AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ವಾಟ್ಸಪ್ ಕಾಲ್​​ನಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಹಣಕ್ಕೆ ಬೇಡಿಕೆ; ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ

ಫೇಸಬುಕ್ ಮೂಲಕ  ಹುಬ್ಬಳ್ಳಿ(Hubballi) ಮೂಲದ ವ್ಯಕ್ತಿಗೆ ಪರಿಚಯವಾಗಿ ಬಳಿಕ ವಾಟ್ಸಪ್​ನಲ್ಲಿ‌ ಚಾಟ್ ಮಾಡಿದ್ದ ಗ್ಯಾಂಗ್, ವಿಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡು ಬೆತ್ತಲೆ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ನಿಮ್ಮ ವಿಡಿಯೋ ವಿವಿಧ ವೆಬ್​ಸೈಟ್​ನಲ್ಲಿ ಓಡಾಡುತ್ತಿದೆ ಎಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಹೆದರಿ ಫೋನ್ ಪೇ ಹಾಗೂ RTGS ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಹುಬ್ಬಳ್ಳಿ: ವಾಟ್ಸಪ್ ಕಾಲ್​​ನಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಹಣಕ್ಕೆ ಬೇಡಿಕೆ; ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ
ಸಂತ್ರಸ್ಥ ಯುವಕ
Follow us
ಶಿವಕುಮಾರ್ ಪತ್ತಾರ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 23, 2023 | 4:57 PM

ಹುಬ್ಬಳ್ಳಿ, ನ.23: ವಾಟ್ಸಪ್ ಕಾಲ್​ನಲ್ಲಿ ಹುಬ್ಬಳ್ಳಿ(Hubballi) ಮೂಲದ ದತ್ತಾತ್ರೇಯ ಎಂಬುವವರಿಗೆ ಅಶ್ಲೀಲ ವಿಡಿಯೋ ಕಳಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದೆ. ಮರ್ಯಾದೆಗೆ ಹೆದರಿ ಬರೊಬ್ಬರಿ 2 ಲಕ್ಷದ 40 ಸಾವಿರ ಕಳೆದುಕೊಂಡಿದ್ದಾರೆ. ಫೇಸಬುಕ್ ಮೂಲಕ  ವ್ಯಕ್ತಿಗೆ ಪರಿಚಯವಾಗಿ ಬಳಿಕ ವಾಟ್ಸಪ್​ನಲ್ಲಿ‌ ಚಾಟ್ ಮಾಡಿದ್ದ ಗ್ಯಾಂಗ್, ವಿಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡು ಬೆತ್ತಲೆ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ನಿಮ್ಮ ವಿಡಿಯೋ ವಿವಿಧ ವೆಬ್​ಸೈಟ್​ನಲ್ಲಿ ಓಡಾಡುತ್ತಿದೆ ಎಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಹೆದರಿ ಫೋನ್ ಪೇ ಹಾಗೂ RTGS ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಹಣಕ್ಕೆ ಪೀಡಿಸುತ್ತಿರೋ ಹಿನ್ನಲೆ ದೂರು ದಾಖಲು

ಮರ್ಯಾದೆಗೆ ಹೆದರಿ ಬರೋಬ್ಬರಿ ಲಕ್ಷಾಂತರ ರೂಪಾಯಿ ಹಣ ನೀಡಿದರೂ, ಮತ್ತಷ್ಟು ಹಣಕ್ಕೆ ಪೀಡಿಸುತ್ತಿದ್ದರಂತೆ. ಈ ಹಿನ್ನಲೆ ಅವರ ಕಾಟ ತಡೆಯಲಾರದೇ ಇಂದು(ನ.23) ಸಂತ್ರಸ್ಥ ದತ್ತಾತ್ರೇಯ ಅವರು ಹುಬ್ಬಳ್ಳಿ ಕಸಾಬಾಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಶನಿವಾರ ವಾಟ್ಸಪ್ ಚಾಟ್ ಮಾಡಿದ್ದ ಗ್ಯಾಂಗ್, ಹಣಕ್ಕೆ ಬೇಡಿಕೆ ಇಟ್ಟಿತ್ತಂತೆ. ಹೀಗಾಗಿ ಮರ್ಯಾದೆಗೆ ಹೆದರಿ ತಾಯಿ ಚಿಕಿತ್ಸಗೆ ಇಟ್ಟಿರುವ ಹಣವನ್ನೇ ಹಂತ ಹಂತವಾಗಿ ಪೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ:ಸ್ತ್ರೀರೋಗ ತಜ್ಞೆ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ.. ಅಶ್ಲೀಲ ವಿಡಿಯೋ ಕಳಿಸಿ ಎಂದ ಕಿರಾತಕರು!

ಇನ್ನು ಇದೆ ನ.4 ರಂದು ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ ಬರೊಬ್ಬರಿ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹಿಳೆ ಬೆಂಗಳೂರು ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ ತನಗೆ ಮೋಸ ಮಾಡಿದ್ದಾರೆ ಎಂದು ಉದ್ಯಮಿ ನೀಲಿಮಾ ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಇಂತಹ ಸಾಲು ಸಾಲು ಪ್ರಕರಣಗಳು ದಾಖಲಾಗುತ್ತಿದ್ದರೂ ಕೇಸ್​ಗಳ ಸಂಖ್ಯೆ ನಿಲ್ಲುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Thu, 23 November 23

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್