AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಬೊಮ್ಮಾಯಿ ಹೃದಯ ಆರೋಗ್ಯ ಕುರಿತು ಕೀಳು ಅಭಿರುಚಿಯ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಕೋನರಡ್ಡಿ

ಮಾಜಿ ಮುಖ್ಯಮಂತ್ರಿಯ ಅನಾರೋಗ್ಯದ ಕುರಿತು ಸೌಜನ್ಯವನ್ನೇ‌ ಮರೆತು ಕಾಂಗ್ರೆಸ್ ಶಾಸಕ ಮಾತನಾಡಿದರೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ. ಬಹಿರಂಗ ಸಭೆಯಲ್ಲೇ ಬೊಮ್ಮಾಯಿ ಅನಾರೋಗ್ಯದ ಕುರಿತು ಅಪಹಾಸ್ಯ ಮಾಡಿದ್ದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ.

ಹುಬ್ಬಳ್ಳಿ: ಬೊಮ್ಮಾಯಿ ಹೃದಯ ಆರೋಗ್ಯ ಕುರಿತು ಕೀಳು ಅಭಿರುಚಿಯ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಕೋನರಡ್ಡಿ
ಎನ್​​ಎಚ್ ಕೋನರಡ್ಡಿImage Credit source: Facebook
ಶಿವಕುಮಾರ್ ಪತ್ತಾರ್
| Edited By: |

Updated on: Oct 28, 2023 | 3:11 PM

Share

ಹುಬ್ಬಳ್ಳಿ, ಅಕ್ಟೋಬರ್ 28: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಕಾಂಗ್ರೆಸ್ ಶಾಸಕ ಎನ್​​ಎಚ್ ಕೋನರಡ್ಡಿ (NH Konaraddi) ಕೀಳು ಅಭಿರುಚಿಯ ಹೇಳಿಕೆ ನೀಡಿದ್ದು, ವಿವಾದ ಸೃಷ್ಟಿಸುವ ಸಾಧ್ಯತೆ ಇದೆ. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೋನರಡ್ಡಿ, ಮಾಜಿ ಸಿಎಂ‌ ಬಸವರಾಜ ಬೊಮ್ಮಾಯಿ ಅವರ ಕುರಿತು ವ್ಯಂಗ್ಯವಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಾಘಾತ ಆಯಿತು. ಅವರ ಪಕ್ಷದಲ್ಲಿ ಅವರ ವರ್ಚಸ್ಸು ಕಡಿಮೆ ಆಗಿದೆ ಎಂದು ಅವರಿಗೆ ಹಾರ್ಟ್ ಅಟ್ಯಾಕ್ ಆಯ್ತು ಎಂದು ಕೋನರಡ್ಡಿ ಹೇಳಿದ್ದಾರೆ.

ಬಿಜೆಪಿ ಪಕ್ಷ ಅಧೋಗತಿಗೆ ಹೋಗಿರುವುದನ್ನು ನೋಡಿ ಚಿಂತೆ ಮಾಡಿ ಬೊಮ್ಮಾಯಿ ಅವರಿಗೆ ಹಾರ್ಟ್ ಅಟ್ಯಾಕ್ ಆಯ್ತು ಎಂದು ಕೋನರಡ್ಡಿ ವ್ಯಂಗ್ಯವಾಡಿದ್ದಾರೆ.

ಮಾಜಿ ಮುಖ್ಯಮಂತ್ರಿಯ ಅನಾರೋಗ್ಯದ ಕುರಿತು ಸೌಜನ್ಯವನ್ನೇ‌ ಮರೆತು ಕಾಂಗ್ರೆಸ್ ಶಾಸಕ ಮಾತನಾಡಿದರೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ. ಬಹಿರಂಗ ಸಭೆಯಲ್ಲೇ ಬೊಮ್ಮಾಯಿ ಅನಾರೋಗ್ಯದ ಕುರಿತು ಅಪಹಾಸ್ಯ ಮಾಡಿದ್ದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ.

ಇತ್ತೀಚೆಗಷ್ಟೇ ಬಸವರಾಜ ಬೊಮ್ಮಾಯಿ ಅವರು ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಂಡಿನೋವಿನ ಬಾಧೆ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ತಪಾಸಣೆ ನಡೆಸಿದಾಗ ಹೃದಯದ ಕವಾಟಗಳು ಮುಚ್ಚಿಕೊಂಡಿರುವುದು ಪತ್ತೆಯಾಗಿತ್ತು. ನಂತರ ಅವರು ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಮನೆಗೆ ಮರಳಿ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ದೂರವಾಣಿ ಮೂಲಕ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಹಾಗೂ ಇತರ ನಾಯಕರು ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ್ದರು. ಯಡಿಯೂರಪ್ಪ ಮತ್ತು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?