AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, 8ಕ್ಕೇರಿದ ಸಾವಿನ ಸಂಖ್ಯೆ

ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆ ಸೇರಿದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಆರು ಮಂದಿ ಈಗಾಗಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳುಸೋಮವಾರ ರಾತ್ರಿ ಮೃತಪಟ್ಟಿದ್ದು, ಇನ್ನೊಬ್ಬರು ಮಂಗಳವಾರ ನಸುಕಿನಲ್ಲಿ ಅಸುನೀಗಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಹುಬ್ಬಳ್ಳಿ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, 8ಕ್ಕೇರಿದ ಸಾವಿನ ಸಂಖ್ಯೆ
ಪ್ರಕಾಶ ಬಾರಕೇರ ಮೃತಪಟ್ಟಿದ್ದು ಅವರ ಮಗನಿಗೆ ಚಿಕಿತ್ಸೆ ಮುಂದುವರಿದಿದೆ.
ಶಿವಕುಮಾರ್ ಪತ್ತಾರ್
| Edited By: |

Updated on:Dec 31, 2024 | 8:26 AM

Share

ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.

ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಕಿಮ್ಸ್​​ನಲ್ಲಿ ಓರ್ವ ಗಾಯಾಳು ಮಾಲಾಧಾರಿಗೆ ಚಿಕಿತ್ಸೆ ಮುಂದುವರಿದಿದೆ.

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್​ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಚೆಲ್ಲಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಅಯ್ಯಪ್ಪನ ಆಶೀರ್ವಾದದಿಂದ ಮಗ ಬದುಕಿ ಬರಬಹುದು ಎಂದುಕೊಂಡಿದ್ದ ಕುಟುಂಬಕ್ಕೆ ಸಾವಿನ ಸುದ್ದಿಯಿಂದ ಆಕಾಶಾವೇ ತಲೆ ಮೇಲೆ ಕಳಚಿ ಬಿದ್ದಂತಾಗಿದೆ.

ಡಿಸೆಂಬರ್ 22 ರಿಂದ ಕಿಮ್ಸ್ ಆಸ್ಪತ್ರೆಯಲ್ಲಿ ತೇಜಸ್ವರ್​ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕಿಮ್ಸ್ ಆಸ್ಪತ್ರೆಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್​ ಸ್ಫೋಟ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು

ಗಂಭೀರವಾಗಿ ಗಾಯಗೊಂಡಿರುವ 9 ಜನ ಮಾಲಾಧಾರಿಗಳ ಪೈಕಿ ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಬೆಂಕಿಯಲ್ಲಿ ಬೆಂದ ಮಾಲಾಧಾರಿಗಳು ದಿನಕ್ಕೊಬ್ಬರಂತೆ ಪ್ರಾಣ ಬಿಡುತ್ತಿದ್ದು, ಇದೀಗ 8 ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Tue, 31 December 24

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ