AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ? ಮಹತ್ವದ ಸುಳಿವು ಲಭ್ಯ

ನೇಹಾ ಮಾದರಿಯಲ್ಲಿ ‌ನಡೆದ ಅಂಜಲಿ‌ ಹತ್ಯಗೆ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಚ್ಚಿ ಬಿದ್ದಿದೆ. ಪೊಲೀಸರ ನಿರ್ಲಕ್ಷ್ಯದಿಂದ ಅಂಜಲಿ ಕೊಲೆಯಾಗಿದೆ ಎನ್ನುವ ಗಂಭೀರ ಆರೋಪದ ನಡುವೆ, ಇವತ್ತು ಅಂಜಲಿ ‌ಕೊಲೆ ಖಂಡಿಸಿ ಬಿಜೆಪಿ ಬೀದಿಗಳಿದಿತ್ತು.ಕೊಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಿದ್ರೆ, ಇತ್ತ ಸ್ವಾಮೀಜಿಗಳು ಮೃತ ಅಂಜಲಿ ‌ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ‌ಹೇಳಿದರು. ಇನ್ನು ಈಗಾಗಲೇ ಹಂತಕನ ಹತ್ತೆಗೆ ಎರಡು ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. 

ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ? ಮಹತ್ವದ ಸುಳಿವು ಲಭ್ಯ
ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 16, 2024 | 4:02 PM

Share

ಹುಬ್ಬಳ್ಳಿ, ಮೇ.16: ವಾಣಿಜ್ಯ ‌ನಗರಿ ಹುಬ್ಬಳ್ಳಿ(Hubli)ಯಲ್ಲಿ ನಿನ್ನೆ(ಮೇ.15) ಬೆಳಗಿನ‌ ಜಾವ ನೇಹಾ ಮಾದರಿಯಲ್ಲಿಯೇ ನಗರದ ವೀರಾಪೂರ ಓಣಿಯಲ್ಲಿ ಅಂಜಲಿ(Anjali) ಅಂಬಿಗೇರ ಎಂಬ ಯುವತಿ ಹತ್ಯೆಯಾಗಿತ್ತು. ಕೊಲೆ ಮಾಡಲು‌ ಹಂತಕ ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಆಟೋದಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದಾ‌ನೆ. ಹಂತಕ ಆಟೋದಲ್ಲಿ ಬಂದಿರೋ ದ್ರಶ್ಯಗಳ ಜೊತೆಗೆ ಕೊಲೆ ಬಳಿಕ ಆತ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ ದೃಶ್ಯಗಳು ಕೂಡ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿ ಶಿವಮೊಗ್ಗಕ್ಕೇ ತೆರಳಿದನಾ? ಎಂಬ ಅನುಮಾನ ವ್ಯಕ್ತವಾಗಿದೆ.

ಅಂಜಲಿ ಕೊಲೆ ಮಾಡಿದ ನಂತರ ಶಿವಮೊಗ್ಗಕ್ಕೇ ತೆರಳಿದನಾ ವಿಶ್ವ..?

ವೀರಾಪುರ ಓಣಿಯಲ್ಲಿ ಅಂಜಲಿಯನ್ನು ಕೊಲೆ ಮಾಡಲು ಆಟೋದಲ್ಲಿ ಬಂದಿದ್ದ ಆರೋಪಿ ವಿಶ್ವ, ಬೆಳಗಿನ ಜಾವ 5.30 ರ ಸುಮಾರಿಗೆ ಕೊಲೆ ಮಾಡಿದ ನಂತರ ಅಲ್ಲಿಂದ ಆಟೋವನ್ನ ಬಿಟ್ಟು ಭಯದಿಂದಲೇ ಗೋಕುಲ್ ರಸ್ತೆಯಲ್ಲಿನ ಹೊಸ ಬಸ್ ನಿಲ್ದಾಣಕ್ಕೆ ಓಡಿ ಹೋಗಿದ್ದ. ಅಲ್ಲಿ ವಿಶ್ವನಿಗೆ ಎಲ್ಲಿಗೆ ಹೋಗಬೇಕು ಎಂಬ ಅರಿವು ಇಲ್ಲದೇ ಬಸ್ ನಿಲ್ದಾಣದಲ್ಲಿಯೇ ಸುತ್ತಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಶಿವಮೊಗ್ಗ ಬಸ್​ಗಳು ನಿಲ್ಲುವ ಜಾಗದಲ್ಲಿ ಈತ ಸುತ್ತಾಡುತ್ತಿದ್ದ. ಈ ಹಿನ್ನಲೆ ಶಿವಮೊಗ್ಗಕ್ಕೇ ತೆರಳಿರಬಹುದು ಎಂಬ ಮಾಹಿತಿಯನ್ನು ಆಧರಿಸಿ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ:ನೇಹಾ, ಅಂಜಲಿ ಕೊಲೆ ಆರೋಪಿಗಳನ್ನ ಎನ್ ಕೌಂಟರ್‌ ಮಾಡ್ಬೇಕು- ದಿಂಗಾಲೇಶ್ವರ ಸ್ವಾಮೀಜಿ

ಒಟ್ಟಾರೆ ಒಂದು ತಿಂಗಳ ಅವಧಿಯಲ್ಲಿ ‌ನಡೆದ ನೇಹಾ ಅಂಜಲಿ‌ ಕೊಲೆ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದಂತೂ ನಿಜ. ಸರ್ಕಾರದ ವಿರುದ್ದ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಮೇಲ್ನೋಟಕ್ಕೆ ಪೊಲೀಸರ ನಿರ್ಲಕ್ಷ್ಯ ಕಂಡು‌ಬಂದಿರೋ ಕಾರಣ ಬೆಂಡಿಗೇರಿ ‌ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿ.ಬಿ ಚಿಕ್ಕೋಡಿ ಹಾಗೂ ಮಹಿಳಾ ಪೇದೆಯನ್ನು ಅಮಾನತ್ತು‌ ಮಾಡಿದ್ದಾರೆ. ಆದ್ರೆ, ಕೊಲೆಯಾಗಿ 48 ಗಂಟೆ ಕಳೆದರೂ ಆರೋಪಿ ಬಂಧನವಾಗದೆ ಇರೋದು ಆಕ್ರೋಶಕ್ಕೆ ಗುರಿಯಾಗಿದೆ. ನಾಳೆ(ಮೇ.17) ಕೂಡ ಹುಬ್ಬಳ್ಳಿಯಲ್ಲಿ ಮಠಾಧೀಪತಿಗಳು ಹೋರಾಟ ಹಮ್ಮಿಕೊಂಡಿದ್ದು, ಅಂಜಲಿ‌ ಕೊಲೆ ಕೇಸ್ ಇನ್ಯಾವ ತಿರುವು ಪಡೆದುಕೊಳ್ಳತ್ತದೆ ಎಂದು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?