AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ? ಮಹತ್ವದ ಸುಳಿವು ಲಭ್ಯ

ನೇಹಾ ಮಾದರಿಯಲ್ಲಿ ‌ನಡೆದ ಅಂಜಲಿ‌ ಹತ್ಯಗೆ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಚ್ಚಿ ಬಿದ್ದಿದೆ. ಪೊಲೀಸರ ನಿರ್ಲಕ್ಷ್ಯದಿಂದ ಅಂಜಲಿ ಕೊಲೆಯಾಗಿದೆ ಎನ್ನುವ ಗಂಭೀರ ಆರೋಪದ ನಡುವೆ, ಇವತ್ತು ಅಂಜಲಿ ‌ಕೊಲೆ ಖಂಡಿಸಿ ಬಿಜೆಪಿ ಬೀದಿಗಳಿದಿತ್ತು.ಕೊಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಿದ್ರೆ, ಇತ್ತ ಸ್ವಾಮೀಜಿಗಳು ಮೃತ ಅಂಜಲಿ ‌ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ‌ಹೇಳಿದರು. ಇನ್ನು ಈಗಾಗಲೇ ಹಂತಕನ ಹತ್ತೆಗೆ ಎರಡು ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. 

ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ? ಮಹತ್ವದ ಸುಳಿವು ಲಭ್ಯ
ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ
Follow us
ಶಿವಕುಮಾರ್ ಪತ್ತಾರ್
| Updated By: ಕಿರಣ್ ಹನುಮಂತ್​ ಮಾದಾರ್

Updated on: May 16, 2024 | 4:02 PM

ಹುಬ್ಬಳ್ಳಿ, ಮೇ.16: ವಾಣಿಜ್ಯ ‌ನಗರಿ ಹುಬ್ಬಳ್ಳಿ(Hubli)ಯಲ್ಲಿ ನಿನ್ನೆ(ಮೇ.15) ಬೆಳಗಿನ‌ ಜಾವ ನೇಹಾ ಮಾದರಿಯಲ್ಲಿಯೇ ನಗರದ ವೀರಾಪೂರ ಓಣಿಯಲ್ಲಿ ಅಂಜಲಿ(Anjali) ಅಂಬಿಗೇರ ಎಂಬ ಯುವತಿ ಹತ್ಯೆಯಾಗಿತ್ತು. ಕೊಲೆ ಮಾಡಲು‌ ಹಂತಕ ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಆಟೋದಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದಾ‌ನೆ. ಹಂತಕ ಆಟೋದಲ್ಲಿ ಬಂದಿರೋ ದ್ರಶ್ಯಗಳ ಜೊತೆಗೆ ಕೊಲೆ ಬಳಿಕ ಆತ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ ದೃಶ್ಯಗಳು ಕೂಡ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿ ಶಿವಮೊಗ್ಗಕ್ಕೇ ತೆರಳಿದನಾ? ಎಂಬ ಅನುಮಾನ ವ್ಯಕ್ತವಾಗಿದೆ.

ಅಂಜಲಿ ಕೊಲೆ ಮಾಡಿದ ನಂತರ ಶಿವಮೊಗ್ಗಕ್ಕೇ ತೆರಳಿದನಾ ವಿಶ್ವ..?

ವೀರಾಪುರ ಓಣಿಯಲ್ಲಿ ಅಂಜಲಿಯನ್ನು ಕೊಲೆ ಮಾಡಲು ಆಟೋದಲ್ಲಿ ಬಂದಿದ್ದ ಆರೋಪಿ ವಿಶ್ವ, ಬೆಳಗಿನ ಜಾವ 5.30 ರ ಸುಮಾರಿಗೆ ಕೊಲೆ ಮಾಡಿದ ನಂತರ ಅಲ್ಲಿಂದ ಆಟೋವನ್ನ ಬಿಟ್ಟು ಭಯದಿಂದಲೇ ಗೋಕುಲ್ ರಸ್ತೆಯಲ್ಲಿನ ಹೊಸ ಬಸ್ ನಿಲ್ದಾಣಕ್ಕೆ ಓಡಿ ಹೋಗಿದ್ದ. ಅಲ್ಲಿ ವಿಶ್ವನಿಗೆ ಎಲ್ಲಿಗೆ ಹೋಗಬೇಕು ಎಂಬ ಅರಿವು ಇಲ್ಲದೇ ಬಸ್ ನಿಲ್ದಾಣದಲ್ಲಿಯೇ ಸುತ್ತಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಶಿವಮೊಗ್ಗ ಬಸ್​ಗಳು ನಿಲ್ಲುವ ಜಾಗದಲ್ಲಿ ಈತ ಸುತ್ತಾಡುತ್ತಿದ್ದ. ಈ ಹಿನ್ನಲೆ ಶಿವಮೊಗ್ಗಕ್ಕೇ ತೆರಳಿರಬಹುದು ಎಂಬ ಮಾಹಿತಿಯನ್ನು ಆಧರಿಸಿ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ:ನೇಹಾ, ಅಂಜಲಿ ಕೊಲೆ ಆರೋಪಿಗಳನ್ನ ಎನ್ ಕೌಂಟರ್‌ ಮಾಡ್ಬೇಕು- ದಿಂಗಾಲೇಶ್ವರ ಸ್ವಾಮೀಜಿ

ಒಟ್ಟಾರೆ ಒಂದು ತಿಂಗಳ ಅವಧಿಯಲ್ಲಿ ‌ನಡೆದ ನೇಹಾ ಅಂಜಲಿ‌ ಕೊಲೆ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದಂತೂ ನಿಜ. ಸರ್ಕಾರದ ವಿರುದ್ದ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಮೇಲ್ನೋಟಕ್ಕೆ ಪೊಲೀಸರ ನಿರ್ಲಕ್ಷ್ಯ ಕಂಡು‌ಬಂದಿರೋ ಕಾರಣ ಬೆಂಡಿಗೇರಿ ‌ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿ.ಬಿ ಚಿಕ್ಕೋಡಿ ಹಾಗೂ ಮಹಿಳಾ ಪೇದೆಯನ್ನು ಅಮಾನತ್ತು‌ ಮಾಡಿದ್ದಾರೆ. ಆದ್ರೆ, ಕೊಲೆಯಾಗಿ 48 ಗಂಟೆ ಕಳೆದರೂ ಆರೋಪಿ ಬಂಧನವಾಗದೆ ಇರೋದು ಆಕ್ರೋಶಕ್ಕೆ ಗುರಿಯಾಗಿದೆ. ನಾಳೆ(ಮೇ.17) ಕೂಡ ಹುಬ್ಬಳ್ಳಿಯಲ್ಲಿ ಮಠಾಧೀಪತಿಗಳು ಹೋರಾಟ ಹಮ್ಮಿಕೊಂಡಿದ್ದು, ಅಂಜಲಿ‌ ಕೊಲೆ ಕೇಸ್ ಇನ್ಯಾವ ತಿರುವು ಪಡೆದುಕೊಳ್ಳತ್ತದೆ ಎಂದು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ