AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ವಾಟ್ಸಪ್ ಕಾಲ್​​ನಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಹಣಕ್ಕೆ ಬೇಡಿಕೆ; ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ

ಫೇಸಬುಕ್ ಮೂಲಕ  ಹುಬ್ಬಳ್ಳಿ(Hubballi) ಮೂಲದ ವ್ಯಕ್ತಿಗೆ ಪರಿಚಯವಾಗಿ ಬಳಿಕ ವಾಟ್ಸಪ್​ನಲ್ಲಿ‌ ಚಾಟ್ ಮಾಡಿದ್ದ ಗ್ಯಾಂಗ್, ವಿಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡು ಬೆತ್ತಲೆ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ನಿಮ್ಮ ವಿಡಿಯೋ ವಿವಿಧ ವೆಬ್​ಸೈಟ್​ನಲ್ಲಿ ಓಡಾಡುತ್ತಿದೆ ಎಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಹೆದರಿ ಫೋನ್ ಪೇ ಹಾಗೂ RTGS ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಹುಬ್ಬಳ್ಳಿ: ವಾಟ್ಸಪ್ ಕಾಲ್​​ನಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಹಣಕ್ಕೆ ಬೇಡಿಕೆ; ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ
ಸಂತ್ರಸ್ಥ ಯುವಕ
ಶಿವಕುಮಾರ್ ಪತ್ತಾರ್
| Edited By: |

Updated on:Nov 23, 2023 | 4:57 PM

Share

ಹುಬ್ಬಳ್ಳಿ, ನ.23: ವಾಟ್ಸಪ್ ಕಾಲ್​ನಲ್ಲಿ ಹುಬ್ಬಳ್ಳಿ(Hubballi) ಮೂಲದ ದತ್ತಾತ್ರೇಯ ಎಂಬುವವರಿಗೆ ಅಶ್ಲೀಲ ವಿಡಿಯೋ ಕಳಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದೆ. ಮರ್ಯಾದೆಗೆ ಹೆದರಿ ಬರೊಬ್ಬರಿ 2 ಲಕ್ಷದ 40 ಸಾವಿರ ಕಳೆದುಕೊಂಡಿದ್ದಾರೆ. ಫೇಸಬುಕ್ ಮೂಲಕ  ವ್ಯಕ್ತಿಗೆ ಪರಿಚಯವಾಗಿ ಬಳಿಕ ವಾಟ್ಸಪ್​ನಲ್ಲಿ‌ ಚಾಟ್ ಮಾಡಿದ್ದ ಗ್ಯಾಂಗ್, ವಿಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡು ಬೆತ್ತಲೆ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ನಿಮ್ಮ ವಿಡಿಯೋ ವಿವಿಧ ವೆಬ್​ಸೈಟ್​ನಲ್ಲಿ ಓಡಾಡುತ್ತಿದೆ ಎಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಹೆದರಿ ಫೋನ್ ಪೇ ಹಾಗೂ RTGS ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಹಣಕ್ಕೆ ಪೀಡಿಸುತ್ತಿರೋ ಹಿನ್ನಲೆ ದೂರು ದಾಖಲು

ಮರ್ಯಾದೆಗೆ ಹೆದರಿ ಬರೋಬ್ಬರಿ ಲಕ್ಷಾಂತರ ರೂಪಾಯಿ ಹಣ ನೀಡಿದರೂ, ಮತ್ತಷ್ಟು ಹಣಕ್ಕೆ ಪೀಡಿಸುತ್ತಿದ್ದರಂತೆ. ಈ ಹಿನ್ನಲೆ ಅವರ ಕಾಟ ತಡೆಯಲಾರದೇ ಇಂದು(ನ.23) ಸಂತ್ರಸ್ಥ ದತ್ತಾತ್ರೇಯ ಅವರು ಹುಬ್ಬಳ್ಳಿ ಕಸಾಬಾಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಶನಿವಾರ ವಾಟ್ಸಪ್ ಚಾಟ್ ಮಾಡಿದ್ದ ಗ್ಯಾಂಗ್, ಹಣಕ್ಕೆ ಬೇಡಿಕೆ ಇಟ್ಟಿತ್ತಂತೆ. ಹೀಗಾಗಿ ಮರ್ಯಾದೆಗೆ ಹೆದರಿ ತಾಯಿ ಚಿಕಿತ್ಸಗೆ ಇಟ್ಟಿರುವ ಹಣವನ್ನೇ ಹಂತ ಹಂತವಾಗಿ ಪೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ:ಸ್ತ್ರೀರೋಗ ತಜ್ಞೆ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ.. ಅಶ್ಲೀಲ ವಿಡಿಯೋ ಕಳಿಸಿ ಎಂದ ಕಿರಾತಕರು!

ಇನ್ನು ಇದೆ ನ.4 ರಂದು ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ ಬರೊಬ್ಬರಿ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹಿಳೆ ಬೆಂಗಳೂರು ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ ತನಗೆ ಮೋಸ ಮಾಡಿದ್ದಾರೆ ಎಂದು ಉದ್ಯಮಿ ನೀಲಿಮಾ ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಇಂತಹ ಸಾಲು ಸಾಲು ಪ್ರಕರಣಗಳು ದಾಖಲಾಗುತ್ತಿದ್ದರೂ ಕೇಸ್​ಗಳ ಸಂಖ್ಯೆ ನಿಲ್ಲುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Thu, 23 November 23

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!