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಇಂತಹ ಸಾಲು ಸಾಲು ಪ್ರಕರಣಗಳು ದಾಖಲಾಗುತ್ತಿದ್ದರೂ ಕೇಸ್​ಗಳ ಸಂಖ್ಯೆ ನಿಲ್ಲುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Thu, 23 November 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ